AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Singapore: ಭಾರತದಲ್ಲಿ ಹೂಡಿಕೆ ಮಾಡಲು ಸಿಂಗಾಪುರದ ಸಿಇಒಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

ಇಂದು ಸಿಂಗಾಪುರದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಪ್ರಮುಖ ಕಂಪನಿಗಳ ಸಿಇಓಗಳ ಪೈಕಿ ಬ್ಲಾಕ್‌ಸ್ಟೋನ್ ಸಿಂಗಾಪುರ್, ಟೆಮಾಸೆಕ್ ಹೋಲ್ಡಿಂಗ್ಸ್, ಸೆಂಬ್‌ಕಾರ್ಪ್ ಇಂಡಸ್ಟ್ರೀಸ್ ಲಿಮಿಟೆಡ್, ಕ್ಯಾಪಿಟಾಲ್ಯಾಂಡ್ ಇನ್ವೆಸ್ಟ್‌ಮೆಂಟ್, ಎಸ್‌ಟಿ ಟೆಲಿಮೀಡಿಯಾ ಗ್ಲೋಬಲ್ ಡಾಟಾ ಸೆಂಟರ್‌ಗಳು, ಸಿಂಗಾಪುರ್ ಏರ್‌ವೇಸ್‌ನ ಸಿಇಒಗಳು ಕೂಡ ಇದ್ದರು.

PM Modi in Singapore: ಭಾರತದಲ್ಲಿ ಹೂಡಿಕೆ ಮಾಡಲು ಸಿಂಗಾಪುರದ ಸಿಇಒಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ
ಸಿಂಗಾಪುರದ ಕಂಪನಿಗಳ ಸಿಇಓಗಳ ಜೊತೆ ಮೋದಿ ಮಾತುಕತೆ
ಸುಷ್ಮಾ ಚಕ್ರೆ
|

Updated on:Sep 05, 2024 | 4:32 PM

Share

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಂಗಾಪುರದಲ್ಲಿ ಉದ್ಯಮಿಗಳ ಜತೆ ದುಂಡು ಮೇಜಿನ ಸಭೆ ನಡೆಸಿದರು. ಇಂದು ಸಿಂಗಾಪುರದಲ್ಲಿ ಪಿಎಂ ಮೋದಿಯನ್ನು ಭೇಟಿ ಮಾಡಿದ ಪ್ರಮುಖ ಉದ್ಯಮ ನಾಯಕರಾದ ಬ್ಲಾಕ್‌ಸ್ಟೋನ್ ಸಿಂಗಾಪುರ್, ಟೆಮಾಸೆಕ್ ಹೋಲ್ಡಿಂಗ್ಸ್, ಸೆಂಬ್‌ಕಾರ್ಪ್ ಇಂಡಸ್ಟ್ರೀಸ್ ಲಿಮಿಟೆಡ್, ಕ್ಯಾಪಿಟಾಲ್ಯಾಂಡ್ ಇನ್ವೆಸ್ಟ್‌ಮೆಂಟ್, ಎಸ್‌ಟಿ ಟೆಲಿಮೀಡಿಯಾ ಗ್ಲೋಬಲ್ ಡಾಟಾ ಸೆಂಟರ್‌ಗಳು ಮತ್ತು ಸಿಂಗಾಪುರ್ ಏರ್‌ವೇಸ್‌ನ ಸಿಇಒಗಳಿಗೆ ಭಾರತದಲ್ಲಿ ಹೂಡಿಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ.

“ಸಿಂಗಾಪೂರ್‌ನಲ್ಲಿ ಉನ್ನತ ವ್ಯಾಪಾರ ನಾಯಕರು ಮತ್ತು ಸಿಇಒಗಳೊಂದಿಗೆ ಸಂವಾದ ನಡೆಸಿದ್ದೇವೆ. ನಾವು ಆರ್ಥಿಕ ಸಂಬಂಧಗಳನ್ನು ಗಾಢವಾಗಿಸುವ ಮಾರ್ಗಗಳ ಕುರಿತು ಮಾತನಾಡಿದ್ದೇವೆ. ನಾನು ಭಾರತದಲ್ಲಿ ನಡೆಯುತ್ತಿರುವ ಸುಧಾರಣೆಗಳನ್ನು ಎತ್ತಿ ತೋರಿಸಿದೆ. ಇದು ಹೂಡಿಕೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸುತ್ತದೆ” ಎಂದು ಉನ್ನತ ಮಟ್ಟದ ಸಭೆಯನ್ನು ಮುಕ್ತಾಯಗೊಳಿಸಿದ ನಂತರ ಪ್ರಧಾನ ಮಂತ್ರಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: PM Modi in Singapore: ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು

ಇದಕ್ಕೂ ಮುನ್ನ ಸಿಂಗಾಪುರದಲ್ಲಿ ಸಿಂಗಾಪುರ ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ಭಾರತ-ಸಿಂಗಾಪುರ ಸಹಕಾರವನ್ನು ವಿಸ್ತರಿಸುವ ಮತ್ತು ಆಳಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಸಿಂಗಾಪುರದ ಹಿರಿಯ ಸಚಿವ ಲೀ ಸೀನ್ ಲೂಂಗ್ ಅವರು ಆಯೋಜಿಸಿದ್ದ ಭೋಜನಕೂಟದಲ್ಲಿ ಮೋದಿ ಭಾಗವಹಿಸಿದ್ದರು.

ಇಂದು ಸಿಂಗಾಪುರದ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಮತ್ತು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಭೇಟಿಯಾದರು. ಇಬ್ಬರೂ ನಾಯಕರು ತಮ್ಮ ನಿಯೋಗಗಳೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Thu, 5 September 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ