AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ಬಗ್ಗೆ ದ್ವಂದ್ವ ನಿಲುವುಗಳಿಗೆ ಅವಕಾಶವಿಲ್ಲ: ಪ್ರಧಾನಿ ಮೋದಿ

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಬ್ರೆಜಿಲ್ ಶೂನ್ಯ ಸಹಿಷ್ಣುತೆ ಮತ್ತು ಶೂನ್ಯ ದ್ವಿಮುಖ ನೀತಿಯ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಭಾರತ ಮತ್ತು ಬ್ರೆಜಿಲ್ ಎರಡೂ ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವವರನ್ನು ಬಲವಾಗಿ ವಿರೋಧಿಸುತ್ತವೆ. ಪಾಕಿಸ್ತಾನ ಮತ್ತು ಅದರ ಸರ್ವಕಾಲಿಕ ಸ್ನೇಹಿತ ಚೀನಾವನ್ನು ಉಲ್ಲೇಖಿಸಿ, ಭಯೋತ್ಪಾದನೆ ವಿಷಯದಲ್ಲಿ ದ್ವಿಮುಖ ನೀತಿಗೆ ಅವಕಾಶವಿಲ್ಲ ಎಂದು ಪ್ರಧಾನಿ ಹೇಳಿದರು.

ಭಯೋತ್ಪಾದನೆ ಬಗ್ಗೆ ದ್ವಂದ್ವ ನಿಲುವುಗಳಿಗೆ ಅವಕಾಶವಿಲ್ಲ: ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on: Jul 09, 2025 | 7:48 AM

Share

ಬ್ರೆಜಿಲ್, ಜುಲೈ 09: ಭಯೋತ್ಪಾದನೆ(Terrorism) ಬಗ್ಗೆ ದ್ವಂದ್ವ ನಿಲುವುಗಳಿಗೆ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬ್ರೆಜಿಲ್​ನಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯ ಬಗ್ಗೆ ದ್ವಿಮುಖ ನೀತಿಗಳಿಗೆ ಯಾವುದೇ ಸ್ಥಾನವಿಲ್ಲ.ಭಾರತ ಮತ್ತು ಬ್ರೆಜಿಲ್ ಎರಡೂ ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವವರನ್ನು ಬಲವಾಗಿ ವಿರೋಧಿಸುತ್ತವೆ ಎಂದು ಹೇಳಿದರು.

ಪ್ರಸ್ತುತ ಭಾರತ-ಬ್ರೆಜಿಲ್ ನಡುವಿನ ಪರಸ್ಪರ ವ್ಯಾಪಾರ ಸುಮಾರು 13 ಶತಕೋಟಿ ಡಾಲರ್‌ಗಳಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಇದನ್ನು 20 ಶತಕೋಟಿ ಡಾಲರ್‌ಗಳಿಗೆ ಕೊಂಡೊಯ್ಯುವ ಗುರಿಯನ್ನು ಹೊಂದಲಾಗಿದೆ ಎಂದು ಮೋದಿ ಹೇಳಿದರು. ಇಂದಿನ ಮಾತುಕತೆಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸಹಕಾರವನ್ನು ಬಲಪಡಿಸುವ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

ರಕ್ಷಣಾ ವಲಯದಲ್ಲಿ ವಿಶ್ವಾಸ ಹೆಚ್ಚಳ ಭಾರತ ಮತ್ತು ಬ್ರೆಜಿಲ್ ನಡುವಿನ ರಕ್ಷಣಾ ಸಹಕಾರವು ಬೆಳೆಯುತ್ತಿದೆ. ಎರಡೂ ದೇಶಗಳು ರಕ್ಷಣಾ ಉತ್ಪಾದನಾ ಕೈಗಾರಿಕೆಗಳನ್ನು ಸಂಪರ್ಕಿಸುವತ್ತ ಸಾಗುತ್ತವೆ ಎಂದು ಅವರು ಹೇಳಿದರು. ಭಾರತವು ಬ್ರೆಜಿಲ್‌ಗೆ UPI ಅಳವಡಿಸಿಕೊಳ್ಳಲು ಸಹಾಯ ಮಾಡುತ್ತಿದೆ. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಬಾಹ್ಯಾಕಾಶ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಸೂಪರ್‌ಕಂಪ್ಯೂಟರ್‌ಗಳಂತಹ ಕ್ಷೇತ್ರಗಳಲ್ಲಿ ನಮ್ಮ ಸಹಕಾರವು ಬೆಳೆಯುತ್ತಿದೆ ಎಂದು ಹೇಳಿದರು.

ಕೃಷಿ ಸಂಶೋಧನೆ, ಆಹಾರ ಸಂಸ್ಕರಣೆ ಮತ್ತು ಆಯುರ್ವೇದದಲ್ಲಿ ಸಹಕಾರವನ್ನು ಹೆಚ್ಚಿಸಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಈಗ ನಾವು ಕೃಷಿ ಸಂಶೋಧನೆ ಮತ್ತು ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ ಮತ್ತು ಬ್ರೆಜಿಲ್ ಎರಡೂ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿವೆ.ಭಾರತವು ಪಾಕಿಸ್ತಾನವನ್ನು ‘ಭಯೋತ್ಪಾದನೆಯ ಜಾಗತಿಕ ಕೇಂದ್ರ’ ಎಂದು ಬಣ್ಣಿಸಿದೆ. ಚೀನಾವನ್ನು ಪರೋಕ್ಷವಾಗಿ ಉಲ್ಲೇಖಿಸುತ್ತಾ, ಪ್ರಧಾನಿ ಮೋದಿ, ಭಯೋತ್ಪಾದನೆಯ ಬಗ್ಗೆ ದ್ವಿಮುಖ ನೀತಿಗಳಿಗೆ ಯಾವುದೇ ಸ್ಥಳವಿಲ್ಲ ಎಂದು ಹೇಳಿದರು.

ಮತ್ತಷ್ಟು ಓದಿ: ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಐತಿಹಾಸಿಕ ಪಾಲುದಾರಿಕೆಗೆ ಪಾಕಿಸ್ತಾನ ಸಿದ್ಧ; ವರಸೆ ಬದಲಿಸಿದ ಬಿಲಾವಲ್ ಭುಟ್ಟೋ

ಏಪ್ರಿಲ್‌ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಅಧ್ಯಕ್ಷ ಲುಲಾ ಅವರ ಒಗ್ಗಟ್ಟು ಮತ್ತು ಬೆಂಬಲಕ್ಕಾಗಿ ಪ್ರಧಾನಿ ಧನ್ಯವಾದ ಅರ್ಪಿಸಿದರು. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಸಭೆಯಲ್ಲಿ ಉಭಯ ನಾಯಕರು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆರೋಗ್ಯ ಮತ್ತು ಔಷಧಗಳು, ಬಾಹ್ಯಾಕಾಶ, ನವೀಕರಿಸಬಹುದಾದ ಇಂಧನ, ಆಹಾರ ಮತ್ತು ಇಂಧನ ಭದ್ರತೆ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಸಂಸ್ಕೃತಿ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳು ಸೇರಿದಂತೆ ಬಹುಮುಖಿ ಸಂಬಂಧಗಳ ಕುರಿತು ವ್ಯಾಪಕ ಚರ್ಚೆ ನಡೆಸಿದ್ದಾಗಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ