AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾನ್ಸ್​​ ಅಧ್ಯಕ್ಷರಿಗೆ ಶ್ರೀಗಂಧದ ಸಿತಾರ್ ಉಡುಗೊರೆ ನೀಡಿದ ಪ್ರಧಾನಿ ಮೋದಿ; ಇತರ ಗಣ್ಯರಿಗೂ ವಿಶಿಷ್ಟ ಉಡುಗೊರೆ

ಫ್ರಾನ್ಸ್‌ನ ಪ್ರಧಾನ ಮಂತ್ರಿ ಎಲಿಜಬೆತ್ ಬೋರ್ನ್ ಅವರಿಗೆ ಮಾರ್ಬಲ್ ಇನ್ಲೇ ವರ್ಕ್ ಟೇಬಲ್ ಅನ್ನು ಮೋದಿ ಉಡುಗೊರೆಯಾಗಿ ನೀಡಿದರು. ಇದು ಮಾರ್ಬಲ್‌ನಲ್ಲಿ ಮಾಡಿದ ಅತ್ಯಂತ ಆಕರ್ಷಕ ಕಲಾಕೃತಿಗಳಲ್ಲಿ ಒಂದಾಗಿದೆ.

ಫ್ರಾನ್ಸ್​​ ಅಧ್ಯಕ್ಷರಿಗೆ ಶ್ರೀಗಂಧದ ಸಿತಾರ್ ಉಡುಗೊರೆ ನೀಡಿದ ಪ್ರಧಾನಿ ಮೋದಿ; ಇತರ ಗಣ್ಯರಿಗೂ ವಿಶಿಷ್ಟ ಉಡುಗೊರೆ
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಸ್ಯಾಂಡಲ್ ವುಡ್ ಸಿತಾರ್ ಉಡುಗೊರೆ ನೀಡಿದ ಪ್ರಧಾನಿ ನರೇಂದ್ರ ಮೋದಿImage Credit source: ANI
Ganapathi Sharma
|

Updated on: Jul 15, 2023 | 12:13 AM

Share

ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಅವರಿಗೆ ಶ್ರೀಗಂಧದ ಸಿತಾರ್ ಅನ್ನು ಉಡುಗೊರೆಯಾಗಿ ನೀಡಿದರು. ಜತೆಗೆ ಫ್ರೆಂಚ್ ಅಧ್ಯಕ್ಷರ ಪತ್ನಿ, ಫ್ರಾನ್ಸ್ ಪ್ರಧಾನಿ, ಫ್ರೆಂಚ್ ಸೆನೆಟ್ ಅಧ್ಯಕ್ಷರು ಮತ್ತು ಫ್ರೆಂಚ್ ರಾಷ್ಟ್ರೀಯ ಅಸೆಂಬ್ಲಿಯ ಅಧ್ಯಕ್ಷರಿಗೆ ವಿಶಿಷ್ಟ ಉಡುಗೊರೆಗಳನ್ನು ನೀಡಿದರು. ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ನೀಡಿದ ಸಿತಾರ್ ಅನ್ನು ಶುದ್ಧ ಶ್ರೀಗಂಧದ ಮರದಿಂದ ಮಾಡಲಾಗಿದೆ. ಶ್ರೀಗಂಧದ ಕೆತ್ತನೆಯ ಕಲೆಯು ಒಂದು ಸೊಗಸಾದ ಮತ್ತು ಪ್ರಾಚೀನ ಕರಕುಶಲವಾಗಿದ್ದು, ಇದು ಶತಮಾನಗಳಿಂದ ದಕ್ಷಿಣ ಭಾರತದಲ್ಲಿ ಅಸ್ತಿತ್ವದಲ್ಲಿದೆ.

ಮೋದಿ ನೀಡಿರುವ ವಿಭಿನ್ನ ಉಡುಗೊರೆಯು ಸಿತಾರ್ (ವೀಣೆ) ಎಂಬ ಸಂಗೀತ ವಾದ್ಯವನ್ನು ಹಿಡಿದಿರುವ ಜ್ಞಾನ, ಸಂಗೀತ, ಕಲೆ, ಮಾತು, ಬುದ್ಧಿವಂತಿಕೆ ಮತ್ತು ಕಲಿಕೆಯ ಆರಾಧ್ಯ ದೇವತೆಯಾದ ಸರಸ್ವತಿ ದೇವಿಯ ಚಿತ್ರಗಳನ್ನು ಹೊಂದಿದೆ. ಜೊತೆಗೆ ವಿಘ್ನ ನಿವಾರಕ ಗಣೇಶನ ಚಿತ್ರಣವನ್ನು ಹೊಂದಿದೆ. ಇದರ ತುಣುಕನ್ನು ಭಾರತದ ರಾಷ್ಟ್ರೀಯ ಪಕ್ಷಿ ನವಿಲಿನ ಚಿತ್ರ ಮತ್ತು ಭಾರತೀಯ ಸಂಸ್ಕೃತಿಯ ಅಸಂಖ್ಯಾತ ಲಕ್ಷಣಗಳನ್ನು ಪ್ರತಿಬಿಂಬಿಸುವ ಸಂಕೀರ್ಣ ಕೆತ್ತನೆಗಳಿಂದ ಅಲಂಕರಿಸಲಾಗಿದೆ.

ಅಧ್ಯಕ್ಷರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್‌ಗೆ ಸ್ಯಾಂಡಲ್‌ವುಡ್ ಬಾಕ್ಸ್‌ನಲ್ಲಿ ಪೋಚಂಪಲ್ಲಿ ಇಕಾತ್ ಅನ್ನು ಉಡುಗೊರೆಯಾಗಿ ನೀಡಲಾಯಿತು. ತೆಲಂಗಾಣದ ಪೋಚಂಪಲ್ಲಿ ಪಟ್ಟಣದಿಂದ ಬಂದಿರುವ ಪೋಚಂಪಲ್ಲಿ ರೇಷ್ಮೆ ಇಕಾತ್ ಬಟ್ಟೆಯು ಭಾರತದ ಶ್ರೀಮಂತ ಜವಳಿ ಪರಂಪರೆಗೆ ಸಾಕ್ಷಿಯಾಗಿದೆ. ಅದರ ಸಂಕೀರ್ಣ ವಿನ್ಯಾಸಗಳು ಮತ್ತು ರೋಮಾಂಚಕ ಬಣ್ಣಗಳಿಗೆ ಹೆಸರುವಾಸಿಯಾಗಿದೆ, ಪೋಚಂಪಲ್ಲಿ ರೇಷ್ಮೆ ಇಕತ್ ಸೀರೆಯು ಭಾರತದ ಸೌಂದರ್ಯ, ಕರಕುಶಲತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಆವರಿಸುತ್ತದೆ. ಇಕಾತ್ ರೇಷ್ಮೆ ಬಟ್ಟೆಯನ್ನು ಅಲಂಕಾರಿಕ ಶ್ರೀಗಂಧದ ಪೆಟ್ಟಿಗೆಯಲ್ಲಿ ಇಟ್ಟು ಉಡುಗೊರೆ ನೀಡಲಾಯಿತು.

ಫ್ರಾನ್ಸ್‌ನ ಪ್ರಧಾನ ಮಂತ್ರಿ ಎಲಿಜಬೆತ್ ಬೋರ್ನ್ ಅವರಿಗೆ ಮಾರ್ಬಲ್ ಇನ್ಲೇ ವರ್ಕ್ ಟೇಬಲ್ ಅನ್ನು ಮೋದಿ ಉಡುಗೊರೆಯಾಗಿ ನೀಡಿದರು. ಇದು ಮಾರ್ಬಲ್‌ನಲ್ಲಿ ಮಾಡಿದ ಅತ್ಯಂತ ಆಕರ್ಷಕ ಕಲಾಕೃತಿಗಳಲ್ಲಿ ಒಂದಾಗಿದೆ. ಮೂಲ ಅಮೃತಶಿಲೆಯು ಉತ್ತಮ ಗುಣಮಟ್ಟದ ಅಮೃತಶಿಲೆಗೆ ಹೆಸರುವಾಸಿಯಾದ ರಾಜಸ್ಥಾನದ ಪಟ್ಟಣವಾದ ಮಕ್ರಾನಾದಲ್ಲಿ ಕಂಡುಬರುತ್ತದೆ.

ಇದನ್ನೂ ಓದಿ: PM Modi in France: ಫ್ರಾನ್ಸ್​​​ನಲ್ಲಿ ಗೌರವ ಅತಿಥಿಯಾಗಿ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಫ್ರೆಂಚ್ ಸೆನೆಟ್ ಅಧ್ಯಕ್ಷ ಗೆರಾರ್ಡ್ ಲಾರ್ಚರ್ ಅವರಿಗೆ ಶ್ರೀಗಂಧದ ಮರದಿಂದ ಕೆತ್ತಿದ ಆನೆ ಅಂಬಾವರಿಯನ್ನು ಉಡುಗೊರೆಯಾಗಿ ಮೋದಿ ನೀಡಿದರು.

ಕೈಯಿಂದ ಹೆಣೆದ ಕಾಶ್ಮೀರಿ ರೇಷ್ಮೆ ರತ್ನಗಂಬಳಿಗಳನ್ನು ಫ್ರೆಂಚ್ ರಾಷ್ಟ್ರೀಯ ಅಸೆಂಬ್ಲಿಯ ಅಧ್ಯಕ್ಷ ಯಾಲ್ ಬ್ರಾನ್-ಪಿವೆಟ್ ಅವರಿಗೆ ಉಡುಗೊರೆಯಾಗಿ ನೀಡಲಾಯಿತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್