AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Egypt Visit: ನೀವು ಭಾರತದ ಹೀರೋ, ಕೈರೋದಲ್ಲಿ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಈಜಿಪ್ಟ್​(Egypt)ನಲ್ಲಿ ತಮ್ಮ ಎರಡು ದಿನಗಳ ಭೇಟಿಯನ್ನು ಆರಂಭಿಸುತ್ತಿದ್ದಂತೆ ಅಲ್ಲಿರುವ ಭಾರತೀಯ ಸಮುದಾಯದ ಸದಸ್ಯರು ಅವರನ್ನು ಭಾರತದ ಹೀರೋ ಎಂದು ಶ್ಲಾಘಿಸಿದರು.

PM Modi Egypt Visit: ನೀವು ಭಾರತದ ಹೀರೋ, ಕೈರೋದಲ್ಲಿ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 25, 2023 | 8:55 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಈಜಿಪ್ಟ್​(Egypt)ನಲ್ಲಿ ತಮ್ಮ ಎರಡು ದಿನಗಳ ಭೇಟಿಯನ್ನು ಆರಂಭಿಸುತ್ತಿದ್ದಂತೆ ಅಲ್ಲಿರುವ ಭಾರತೀಯ ಸಮುದಾಯದ ಸದಸ್ಯರು ಅವರನ್ನು ಭಾರತದ ಹೀರೋ ಎಂದು ಶ್ಲಾಘಿಸಿದರು. 26 ವರ್ಷಗಳಲ್ಲಿ ಈಜಿಪ್ಟ್‌ಗೆ ದ್ವಿಪಕ್ಷೀಯ ಭೇಟಿ ನೀಡಿದ ಮೊದಲ ಪ್ರಧಾನಿ ಮೋದಿಯವರಿಗೆ ರಿಟ್ಜ್ ಕಾರ್ಲ್‌ಟನ್ ಹೋಟೆಲ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು, ಅಲ್ಲಿ ಅವರು ಪ್ರತ್ಯೇಕ ಗುಂಪುಗಳಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದರು. ಅಮೆರಿಕ ಕಾಂಗ್ರೆಸ್‌ನಲ್ಲಿ ಪ್ರಧಾನಿ ಮಾಡಿದ ಭಾಷಣ ಮತ್ತು ಅವರ ನಾಯಕತ್ವದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಹೆಚ್ಚಿನ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ನೀವು ಭಾರತದ ಹೀರೋ ಎಂದು ಭಾರತೀಯ ಡಯಾಸ್ಪೊರಾ ಸದಸ್ಯರೊಬ್ಬರು ಮೋದಿಯವರಿಗೆ ಹೇಳಿದರು. ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ವಿದೇಶದಲ್ಲಿ ವಾಸಿಸುವವರು ಸೇರಿದಂತೆ ಪ್ರತಿಯೊಬ್ಬ ಭಾರತೀಯರ ಪ್ರಯತ್ನಗಳು ದೇಶದ ಯಶಸ್ಸಿಗೆ ಕಾರಣವಾಗಿವೆ ಎಂದು ಹೇಳಿದರು.

ಮತ್ತಷ್ಟು ಓದಿ: ಕೈರೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಐತಿಹಾಸಿಕ ಮಸೀದಿಯೊಳಗೊಂದು ಸುತ್ತು

ಶನಿವಾರ ಈಜಿಪ್ಟ್‌ಗೆ ತಮ್ಮ ಚೊಚ್ಚಲ ರಾಜ್ಯ ಪ್ರವಾಸವನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಲಸಿಗರು ಮತ್ತು ಬೋಹ್ರಾ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದರು. ಭಾರತದ ದಾವೂದಿ ಬೊಹ್ರಾ ಸಮುದಾಯದ ಸಹಾಯದಿಂದ ಪುನಃಸ್ಥಾಪಿಸಲಾದ ಕೈರೋದ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಭಾನುವಾರ ಭೇಟಿ ನೀಡಿದ್ದಾರೆ.

ನಾನು ಕಳೆದ 27 ವರ್ಷಗಳಿಂದ ಈಜಿಪ್ಟ್‌ನಲ್ಲಿ ವಾಸಿಸುತ್ತಿದ್ದೇನೆ ಮತ್ತು ಬೋಹ್ರಾ ಸಮುದಾಯಕ್ಕೆ ಸೇರಿದ್ದೇನೆ. ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗುವುದು ಒಂದು ವಿಶಿಷ್ಟ ಅನುಭವವಾಗಿದೆ. ಪ್ರಧಾನಿ ನಮ್ಮ ಸಮುದಾಯದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. . ನಮ್ಮ ಪ್ರಧಾನಿ ನಮ್ಮನ್ನು ಭೇಟಿಯಾಗಲು ಇಲ್ಲಿಗೆ ಬಂದಿದ್ದಕ್ಕೆ ನನಗೆ ಹೆಮ್ಮೆ ಅನಿಸುತ್ತದೆ ಎಂದು ಭಾರತೀಯ ವಲಸಿಗರೊಬ್ಬರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?