ಟ್ರಿನಿಡಾಡ್ ಪ್ರಧಾನಿ ಕಮಲಾಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ಕೊಟ್ಟ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi)  ಗುರುವಾರ ಟ್ರಿನಿಡಾಡ್ ಹಾಗೂ ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಧಾನಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್​ಗೆ ಮಹಾಕುಂಭದಿಂದ ತಂದ ಪವಿತ್ರ ಜಲ ಹಾಗೂ ರಾಮ ಮಂದಿರ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಹಾರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು.

ಟ್ರಿನಿಡಾಡ್ ಪ್ರಧಾನಿ ಕಮಲಾಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ಕೊಟ್ಟ ಮೋದಿ
ನರೇಂದ್ರ ಮೋದಿ, ಕಮಲಾ ಪ್ರಸಾದ್

Updated on: Jul 04, 2025 | 10:42 AM

ಟ್ರಿನಿಡಾಡ್, ಜುಲೈ 04: ಪ್ರಧಾನಿ ನರೇಂದ್ರ ಮೋದಿ(Narendra Modi)  ಗುರುವಾರ ಟ್ರಿನಿಡಾಡ್ ಹಾಗೂ ಟೊಬಾಗೋಗೆ ಭೇಟಿ ನೀಡಿದ್ದಾರೆ. ಅಲ್ಲಿನ ಪ್ರಧಾನಿ ಕಮಲಾ ಪ್ರಸಾದ್ ಬಿಸ್ಸೆಸ್ಸರ್​ಗೆ ಮಹಾಕುಂಭದಿಂದ ತಂದ ಪವಿತ್ರ ಜಲ ಹಾಗೂ ರಾಮ ಮಂದಿರ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಹಾರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು.

ಭಾರತೀಯ ವಲಸಿಗರ ಧೈರ್ಯವನ್ನು ಶ್ಲಾಘಿಸಿದರು ಮತ್ತು ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರನ್ನು “ಬಿಹಾರದ ಮಗಳು” ಎಂದು ಕರೆದರು, ರಾಜ್ಯದೊಂದಿಗಿನ ಅವರ ಪೂರ್ವಜರ ಸಂಬಂಧಗಳನ್ನು ನೆನಪಿಸಿಕೊಂಡರು. ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರ ಪೂರ್ವಜರು ಬಿಹಾರದ ಬಕ್ಸಾರ್‌ನಲ್ಲಿ ವಾಸಿಸುತ್ತಿದ್ದರು. ಕಮಲಾ ಅವರು ಬಿಹಾರಕ್ಕೆ ಭೇಟಿ ನೀಡಿದ್ದಾರೆ.

ಜನರು ಅವರನ್ನು ಬಿಹಾರದ ಮಗಳು ಎಂದು ಪರಿಗಣಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಮಹಾಕುಂಭ ಮೇಳೆ ನಡೆದಿತ್ತು. ಸರಯು ನದಿ ಮತ್ತು ಮಹಾಕುಂಭದ ಪವಿತ್ರ ನೀರನ್ನು ಇಲ್ಲಿನ ಗಂಗಾ ಧಾರೆಗೆ ಅರ್ಪಿಸಲು ಕಮಲಾ ಬಳಿ ಕೇಳಿದರು. 2012 ರಲ್ಲಿ ಬಕ್ಸಾರ್ ಜಿಲ್ಲೆಯ ಇತಾರ್ಹಿ ಬ್ಲಾಕ್‌ನ ಅಡಿಯಲ್ಲಿರುವ ತಮ್ಮ ಪೂರ್ವಜರ ಗ್ರಾಮವಾದ ಭೇಲುಪುರಕ್ಕೆ ಭೇಟಿ ನೀಡಿದ್ದರು.

ಮತ್ತಷ್ಟು ಓದಿ: ಟ್ರಿನಿಡಾಡ್ ಮತ್ತು ಟೊಬಾಗೋದ ಮೊದಲ ಮಹಿಳಾ ಪ್ರಧಾನಿ ಕಮಲಾಗೂ ಭಾರತಕ್ಕೂ ಏನು ನಂಟು?

ಪ್ರಧಾನಿ ಮೋದಿಯನ್ನು ಕರೆದೊಯ್ಯಲು ಕಮಲಾ ತಮ್ಮ 38 ಸಚಿವರ ಜತೆ ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ಇದು ಪ್ರಧಾನಿಯಾಗಿ ಮೋದಿ ಅವರ ಮೊದಲ ಭೇಟಿ ಮತ್ತು 1999 ರ ನಂತರ ಕೆರಿಬಿಯನ್ ರಾಷ್ಟ್ರಕ್ಕೆ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆದಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:40 am, Fri, 4 July 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us