AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ

ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಕೆಲವೇ ಗಂಟೆಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಅವರ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಬರಮಾಡಿಕೊಂಡರು. ವಿಮಾನ ಇಳಿಯುತ್ತಿದ್ದಂತೆ ಯುಎಇ ಅಧ್ಯಕ್ಷರಿಗೆ ಬಿಗಿಯಾದ ಅಪ್ಪುಗೆ ನೀಡಿ ಸ್ವಾಗತಿಸಿದ ಪ್ರಧಾನಿ ಮೋದಿ ಬಳಿಕ ತಮ್ಮ ಕಾರಿನಲ್ಲಿಯೇ ಅವರನ್ನು ಕರೆದುಕೊಂಡು ಹೋಗುವ ಮೂಲಕ ಮತ್ತೊಮ್ಮೆ ಕಾರು ರಾಜತಾಂತ್ರಿತೆಯಿಂದ ಗಮನ ಸೆಳೆದಿದ್ದಾರೆ.

ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
Pm Modi With Uae President
ಸುಷ್ಮಾ ಚಕ್ರೆ
|

Updated on: Jan 19, 2026 | 6:31 PM

Share

ನವದೆಹಲಿ, ಜನವರಿ 19: ಇಂದು ಭಾರತಕ್ಕೆ ಭೇಟಿ ನೀಡಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಅಪ್ಪುಗೆಯ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಭಾರತೀಯ ಸಾಂಪ್ರದಾಯಿಕ ನೃತ್ಯ, ಡೋಲು ವಾದ್ಯಗಳ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಲಾಯಿತು.

ಯುಎಇ ಅಧ್ಯಕ್ಷರು ಕೇವಲ 2 ಗಂಟೆಗಳ ಕಾಲ ದೆಹಲಿಯಲ್ಲಿ ಇರಲಿದ್ದು, ನಂತರ ವಾಪಾಸ್ ತೆರಳಲಿದ್ದಾರೆ ಎನ್ನಲಾಗಿದೆ. ಇರಾನ್-ಯುಎಸ್ ಸಂಬಂಧಗಳು ಹದಗೆಟ್ಟಿರುವುದು, ಗಾಜಾದಲ್ಲಿ ನಡೆಯುತ್ತಿರುವ ಅಸ್ಥಿರತೆ, ಸೌದಿ ಅರೇಬಿಯಾ ಮತ್ತು ಯುಎಇ ಒಳಗೊಂಡ ಯೆಮೆನ್‌ನಲ್ಲಿ ಬಗೆಹರಿಯದ ಸಂಘರ್ಷದಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಈ ಸಮಯದಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಇಂದು ಸಂಜೆ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷರು ದೆಹಲಿಯ ಪ್ರಧಾನಿ ನಿವಾಸದಲ್ಲಿ ವಿಶೇಷವಾದ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆಯ ಸಮಯದಲ್ಲಿ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಮತ್ತು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮುಂದೆ 10 ಸಾವಿರ ಕಲಾವಿದರಿಂದ ಬಾಗುರುಂಬಾ ನೃತ್ಯ ಪ್ರದರ್ಶನ

ನನ್ನ ಸಹೋದರರಾದ ಯುಎಇ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ದೆಹಲಿ ವಿಮಾನ ನಿಲ್ದಾಣಕ್ಕೆ ಹೋಗಿದ್ದೆ. ಅವರ ಭೇಟಿ ಅವರು ಭಾರತ-ಯುಎಇ ಸ್ನೇಹಕ್ಕೆ ನೀಡುವ ಮಹತ್ವವನ್ನು ತೋರಿಸುತ್ತದೆ. ನಮ್ಮ ಚರ್ಚೆಗಳಿಗಾಗಿ ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಯುಎಇ ಅಧ್ಯಕ್ಷರಾದ ನಂತರ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡುತ್ತಿರುವ ಮೂರನೇ ಅಧಿಕೃತ ಭೇಟಿ ಇದಾಗಿದೆ. ಒಟ್ಟಾರೆಯಾಗಿ, ಭಾರತಕ್ಕೆ ಇದು ಅವರ 5ನೇ ಭೇಟಿ. ಇರಾನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಗಳು 5,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ನಂತರ ಉದ್ವಿಗ್ನತೆ ಹೆಚ್ಚಿರುವ ಬೆನ್ನಲ್ಲೇ ಅಲ್ ನಹ್ಯಾನ್ ಭಾರತಕ್ಕೆ ಇಂದು ಭೇಟಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?