PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
Follow us
|

Updated on:May 23, 2023 | 1:04 PM

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ. ಪ್ರಧಾನಿಯವರ ಮೆಗಾ ಶೋ ನಡೆಯಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್‌ನ ಎಲ್ಲಾ ಟಿಕೆಟ್‌ಗಳು ಈಗಾಗಲೇ ಬುಕ್ ಆಗಿವೆ. ಆಸ್ಟ್ರೇಲಿಯದ ವಿವಿಧ ನಗರಗಳಿಂದ ಜನರು ಪ್ರಧಾನಿಯವರ ಮಾತುಗಳನ್ನು ಕೇಳಲು ಸಿಡ್ನಿ ತಲುಪುತ್ತಿದ್ದಾರೆ, ಇಂದು ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅನೇಕ ದೊಡ್ಡ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದರು. ಇದಾದ ಬಳಿಕ ಮಧ್ಯಾಹ್ನ ಸಿಡ್ನಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ

ಆಸ್ಟ್ರೇಲಿಯನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ 2016 ರ ಜನಗಣತಿಯ ಪ್ರಕಾರ, ಆಸ್ಟ್ರೇಲಿಯಾದಲ್ಲಿ 619,164 ಜನರು ತಾವು ಭಾರತೀಯ ಮೂಲದವರು ಎಂದು ಘೋಷಿಸಿದ್ದಾರೆ.

ಇದು ಆಸ್ಟ್ರೇಲಿಯನ್ ಜನಸಂಖ್ಯೆಯ 2.8 ಪ್ರತಿಶತವಾಗಿದೆ. ಆ ಪೈಕಿ 592,000 ಜನ ಭಾರತದಲ್ಲಿ ಜನಿಸಿದ್ದಾರೆ. ಪ್ರಧಾನಿ ಮೋದಿ ಅವರು ಕೊನೆಯ ಬಾರಿಗೆ 2014 ರಲ್ಲಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು.

12 ಗಂಟೆಗೆ  ಗೇಟ್​ಗಳು ತೆರೆಯಲಾಗಿದೆ, ಮಧ್ಯಾಹ್ನ 1 ಗಂಟೆಗೆ ಇಂಟರ್​ನಲ್​ ಗೇಟ್​ಗಳು ತೆರೆಯಲಿವೆ, 2 ಗಂಟೆಯವರೆಗೆ ಇಂಟರ್​ನಲ್ ಗೇಟ್​ಗಳು ತೆರೆದಿರಲಿವೆ. ಮಧ್ಯಾಹ್ನ 2.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 4.30ಕ್ಕೆ ಗೇಟ್​ ಮುಚ್ಚಲಾಗುತ್ತದೆ. 6 ಗಂಟೆಗೆ ಗಣ್ಯರು ಆಗಮಿಸುತ್ತಾರೆ. ಬಳಿಕ ಪ್ರಧಾನಿ ಮೋದಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Tue, 23 May 23

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?