AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಮ್​​ನಲ್ಲಿ ಜಿ20 ನಾಯಕರ ಸಮಾಗಮ; ಶೃಂಗಸಭೆಯ ಪ್ರಾರಂಭದ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

G20 Summit: ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಎಂಟನೇ ಜಿ 20 ಶೃಂಗಸಭೆ ಇದಾಗಿದ್ದು, ಶುಕ್ರವಾರ ಬೆಳಗ್ಗೆ ಇಟಲಿ ತಲುಪಿದ್ದಾರೆ. ನಿನ್ನೆ ರೋಮ್​ನಲ್ಲಿ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ.

ರೋಮ್​​ನಲ್ಲಿ ಜಿ20 ನಾಯಕರ ಸಮಾಗಮ; ಶೃಂಗಸಭೆಯ ಪ್ರಾರಂಭದ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ
ಜಿ 20 ನಾಯಕರ ಫೋಟೋ
Follow us
TV9 Web
| Updated By: Lakshmi Hegde

Updated on:Oct 30, 2021 | 5:29 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವ್ಯಾಟಿಕನ್​ ನಗರದಲ್ಲಿ ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದ ನಂತರ ರೋಮಾ  ಕನ್ವೆನ್ಷನ್​ ಸೆಂಟರ್​ಗೆ ತೆರಳಿದ್ದು, ಅಲ್ಲೀಗ ಜಾಗತಿಕ ಆರ್ಥಿಕತೆ ಮತ್ತು ಜಾಗತಿಕ ಆರೋಗ್ಯ ಎಂಬ ವಿಷಯದ ಕುರಿತು ನಡೆಯಲಿರುವ ಜಿ 20 ಶೃಂಗಸಭೆ (G 20 Summit) ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.  ರೋಮಾ  ಕನ್ವೆನ್ಷನ್​ ಸೆಂಟರ್​ ತಲುಪಿದ ಪ್ರಧಾನಿ ಮೋದಿಯವರನ್ನು ಇಟಲಿ ಪ್ರಧಾನಮಂತ್ರಿ ಮಾರಿಯೋ ಡ್ರಾಗಿ ಬರಮಾಡಿಕೊಂಡರು. ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಇದೇ ಮೊದಲ ಬಾರಿಗೆ ಜಿ 20 ಜಾಗತಿಕ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದಿನ ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಜಾಗತಿಕ ಕನಿಷ್ಠ ಕಾರ್ಪೋರೇಟ್ ತೆರಿಗೆ ದರ, ಕೊವಿಡ್​ 19 ಸಾಂಕ್ರಾಮಿಕದಿಂದ ಆರೋಗ್ಯದಲ್ಲಿ ಚೇತರಿಕೆ, ಜಾಗತಿಕ ಅಭಿವೃದ್ಧಿ ಇತ್ಯಾದಿ ವಿಚಾರಗಳನ್ನು ಇಂದು ನಾಯಕರು ವ್ಯಾಪಕವಾಗಿ ಚರ್ಚಿಸಲಿದ್ದಾರೆ.  

ಇನ್ನು ಪ್ರಧಾನಿ ಕಚೇರಿ ಜಿ20 ನಾಯಕರ ಫೋಟೋವನ್ನು ಶೇರ್ ಮಾಡಿಕೊಂಡಿದೆ. ಜಾಗತಿಕ ಒಳಿತಿಗಾಗಿ ಇರುವ ಅತಿಮುಖ್ಯವಾದ ವೇದಿಕೆಯಾದ ಜಿ20 ಸಂಘಟನೆಯ ನಾಯಕರು ಇಂದು ರೋಮ್​​ನಲ್ಲಿ ಭೇಟಿಯಾದರು ಎಂದು ಹೇಳಿದೆ. ಈ ಫೋಟೋದಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಯುಎಸ್ ಅಧ್ಯಕ್ಷ ಜೋ ಬೈಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುಕೆ ಪಿಎಂ ಬೋರಿಸ್ ಜಾನ್ಸನ್ ಇತರ ಪ್ರಮುಖ ನಾಯಕರು ಇದ್ದಾರೆ.

ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಎಂಟನೇ ಜಿ 20 ಶೃಂಗಸಭೆ ಇದಾಗಿದ್ದು, ಶುಕ್ರವಾರ ಬೆಳಗ್ಗೆ ಇಟಲಿ ತಲುಪಿದ್ದಾರೆ. ನಿನ್ನೆ ರೋಮ್​ನಲ್ಲಿ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿರುವ ಅವರು, ಇಂದು ವ್ಯಾಟಿಕನ್​ ನಗರಕ್ಕೆ  ತೆರಳಿ ಕ್ರೈಸ್ತರ ಧರ್ಮಗುರು ಪೋಪ್​ ಫ್ರಾನ್ಸಿಸ್​ರನ್ನು ಭೇಟಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಪೋಪ್​ರನ್ನು ಭೇಟಿಯಾಗಿರುವ ಅವರು ಸುಮಾರು ಒಂದು ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ ಕೊರೊನಾ ವಿರುದ್ಧ ಹೋರಾಡಿದ ರೀತಿಯನ್ನು ಪೋಪ್​ ಫ್ರಾನ್ಸಿಸ್​ ಶ್ಲಾಘಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ; ಚಿನ್ನಾಭರಣ, ಹಣ ದೋಚಿ ಪರಾರಿ

ಬಿಎಸ್​ಪಿಯಿಂದ ಅಮಾನತಾಗಿದ್ದ 6 ರೆಬೆಲ್ ಶಾಸಕರು, ಓರ್ವ ಬಿಜೆಪಿ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Published On - 5:20 pm, Sat, 30 October 21

ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ