AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಸಿಲಿಯಾದಲ್ಲಿ ಪ್ರಧಾನಿ ಮೋದಿಗೆ 144 ಕುದುರೆಗಳ ಅದ್ದೂರಿ ಸ್ವಾಗತ

ಬ್ರೆಸಿಲಿಯಾದಲ್ಲಿನ ಅಲ್ವೊರಾಡಾ ಅರಮನೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ 114 ಕುದುರೆಗಳ ಅದ್ದೂರಿ ಸ್ವಾಗತ ನೀಡಲಾಗಿದೆ. ಜುಲೈ 6-7ರಂದು ರಿಯೊ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಮೋದಿ ಅವರು ಬ್ರೆಸಿಲಿಯಾಕ್ಕೆ ಆಗಮಿಸಿದರು. ಪ್ರಧಾನಿ ಮೋದಿಗೆ ಬ್ರೆಜಿಲ್‌ನಲ್ಲಿ 114 ಕುದುರೆಗಳ ಅದ್ದೂರಿ ಸ್ವಾಗತ ದೊರೆಯಿತು. ಭಾರತ-ಬ್ರೆಜಿಲ್ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ. 57 ವರ್ಷಗಳಲ್ಲಿ ಬ್ರೆಜಿಲ್​ಗೆ ರಾಜ್ಯ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾದರು.

ಬ್ರೆಸಿಲಿಯಾದಲ್ಲಿ ಪ್ರಧಾನಿ ಮೋದಿಗೆ 144 ಕುದುರೆಗಳ ಅದ್ದೂರಿ ಸ್ವಾಗತ
Modi In Brasilia
ಸುಷ್ಮಾ ಚಕ್ರೆ
|

Updated on: Jul 08, 2025 | 9:30 PM

Share

ನವದೆಹಲಿ, ಜುಲೈ 8: ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಇಂದು (ಮಂಗಳವಾರ) ಬ್ರೆಜಿಲ್ ಅಧ್ಯಕ್ಷರ ಅಧಿಕೃತ ನಿವಾಸವಾದ ಅಲ್ವೊರಾಡಾ ಅರಮನೆಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಭಾರತದ ಪಾಲಿಗೆ ಇದು ಐತಿಹಾಸಿಕ ಕ್ಷಣವಾಗಿದೆ. 57 ವರ್ಷಗಳಲ್ಲಿ ಬ್ರೆಜಿಲ್‌ಗೆ ರಾಜ್ಯ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಬ್ರೆಜಿಲ್ ರಾಜಧಾನಿ ಬ್ರೆಸಿಲಿಯಾಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು 114 ಕುದುರೆಗಳನ್ನು ಒಳಗೊಂಡ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ಇದು ವಿರಳವಾಗಿ ನೀಡಲಾಗುವ ಗೌರವವಾಗಿದೆ. ಇದು ಬ್ರೆಜಿಲ್​ಗೆ ಭೇಟಿ ನೀಡುವ ಬೇರೆ ದೇಶದ ನಾಯಕನ ಬಗ್ಗೆ ಹೊಂದಿರುವ ಮೆಚ್ಚುಗೆಯ ಸಂಕೇತವಾಗಿದೆ.

ಪ್ರಧಾನಿ ಮೋದಿ ಸೋಮವಾರ ಸಂಜೆ (ಸ್ಥಳೀಯ ಸಮಯ) ಬ್ರೆಜಿಲ್‌ಗೆ ತಮ್ಮ ಅಧಿಕೃತ ಭೇಟಿಗಾಗಿ ಬ್ರೆಸಿಲಿಯಾಕ್ಕೆ ಆಗಮಿಸಿದರು. ಬ್ರೆಜಿಲ್‌ನ ರಕ್ಷಣಾ ಸಚಿವ ಜೋಸ್ ಮ್ಯೂಸಿಯೊ ಮಾಂಟೆರೊ ಫಿಲ್ಹೋ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಾಂಪ್ರದಾಯಿಕ ಬ್ರೆಜಿಲಿಯನ್ ಸಾಂಬಾ ರೆಗ್ಗೇ ಪ್ರದರ್ಶನ ನೀಡಿದ ಕಲಾವಿದರನ್ನು ಮೋದಿ ಶ್ಲಾಘಿಸಿದರು.

ಇದನ್ನೂ ಓದಿ: ವೈಯಕ್ತಿಕ, ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯನ್ನು ಮೌನವಾಗಿ ಬೆಂಬಲಿಸುವುದು ತಪ್ಪು: ಮೋದಿ

ಜುಲೈ 6ರಿಂದ 7ರವರೆಗೆ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯ ನಂತರ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಬ್ರೆಜಿಲ್‌ಗೆ ಭೇಟಿ ನೀಡಿದ್ದಾರೆ. ಅವರ ಭೇಟಿಯು ಬ್ರಿಕ್ಸ್ ಚೌಕಟ್ಟಿನ ಅಡಿಯಲ್ಲಿ ಭಾರತ-ಬ್ರೆಜಿಲ್ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು