AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Egypt Visit: ಪ್ರಧಾನಿ ಮೋದಿಗೆ ಈಜಿಪ್ಟ್​ನಲ್ಲಿ ಆರ್ಡರ್ ಆಫ್ ದಿ ನೈಲ್ ಗೌರವ

ಅಮೆರಿಕದ ಯಶಸ್ವಿ ಪ್ರವಾಸದ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಶನಿವಾರ (ಜೂನ್ 24) ಈಜಿಪ್ಟ್ ತಲುಪಿದರು.

PM Modi Egypt Visit: ಪ್ರಧಾನಿ ಮೋದಿಗೆ ಈಜಿಪ್ಟ್​ನಲ್ಲಿ ಆರ್ಡರ್ ಆಫ್ ದಿ ನೈಲ್ ಗೌರವ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 25, 2023 | 4:17 PM

Share

ಅಮೆರಿಕದ ಯಶಸ್ವಿ ಪ್ರವಾಸದ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಶನಿವಾರ (ಜೂನ್ 24) ಈಜಿಪ್ಟ್ ತಲುಪಿದರು. ಭೇಟಿಯ ಎರಡನೇ ದಿನದಂದು ಅವರಿಗೆ ರಾಜಧಾನಿ ಕೈರೋದಲ್ಲಿ ಈಜಿಪ್ಟ್‌ನ ಅತ್ಯುನ್ನತ ಪ್ರಶಸ್ತಿ ಆರ್ಡರ್​ ಆಫ್​ ದಿ ನೈಲ್ ಅನ್ನು ನೀಡಿ ಗೌರವಿಸಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಪ್ರಧಾನಿ ಮೋದಿಯವರಿಗೆ ಆರ್ಡರ್ ಆಫ್ ದಿ ನೈಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕಳೆದ 9 ವರ್ಷಗಳಲ್ಲಿ ಜಗತ್ತಿನ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡಿದ 13ನೇ ಅತ್ಯುನ್ನತ ರಾಜ್ಯ ಗೌರವ ಇದಾಗಿದೆ. ಇದಕ್ಕೂ ಮುನ್ನ ಇಲ್ಲಿ, ಕೈರೋದಲ್ಲಿರುವ ದೇಶದ 11ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಪ್ರಧಾನಿ ಭೇಟಿ ನೀಡಿದರು, ಇದನ್ನು ಭಾರತದ ದಾವೂದಿ ಬೊಹ್ರಾ ಸಮುದಾಯದ ಸಹಾಯದಿಂದ ಪುನಃಸ್ಥಾಪಿಸಲಾಗಿದೆ.

ಮತ್ತಷ್ಟು ಓದಿ: PM Modi Egypt Visit: ನೀವು ಭಾರತದ ಹೀರೋ, ಕೈರೋದಲ್ಲಿ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಮೋದಿಯವರು ಈಜಿಪ್ಟ್​ ಗ್ರ್ಯಾಂಡ್ ಮುಫ್ತಿ ಶಾಕಿ ಇಬ್ರಾಹಿಂ ಕರೀಮ್ ಅಲ್ಲಂ ಜತೆಗೂ ಕೂಡ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಶಾಕಿ ಇಬ್ರಾಹಿಂ ಅಬ್ದೆಲ್ ಕರೀಂ ಅಲ್ಲಂ ಅವರು ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದೇನೆ, ಅವರು ಭಾರತದಲ್ಲಿ ಉತ್ತಮ ನೀತಿಗಳ ಮೂಲಕ ದೇಶವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ, ಭಾರತದಂತಹ ಬೃಹತ್ ರಾಷ್ಟ್ರಕ್ಕೆ ಮೋದಿ ಉತ್ತಮ ನಾಯಕರಾಗಿದ್ದಾರೆ, ಹೀಗಾಗಿಯೇ ಭಾರತ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಗ್ರ್ಯಾಂಡ್ ಮುಫ್ತಿ ಹೇಳಿದ್ದಾರೆ.

ಪ್ರವಾಸದ ಮೊದಲ ದಿನದಂದು ಪ್ರಧಾನಿ ಮೋದಿ ಅವರು ಈಜಿಪ್ಟ್ ಪ್ರಧಾನಿ ಮುಸ್ತಫಾ ಮದ್ಬೌಲಿ ಅವರನ್ನು ರಾಜಧಾನಿ ಕೈರೋದಲ್ಲಿ ಭೇಟಿಯಾದರು. ಮುಸ್ತಫಾ ಮದ್ಬೌಲಿ ಅವರು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ