AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Singapore Visit: 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 2018ರಲ್ಲಿ ಸಿಂಗಾಪುರಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದರು. ಇದೀಗ ಅವರ ಇಂದಿನ ಸಿಂಗಾಪುರ ಭೇಟಿಯು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ 10ನೇ ವಾರ್ಷಿಕೋತ್ಸವದ ಮೊದಲು ಬಂದಿದೆ. ಸಿಂಗಾಪುರ ಭಾರತದ ಪ್ರಮುಖ ಮಿತ್ರರಾಷ್ಟ್ರಗಳಲ್ಲಿ ಒಂದಾಗಿದೆ ಮತ್ತು ಭಾರತದ ಆರನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದೆ.

PM Modi Singapore Visit: 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಸಿಂಗಾಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on: Sep 04, 2024 | 2:43 PM

Share

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 6 ವರ್ಷಗಳ ನಂತರ ಮೊದಲ ಬಾರಿಗೆ ಸಿಂಗಾಪುರಕ್ಕೆ ಆಗಮಿಸಿದರು. ಬ್ರೂನೆಯಲ್ಲಿ ತಮ್ಮ ಎರಡು ದಿನಗಳ ಪ್ರವಾಸವನ್ನು ಮುಗಿಸಿದ ನಂತರ ಇಂದು ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಸಿಂಗಾಪುರಕ್ಕೆ ಬಂದಿದ್ದಾರೆ.

ಚಾಂಗಿ ವಿಮಾನ ನಿಲ್ದಾಣದಲ್ಲಿ ಮೋದಿ ಅವರಿಗೆ ಅಧಿಕೃತ ಸ್ವಾಗತ ದೊರೆಯಿತು. ವಾಂಗ್ ಅವರನ್ನು ಭೇಟಿ ಮಾಡುವುದರ ಹೊರತಾಗಿ, ನರೇಂದ್ರ ಮೋದಿ ಅವರು ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಹಿರಿಯ ಸಚಿವರಾದ ಲೀ ಸೀನ್ ಲೂಂಗ್ ಮತ್ತು ಹಿರಿಯ ಸಚಿವ ಗೋ ಚೋಕ್ ಟಾಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ವಾಂಗ್ ಮತ್ತು ಲೀ ಮೋದಿಯವರಿಗೆ ಪ್ರತ್ಯೇಕ ಊಟದ ಮೂಲಕ ಆತಿಥ್ಯ ನೀಡಲಿದ್ದಾರೆ.

ಇದನ್ನೂ ಓದಿ: Paralympics 2024: ಭಾರತೀಯರ ಐತಿಹಾಸಿಕ ಸಾಧನೆ: ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

“ಸಿಂಗಾಪೂರ್‌ಗೆ ಬಂದಿಳಿದಿದೆ. ಭಾರತ-ಸಿಂಗಾಪುರದ ಸ್ನೇಹವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಸಭೆಗಳನ್ನು ಎದುರು ನೋಡುತ್ತಿದ್ದೇವೆ. ಭಾರತದ ಸುಧಾರಣೆಗಳು ಮತ್ತು ನಮ್ಮ ಯುವ ಶಕ್ತಿಯ ಪ್ರತಿಭೆಯು ನಮ್ಮ ರಾಷ್ಟ್ರವನ್ನು ಆದರ್ಶ ಹೂಡಿಕೆಯ ತಾಣವನ್ನಾಗಿ ಮಾಡುತ್ತದೆ. ನಾವು ನಿಕಟ ಸಾಂಸ್ಕೃತಿಕ ಸಂಬಂಧಗಳನ್ನು ಎದುರು ನೋಡುತ್ತಿದ್ದೇವೆ” ಎಂದು ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಬ್ರೂನೆಯಲ್ಲಿ ಮೊಳಗಿದ ಮೋದಿ, ಮೋದಿ ಘೋಷಣೆ; ಭಾರತೀಯ ವಲಸಿಗರನ್ನು ಭೇಟಿಯಾದ ಪ್ರಧಾನಿ

ಭಾರತ ಮತ್ತು ಸಿಂಗಾಪುರ್ 1965ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದವು. ವ್ಯಾಪಾರ ಮತ್ತು ಹೂಡಿಕೆ, ಆರ್ಥಿಕ ಸಹಕಾರ, ರಕ್ಷಣೆ, ಕಡಲ ಭದ್ರತೆ, ಇಂಧನ ಮತ್ತು ಹೆಚ್ಚಿನವುಗಳಲ್ಲಿ ದೃಢವಾದ ಸಂಬಂಧಗಳೊಂದಿಗೆ ಎರಡೂ ದೇಶಗಳು ಸ್ನೇಹ ಸಂಬಂಧಗಳನ್ನು ಹಂಚಿಕೊಂಡವು. 2015ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಿಂಗಾಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ-ಸಿಂಗಾಪುರ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು. ಸಿಂಗಾಪುರವು ಅತಿ ಹೆಚ್ಚು ಭಾರತೀಯ ವಲಸಿಗರನ್ನು (3.5 ಲಕ್ಷ) ಹೊಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ