AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ, ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ; ಪಾಕ್​ಗೆ ಪ್ರಧಾನಿ ಮೋದಿ ಪರೋಕ್ಷ ಚಾಟಿ

PM Narendra Modi Joint Press Conference in White House; ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ ಮತ್ತು ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದರು.

ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ, ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ; ಪಾಕ್​ಗೆ ಪ್ರಧಾನಿ ಮೋದಿ ಪರೋಕ್ಷ ಚಾಟಿ
ವಾಷಿಂಗ್ಟನ್​​ನಲ್ಲಿ ಪ್ರಧಾನಿ ಮೋದಿ
Follow us
Ganapathi Sharma
|

Updated on:Jun 23, 2023 | 12:36 AM

ವಾಷಿಂಗ್ಟನ್: ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಭಾರತ ಮತ್ತು ಅಮೆರಿಕ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ಹೇಳಿದರು. ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಅಮೆರಿಕ ಭೇಟಿ ವೇಳೆ ಅದ್ಧೂರಿ ಸ್ವಾಗತ ನೀಡಿದ್ದಕ್ಕೆ ಬೈಡನ್​​ಗೆ ಧನ್ಯವಾದ ಸಮರ್ಪಿಸಿದ ಮೋದಿ, ಅಮೆರಿಕ-ಭಾರತ ನಡುವೆ ವ್ಯಾಪಾರ ವಹಿವಾಟು ಉತ್ತಮವಾಗಿದೆ. ಎರಡೂ ದೇಶಗಳ ನಡುವೆ ಸಂಬಂಧ ಹೊಸ ಉದ್ಯಮ ಸೃಷ್ಟಿಗೆ ನಾಂದಿ ಹಾಡಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹಳೇ ಸಂಬಂಧ ಮತ್ತಷ್ಟು ಸದೃಢವಾಗಿದೆ ಎಂದರು.

ಶ್ವೇತಭವನಕ್ಕೆ ಭೇಟಿ ನೀಡಿದ ವೇಳೆ ಅನಿವಾಸಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದರಿಂದ ಅಮೆರಿಕ, ಭಾರತ ನಡುವೆ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ಭಯೋತ್ಪಾದನೆ, ಮೂಲಭೂತವಾದದ ವಿರುದ್ಧ ಒಗ್ಗಟ್ಟಿನ ಹೋರಾಟ ಮುಂದುವರಿದಿದೆ. ಭಾರತ, ಅಮೆರಿಕ ಮುಂದೆಯೂ ಹೆಗಲಿಗೆ ಹೆಗಲು ಕೊಟ್ಟು ಹೋರಾಟ ನಡೆಸಲಿವೆ. ಪ್ರಜಾತಂತ್ರದ ಮೂಲ ಉದ್ದೇಶ ಗಟ್ಟಿಗೊಳಿಸುವುದೇ ಈ ಭೇಟಿಯ ಉದ್ದೇಶವಾಗಿದೆ. ಬೆಂಗಳೂರು, ಅಹಮದಾಬಾದ್​ನಲ್ಲಿ ಅಮೆರಿಕದ ರಾಯಭಾರ ಕಚೇರಿ ಆರಂಭವಾಗಲಿದೆ ಎಂದು ಮೋದಿ ಹೇಳಿದರು.

ರಾಜತಾಂತ್ರಿಕ ಮಾರ್ಗದ ಮೂಲಕ ರಷ್ಯಾ ಹಾಗೂ ಉಕ್ರೇನ್​ ನಡುವಣ ಯುದ್ಧ ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದರು.

‘ಸ್ಕೈ ಈಸ್ ನಾಟ್ ಲಿಮಿಟ್’

ಭಾರತ ಹಾಗೂ ಅಮೆರಿಕ ನಡುವಣ ಬಾಂಧವ್ಯಕ್ಕೆ ಆಕಾಶವೂ ಸಾಟಿಯಲ್ಲ ಎಂದು ಮೋದಿ ಬಣ್ಣಿಸಿದರು. ವ್ಯಾಪಾರ ಮತ್ತು ಹೂಡಿಕೆಯಲ್ಲಿ ಅಮೆರಿಕ-ಭಾರತದ ಪಾಲುದಾರಿಕೆ ಈ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಆರ್ಥಿಕತೆಗೂ ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿದರು. ಇಂದು, ಅಮೆರಿಕವು ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಮಸ್ಯೆಗಳನ್ನು ಕೊನೆಗೊಳಿಸಲು ಮತ್ತು ಹೊಸ ಆರಂಭವನ್ನು ಪ್ರಾರಂಭಿಸಲು ನಾವು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: PM Modi at White House: ಅಮೆರಿಕ, ಭಾರತದ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ; ಶ್ವೇತಭವನದಲ್ಲಿ ಪ್ರಧಾನಿ ಮೋದಿ

ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಮತ್ತು ಭಾರತದ ನಿಯೋಗದ ಇತರ ಸದಸ್ಯರು ಪ್ರಧಾನಿ ಮೋದಿ ಮತ್ತು ಬೈಡನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಮೋದಿ ಅಮೆರಿಕ ಭೇಟಿ ಫಲಪ್ರದವಾಗಿದೆ; ಬೈಡನ್

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ಫಲಪ್ರದವಾಗಿದೆ ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದರು. ಭಾರತ, ಅಮೆರಿಕ ನಡುವೆ ಬಾಂಧವ್ಯ ಮತ್ತಷ್ಟು ಶಕ್ತಿಶಾಲಿಯಾಗಿದೆ. ರಕ್ಷಣೆ, ಸಂಪರ್ಕ, ಹಣಕಾಸು ಕ್ಷೇತ್ರದಲ್ಲಿ ಪರಸ್ಪರ ಸಹಕಾರ ವೃದ್ಧಿಯಾಗಲಿದೆ. ಸೆಮಿಕಂಡಕ್ಟರ್​ ಉತ್ಪಾದನಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ದೊರೆಯಲಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ, ಅಮೆರಿಕ ನಡುವೆ ಒಪ್ಪಂದ ಏರ್ಪಟ್ಟಿದೆ. ಭಾರತ, ಅಮೆರಿಕ ಸಂಬಂಧಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಇದು ಮತ್ತಷ್ಟು ವೃದ್ಧಿಸಲಿದೆ. 2 ದಶಕದಲ್ಲಿ ಉಭಯ ದೇಶಗಳ ನಡುವೆ ವ್ಯಾಪಾರ ದ್ವಿಗುಣವಾಗಿದೆ. ಹೊಸದಾಗಿ 2 ಬಿಲಿಯನ್ ಡಾಲರ್​ಗೂ ಹೆಚ್ಚು ಹೂಡಿಕೆ ಘೋಷಣೆ ಮಾಡಲಾಗಿದೆ ಎಂದು ಬೈಡನ್ ತಿಳಿಸಿದರು.

ಪ್ರಧಾನಿ ಮೋದಿ ಹೇಳಿಕೆಯ ಮುಖ್ಯಾಂಶಗಳು

  • ಭಾರತ-ಅಮೆರಿಕ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯ ಸೇರ್ಪಡೆಯಾಗಿದೆ
  • ಇಂದು ಎರಡೂ ದೇಶಗಳಿಗೆ ಬಹಳ ವಿಶೇಷವಾದ ದಿನವಾಗಿದೆ
  • ಜಾಗತಿಕ ಆರ್ಥಿಕತೆಗೆ ಇಂಡೋ-ಯುಎಸ್ ಪಾಲುದಾರಿಕೆ ಮುಖ್ಯವಾಗಿದೆ
  • ಭಾರತವು ಅಮೆರಿಕದ ಅತಿದೊಡ್ಡ ವ್ಯಾಪಾರ ಪಾಲುದಾರ
  • AI, ಸೆಮಿಕಂಡಕ್ಟರ್, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಪಾಲುದಾರಿಕೆ ಹೆಚ್ಚಾಗುತ್ತದೆ
  • ಅಮೆರಿಕದ ದೊಡ್ಡ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲಿವೆ
  • ಶುದ್ಧ ಇಂಧನಕ್ಕಾಗಿ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ
  • ಭಾರತ ಮತ್ತು ಅಮೆರಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಸುದೀರ್ಘ ಹಾರಾಟ ನಡೆಸಿವೆ
  • ಜಾಗತಿಕ ಅನಿಶ್ಚಿತತೆಯ ನಡುವೆ ಭಾರತ ಮತ್ತು ಅಮೆರಿಕ ವಿಶ್ವಾಸಾರ್ಹ ಪಾಲುದಾರರು
  • ನಾವು ವರ್ಗಾವಣೆ ತಂತ್ರಜ್ಞಾನ ಮತ್ತು ಉತ್ಪಾದನೆಯತ್ತ ಸಾಗುತ್ತೇವೆ
  • ಮಾತುಕತೆಯ ಮೂಲಕ ಉಕ್ರೇನ್ ವಿವಾದವನ್ನು ಪರಿಹರಿಸುವ ಅಗತ್ಯತೆ
  • ಅಹಮದಾಬಾದ್ ಮತ್ತು ಬೆಂಗಳೂರಿನಲ್ಲಿ ಕಾನ್ಸುಲೇಟ್‌ಗಳನ್ನು ತೆರೆಯುವುದಕ್ಕೆ ಸ್ವಾಗತ
  • ಭಯೋತ್ಪಾದನೆ ವಿರುದ್ಧ ಅಮೆರಿಕದೊಂದಿಗೆ ಭಾರತ
  • ರಷ್ಯಾ ಉಕ್ರೇನ್ ಯುದ್ಧದಲ್ಲಿ ಭಾರತ ಶಾಂತಿಯನ್ನು ಬೆಂಬಲಿಸುತ್ತದೆ
  • ಬೈಡನ್ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಆಹ್ವಾನ

ಅಧ್ಯಕ್ಷ ಬೈಡನ್ ಹೇಳಿಕೆಯ ಮುಖ್ಯಾಂಶಗಳು

  • ಎರಡೂ ದೇಶಗಳಲ್ಲಿ ಪಾಲುದಾರಿಕೆಯನ್ನು ಹೆಚ್ಚಿಸಲು ಒಪ್ಪಿಗೆ ನೀಡಲಾಯಿತು
  • AI ಮತ್ತು ಕ್ವಾಂಟಮ್ ತಂತ್ರಜ್ಞಾನದಲ್ಲಿ ಸಹಕಾರವನ್ನು ಹೆಚ್ಚಿಸುತ್ತದೆ
  • ರಕ್ಷಣಾ ವಲಯದಲ್ಲಿ ನಮ್ಮ ಸಹಕಾರ ಮತ್ತಷ್ಟು ಹೆಚ್ಚಲಿದೆ
  • ಭಾರತದೊಂದಿಗೆ ನಮ್ಮ ಪಾಲುದಾರಿಕೆಯನ್ನು ಬಲಪಡಿಸುವುದು
  • ಭಾರತ ಅಮೆರಿಕ ಪರಸ್ಪರ ಸಹಕಾರವನ್ನು ಹೆಚ್ಚಿಸಲಿದೆ
  • ಎರಡು ದೇಶಗಳ ನಡುವಿನ ವ್ಯಾಪಾರವನ್ನು ಹೆಚ್ಚಿಸಿತು
  • ಭಾರತ-ಅಮೆರಿಕಾ ಸಹಭಾಗಿತ್ವವು ಅತ್ಯಂತ ಮುಖ್ಯವಾಗಿದೆ
  • ಇನ್ಫ್ರಾದಲ್ಲಿ ಎರಡು ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ
  • ನಾವು ಉಕ್ರೇನ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದೇವೆ
  • ಆಹಾರ ಭದ್ರತೆ ಮತ್ತು ಶುದ್ಧ ಇಂಧನ ಕುರಿತು ಚರ್ಚೆ
  • ಭಾರತದಲ್ಲಿ ಹೊಸ ಕಾನ್ಸುಲೇಟ್ ತೆರೆಯಲಾಗುತ್ತದೆ

ಶ್ವೇತಭವನದಲ್ಲಿ ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಬೈಡನ್

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:17 am, Fri, 23 June 23

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?