AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in US: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮಾತು; ಅಮೆರಿಕ ಅಧ್ಯಕ್ಷರನ್ನ ಹಾಡಿ ಹೊಗಳಿದ ಮೋದಿ

ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸಗೈದ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ನಿನ್ನೆ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೀಗನ್ ಸೆಂಟರ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಅಮೆರಿಕದ ಮೂಲೆ ಮೂಲೆಗಳಲ್ಲೂ ಭಾರತೀಯರನ್ನು ನೋಡುತ್ತಿದ್ದೇನೆ. ಇಲ್ಲಿ ಮಿನಿ ಭಾರತ ಹೊರಹೊಮ್ಮಿದೆ ಎಂದು ನನಗೆ ಕಾಣುತ್ತಿದೆ ಎಂದರು.

PM Modi in US: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮಾತು; ಅಮೆರಿಕ ಅಧ್ಯಕ್ಷರನ್ನ ಹಾಡಿ ಹೊಗಳಿದ ಮೋದಿ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on:Jun 24, 2023 | 10:20 AM

Share

ವಾಷಿಂಗ್ಟನ್​​: ಅಮೆರಿಕದ (America) ಮೂಲೆ ಮೂಲೆಗಳಲ್ಲೂ ಭಾರತೀಯರನ್ನು ನೋಡುತ್ತಿದ್ದೇನೆ. ಇಲ್ಲಿ ಮಿನಿ ಭಾರತ (India) ಹೊರಹೊಮ್ಮಿದೆ ಎಂದು ನನಗೆ ಕಾಣುತ್ತಿದೆ. ಅಮೆರಿಕದಲ್ಲಿ ನನಗೆ ಸಿಗುತ್ತಿರುವ ಪ್ರೀತಿ ಅದ್ಭುತವಾಗಿದೆ. ಕಳೆದ 3 ದಿನಗಳಿಂದ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರ ಜೊತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್​ (Joe Biden) ಅನುಭವಿ ರಾಜಕಾರಣಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಡಿ ಹೊಗಳಿದರು.

ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೀಗನ್ ಸೆಂಟರ್‌ನಲ್ಲಿ ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತಮ ಭವಿಷ್ಯದತ್ತ ಎರಡೂ ರಾಷ್ಟ್ರಗಳು ಬಲವಾದ ಹೆಜ್ಜೆ ಇಡುತ್ತಿವೆ. ಭಾರತದಲ್ಲಿ ಹೂಡಿಕೆ ಮಾಡಲು ಹಲವು ಕಂಪನಿಗಳು ಘೋಷಿಸಿವೆ. ಇದು ಭಾರತದಲ್ಲಿ ಉದ್ಯೋಗ ಸೃಷ್ಟಿಸಲು ತುಂಬಾ ಸಹಾಯವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಭಾರತೀಯ ಪ್ರತಿಭೆ ಮತ್ತು ಅಮೆರಿಕದ ತಂತ್ರಜ್ಞಾನ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ: ಪ್ರಧಾನಿ ಮೋದಿ

ಭಾರತದಲ್ಲಿ ಹೂಡಿಕೆ ಮಾಡಲು ಇದು ಉತ್ತಮ ಸಮಯವಾಗಿದೆ. ಭಾರತದ ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಅಮೆರಿಕ ನಿರ್ಧರಿಸಿದೆ. ಈ ಪುರಾತನ ವಸ್ತುಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ತಲುಪಿವೆ. ಅಮೆರಿಕ ಸರ್ಕಾರದ ನಿರ್ಧಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಭಾರತ ಮತ್ತು ಅಮೆರಿಕ ನಡುವೆ ಆರ್ಟೆಮಿಸ್ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಹಲವು ಅವಕಾಶ ಒದಗಿಸುತ್ತೆ. 9 ವರ್ಷಗಳಲ್ಲಿ ತಂತ್ರಜ್ಞಾನ, ವ್ಯಾಪಾರ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾದ ಸಹಕಾರ ಅನನ್ಯವಾದದ್ದು. ಭಾರತ, ಅಮೆರಿಕ ನಡುವೆ ಉತ್ತಮ ಸಂಬಂಧವಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾರತ ಮತ್ತು ಅಮೆರಿಕ ನಡುವಿನ ಪಾಲುದಾರಿಕೆಯು 21ನೇ ಶತಮಾನದಲ್ಲಿ ಜಗತ್ತನ್ನು ಉತ್ತಮಗೊಳಿಸುತ್ತದೆ. ಇದು ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಪಯಣ. ತಂತ್ರಜ್ಞಾನ ವರ್ಗಾವಣೆ, ಉತ್ಪಾದನಾ ಸಹಕಾರವನ್ನು ಆಳವಾಗಿಸುವುದು, ಕೈಗಾರಿಕಾ ಪೂರೈಕೆ ಸರಪಳಿಯಲ್ಲಿ ಸಮನ್ವಯವನ್ನು ಹೆಚ್ಚಿಸುವ ಕ್ಷೇತ್ರದಲ್ಲಿ ಎರಡೂ ರಾಷ್ಟ್ರಗಳು ಉತ್ತಮ ಭವಿಷ್ಯದತ್ತ ಬಲವಾದ ಹೆಜ್ಜೆ ಇಡುತ್ತಿವೆ ಎಂದು ತಿಳಿಸಿದರು.

ಜನರಲ್ ಎಲೆಕ್ಟ್ರಿಕ್‌ನಿಂದ ಫೈಟರ್ ಜೆಟ್ ಎಂಜಿನ್‌ಗಳನ್ನು ತಯಾರಿಸುವ ನಿರ್ಧಾರವು ಭಾರತದ ರಕ್ಷಣಾ ಕ್ಷೇತ್ರದ ಪ್ರಯಾಣದಲ್ಲಿ ಒಂದು ಮೈಲಿಗಲ್ಲು. ಹಾಗೇ ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ USA ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲಾಗುವುದು. ಮತ್ತು H1B ವೀಸಾ ನವೀಕರಣವನ್ನು ಯುಎಸ್‌ನಲ್ಲಿಯೇ ಮಾಡಿಕೊಳ್ಳಬಹುದು. H1B ವೀಸಾವನ್ನು ನವೀಕರಿಸಲು ಭಾರತೀಯರು ಇನ್ಮುಂದೆ ಯುಎಸ್ ಹೊರಗೆ ಹೋಗಬೇಕಾಗಿಲ್ಲ, ಇದು ಮುಖ್ಯವಾಗಿ ಟೆಕ್ಕಿಗಳಿಗೆ  ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 7:59 am, Sat, 24 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ