AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ.

PM Modi Sydney Visit: ಸಿಡ್ನಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಜ್ಜು, ವೇಳಾ ಪಟ್ಟಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 23, 2023 | 1:04 PM

Share

ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಆಸ್ಟ್ರೇಲಿಯಾದ ಸಿಡ್ನಿ ತಲುಪಿದ್ದಾರೆ, ಅಲ್ಲಿ ಇಂದು ಪಿಎಂ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ, ಆದರೆ ಪಿಎಂ ಮೋದಿ ಅವರ ಮೆಗಾ ಶೋ ಭಾರತೀಯ ಸಮುದಾಯದ ನಡುವೆ ನಡೆಯಲಿದೆ. ಪ್ರಧಾನಿಯವರ ಮೆಗಾ ಶೋ ನಡೆಯಲಿರುವ ಸಿಡ್ನಿ ಒಲಿಂಪಿಕ್ ಪಾರ್ಕ್‌ನ ಎಲ್ಲಾ ಟಿಕೆಟ್‌ಗಳು ಈಗಾಗಲೇ ಬುಕ್ ಆಗಿವೆ. ಆಸ್ಟ್ರೇಲಿಯದ ವಿವಿಧ ನಗರಗಳಿಂದ ಜನರು ಪ್ರಧಾನಿಯವರ ಮಾತುಗಳನ್ನು ಕೇಳಲು ಸಿಡ್ನಿ ತಲುಪುತ್ತಿದ್ದಾರೆ, ಇಂದು ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅನೇಕ ದೊಡ್ಡ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದ್ದರು. ಇದಾದ ಬಳಿಕ ಮಧ್ಯಾಹ್ನ ಸಿಡ್ನಿಯಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: PM Modi in Australia: ಆಸ್ಟ್ರೇಲಿಯಾ ಜತೆಗಿನ ಬಾಂಧವ್ಯ ಮುಂದಿನ ಹಂತಕ್ಕೆ; ಪ್ರಧಾನಿ ಮೋದಿ

ಆಸ್ಟ್ರೇಲಿಯನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ 2016 ರ ಜನಗಣತಿಯ ಪ್ರಕಾರ, ಆಸ್ಟ್ರೇಲಿಯಾದಲ್ಲಿ 619,164 ಜನರು ತಾವು ಭಾರತೀಯ ಮೂಲದವರು ಎಂದು ಘೋಷಿಸಿದ್ದಾರೆ.

ಇದು ಆಸ್ಟ್ರೇಲಿಯನ್ ಜನಸಂಖ್ಯೆಯ 2.8 ಪ್ರತಿಶತವಾಗಿದೆ. ಆ ಪೈಕಿ 592,000 ಜನ ಭಾರತದಲ್ಲಿ ಜನಿಸಿದ್ದಾರೆ. ಪ್ರಧಾನಿ ಮೋದಿ ಅವರು ಕೊನೆಯ ಬಾರಿಗೆ 2014 ರಲ್ಲಿ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದರು.

12 ಗಂಟೆಗೆ  ಗೇಟ್​ಗಳು ತೆರೆಯಲಾಗಿದೆ, ಮಧ್ಯಾಹ್ನ 1 ಗಂಟೆಗೆ ಇಂಟರ್​ನಲ್​ ಗೇಟ್​ಗಳು ತೆರೆಯಲಿವೆ, 2 ಗಂಟೆಯವರೆಗೆ ಇಂಟರ್​ನಲ್ ಗೇಟ್​ಗಳು ತೆರೆದಿರಲಿವೆ. ಮಧ್ಯಾಹ್ನ 2.45ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 4.30ಕ್ಕೆ ಗೇಟ್​ ಮುಚ್ಚಲಾಗುತ್ತದೆ. 6 ಗಂಟೆಗೆ ಗಣ್ಯರು ಆಗಮಿಸುತ್ತಾರೆ. ಬಳಿಕ ಪ್ರಧಾನಿ ಮೋದಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Tue, 23 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!