AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Singapore Visit: 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 2018ರಲ್ಲಿ ಸಿಂಗಾಪುರಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದರು. ಇದೀಗ ಅವರ ಇಂದಿನ ಸಿಂಗಾಪುರ ಭೇಟಿಯು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ 10ನೇ ವಾರ್ಷಿಕೋತ್ಸವದ ಮೊದಲು ಬಂದಿದೆ. ಸಿಂಗಾಪುರ ಭಾರತದ ಪ್ರಮುಖ ಮಿತ್ರರಾಷ್ಟ್ರಗಳಲ್ಲಿ ಒಂದಾಗಿದೆ ಮತ್ತು ಭಾರತದ ಆರನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದೆ.

PM Modi Singapore Visit: 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on: Sep 04, 2024 | 2:43 PM

Share

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದರು. ಬ್ರೂನೆಯಲ್ಲಿ ತಮ್ಮ ಎರಡು ದಿನಗಳ ಪ್ರವಾಸವನ್ನು ಮುಗಿಸಿದ ನಂತರ ಇಂದು ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಸಿಂಗಾಪುರಕ್ಕೆ ಬಂದಿದ್ದಾರೆ.

ಚಾಂಗಿ ವಿಮಾನ ನಿಲ್ದಾಣದಲ್ಲಿ ಮೋದಿ ಅವರಿಗೆ ಅಧಿಕೃತ ಸ್ವಾಗತ ದೊರೆಯಿತು. ವಾಂಗ್ ಅವರನ್ನು ಭೇಟಿ ಮಾಡುವುದರ ಹೊರತಾಗಿ, ನರೇಂದ್ರ ಮೋದಿ ಅವರು ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಹಿರಿಯ ಸಚಿವರಾದ ಲೀ ಸೀನ್ ಲೂಂಗ್ ಮತ್ತು ಹಿರಿಯ ಸಚಿವ ಗೋ ಚೋಕ್ ಟಾಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ವಾಂಗ್ ಮತ್ತು ಲೀ ಮೋದಿಯವರಿಗೆ ಪ್ರತ್ಯೇಕ ಊಟದ ಮೂಲಕ ಆತಿಥ್ಯ ನೀಡಲಿದ್ದಾರೆ.

ಇದನ್ನೂ ಓದಿ: Paralympics 2024: ಭಾರತೀಯರ ಐತಿಹಾಸಿಕ ಸಾಧನೆ: ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

“ಸಿಂಗಾಪೂರ್‌ಗೆ ಬಂದಿಳಿದಿದೆ. ಭಾರತ-ಸಿಂಗಾಪುರದ ಸ್ನೇಹವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಸಭೆಗಳನ್ನು ಎದುರು ನೋಡುತ್ತಿದ್ದೇವೆ. ಭಾರತದ ಸುಧಾರಣೆಗಳು ಮತ್ತು ನಮ್ಮ ಯುವ ಶಕ್ತಿಯ ಪ್ರತಿಭೆಯು ನಮ್ಮ ರಾಷ್ಟ್ರವನ್ನು ಆದರ್ಶ ಹೂಡಿಕೆಯ ತಾಣವನ್ನಾಗಿ ಮಾಡುತ್ತದೆ. ನಾವು ನಿಕಟ ಸಾಂಸ್ಕೃತಿಕ ಸಂಬಂಧಗಳನ್ನು ಎದುರು ನೋಡುತ್ತಿದ್ದೇವೆ” ಎಂದು ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಬ್ರೂನೆಯಲ್ಲಿ ಮೊಳಗಿದ ಮೋದಿ, ಮೋದಿ ಘೋಷಣೆ; ಭಾರತೀಯ ವಲಸಿಗರನ್ನು ಭೇಟಿಯಾದ ಪ್ರಧಾನಿ

ಭಾರತ ಮತ್ತು ಸಿಂಗಾಪುರ್ 1965ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದವು. ವ್ಯಾಪಾರ ಮತ್ತು ಹೂಡಿಕೆ, ಆರ್ಥಿಕ ಸಹಕಾರ, ರಕ್ಷಣೆ, ಕಡಲ ಭದ್ರತೆ, ಇಂಧನ ಮತ್ತು ಹೆಚ್ಚಿನವುಗಳಲ್ಲಿ ದೃಢವಾದ ಸಂಬಂಧಗಳೊಂದಿಗೆ ಎರಡೂ ದೇಶಗಳು ಸ್ನೇಹ ಸಂಬಂಧಗಳನ್ನು ಹಂಚಿಕೊಂಡವು. 2015ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಿಂಗಾಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ-ಸಿಂಗಾಪುರ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು. ಸಿಂಗಾಪುರವು ಅತಿ ಹೆಚ್ಚು ಭಾರತೀಯ ವಲಸಿಗರನ್ನು (3.5 ಲಕ್ಷ) ಹೊಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು