AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 23, 2023 | 1:04 PM

Share

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ. ಪ್ರಧಾನಿಯವರ ಮೆಗಾ ಶೋ ನಡೆಯಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್‌ನ ಎಲ್ಲಾ ಟಿಕೆಟ್‌ಗಳು ಈಗಾಗಲೇ ಬುಕ್ ಆಗಿವೆ. ಆಸ್ಟ್ರೇಲಿಯದ ವಿವಿಧ ನಗರಗಳಿಂದ ಜನರು ಪ್ರಧಾನಿಯವರ ಮಾತುಗಳನ್ನು ಕೇಳಲು ಸಿಡ್ನಿ ತಲುಪುತ್ತಿದ್ದಾರೆ, ಇಂದು ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅನೇಕ ದೊಡ್ಡ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದರು. ಇದಾದ ಬಳಿಕ ಮಧ್ಯಾಹ್ನ ಸಿಡ್ನಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ

ಆಸ್ಟ್ರೇಲಿಯನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ 2016 ರ ಜನಗಣತಿಯ ಪ್ರಕಾರ, ಆಸ್ಟ್ರೇಲಿಯಾದಲ್ಲಿ 619,164 ಜನರು ತಾವು ಭಾರತೀಯ ಮೂಲದವರು ಎಂದು ಘೋಷಿಸಿದ್ದಾರೆ.

ಇದು ಆಸ್ಟ್ರೇಲಿಯನ್ ಜನಸಂಖ್ಯೆಯ 2.8 ಪ್ರತಿಶತವಾಗಿದೆ. ಆ ಪೈಕಿ 592,000 ಜನ ಭಾರತದಲ್ಲಿ ಜನಿಸಿದ್ದಾರೆ. ಪ್ರಧಾನಿ ಮೋದಿ ಅವರು ಕೊನೆಯ ಬಾರಿಗೆ 2014 ರಲ್ಲಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು.

12 ಗಂಟೆಗೆ  ಗೇಟ್​ಗಳು ತೆರೆಯಲಾಗಿದೆ, ಮಧ್ಯಾಹ್ನ 1 ಗಂಟೆಗೆ ಇಂಟರ್​ನಲ್​ ಗೇಟ್​ಗಳು ತೆರೆಯಲಿವೆ, 2 ಗಂಟೆಯವರೆಗೆ ಇಂಟರ್​ನಲ್ ಗೇಟ್​ಗಳು ತೆರೆದಿರಲಿವೆ. ಮಧ್ಯಾಹ್ನ 2.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 4.30ಕ್ಕೆ ಗೇಟ್​ ಮುಚ್ಚಲಾಗುತ್ತದೆ. 6 ಗಂಟೆಗೆ ಗಣ್ಯರು ಆಗಮಿಸುತ್ತಾರೆ. ಬಳಿಕ ಪ್ರಧಾನಿ ಮೋದಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Tue, 23 May 23

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ