AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಮಾನವೀಯತೆಯ ಯಶಸ್ಸು ಒಗ್ಗಟ್ಟಿನಲ್ಲಿದೆಯೇ ವಿನಃ ಯುದ್ಧಭೂಮಿಯಲ್ಲಿಲ್ಲ; ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ

PM Narendra Modi US Visit: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಂದು ಜಾಗತಿಕ ಶಾಂತಿಯ ಪರವಾಗಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮಾನವೀಯತೆಯ ಯಶಸ್ಸು ಸಮೂಹ ಶಕ್ತಿ ಅಥವಾ ಒಗ್ಗಟ್ಟಿನಲ್ಲಿದೆಯೇ ಹೊರತು ಯುದ್ಧಭೂಮಿಯಲ್ಲಿ ಅಲ್ಲ ಎಂದು ಹೇಳಿದ್ದಾರೆ.

PM Modi: ಮಾನವೀಯತೆಯ ಯಶಸ್ಸು ಒಗ್ಗಟ್ಟಿನಲ್ಲಿದೆಯೇ ವಿನಃ ಯುದ್ಧಭೂಮಿಯಲ್ಲಿಲ್ಲ; ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ
ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on:Sep 23, 2024 | 9:49 PM

Share

ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದಾರೆ. 79ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಮಾತನಾಡಿದ ಪಿಎಂ ನರೇಂದ್ರ ಮೋದಿ, “ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆಯೇ ಹೊರತು ಯುದ್ಧಭೂಮಿಯಲ್ಲಿ ಇಲ್ಲ. ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಸಂಸ್ಥೆಗಳಲ್ಲಿನ ಸುಧಾರಣೆಗಳು ಮುಖ್ಯ” ಎಂದು ಮೋದಿ ಹೇಳಿದ್ದಾರೆ.

ಮೂರು ದಿನಗಳ ಭೇಟಿಗಾಗಿ ಅಮೇರಿಕಾದಲ್ಲಿರುವ ಪ್ರಧಾನಿ ಮೋದಿ ಅವರು ತಮ್ಮ ದ್ವಿಪಕ್ಷೀಯ ಮಾತುಕತೆಯ ಸಂದರ್ಭದಲ್ಲಿ ತಮ್ಮ ಇತ್ತೀಚಿನ ಉಕ್ರೇನ್ ಭೇಟಿಯ ಕುರಿತು ಯುಎಸ್ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಚರ್ಚಿಸಿದ್ದಾರೆ. ಪ್ರಧಾನಿ ಮೋದಿಯವರ ಉಕ್ರೇನ್ ಭೇಟಿ ಮತ್ತು ಅವರ ಶಾಂತಿಯ ಸಂದೇಶವನ್ನು ಬೈಡೆನ್ ಅವರು ಶ್ಲಾಘಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ

ವಿಶ್ವ ಶಾಂತಿ ಮತ್ತು ಅಭಿವೃದ್ಧಿಗಾಗಿ, ಜಾಗತಿಕ ಸಂಸ್ಥೆಗಳಿಗೆ ಸುಧಾರಣೆ ಅತ್ಯಗತ್ಯ. ನಾವು ಭಾರತದಲ್ಲಿ 250 ಮಿಲಿಯನ್ ಜನರನ್ನು ಬಡತನದಿಂದ ಮೇಲಕ್ಕೆತ್ತಿದ್ದೇವೆ ಮತ್ತು ಸುಸ್ಥಿರ ಅಭಿವೃದ್ಧಿ ಯಶಸ್ವಿಯಾಗಬಹುದೆಂದು ನಾವು ತೋರಿಸಿದ್ದೇವೆ. ಇದನ್ನು ಜಗತ್ತಿನೊಂದಿಗೆ ಹಂಚಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ, ಮೋದಿಗೆ ರಾಹುಲ್ ಗಾಂಧಿಯ ಸರ್ಟಿಫಿಕೆಟ್ ಅಗತ್ಯವಿಲ್ಲ; ಕಿಶನ್ ರೆಡ್ಡಿ ಟೀಕೆ

‘ಭವಿಷ್ಯದ ಶೃಂಗಸಭೆ’ ಯುಎನ್‌ನ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲು. 2025ರ ಶೃಂಗಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ಜಾಗತಿಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಭಯೋತ್ಪಾದನೆಯು ಜಾಗತಿಕ ಶಾಂತಿಗೆ ಗಂಭೀರ ಬೆದರಿಕೆಯಾಗಿ ಉಳಿದಿದೆ. ಸೈಬರ್, ಸಮುದ್ರ ಮತ್ತು ಬಾಹ್ಯಾಕಾಶದಂತಹ ಕ್ಷೇತ್ರಗಳು ಸಂಘರ್ಷದ ಹೊಸ ರಂಗಭೂಮಿಗಳಾಗಿ ಹೊರಹೊಮ್ಮುತ್ತಿವೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Mon, 23 September 24

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ