AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಮ್​​ನಲ್ಲಿ ಜಿ20 ನಾಯಕರ ಸಮಾಗಮ; ಶೃಂಗಸಭೆಯ ಪ್ರಾರಂಭದ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

G20 Summit: ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಎಂಟನೇ ಜಿ 20 ಶೃಂಗಸಭೆ ಇದಾಗಿದ್ದು, ಶುಕ್ರವಾರ ಬೆಳಗ್ಗೆ ಇಟಲಿ ತಲುಪಿದ್ದಾರೆ. ನಿನ್ನೆ ರೋಮ್​ನಲ್ಲಿ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ.

ರೋಮ್​​ನಲ್ಲಿ ಜಿ20 ನಾಯಕರ ಸಮಾಗಮ; ಶೃಂಗಸಭೆಯ ಪ್ರಾರಂಭದ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ
ಜಿ 20 ನಾಯಕರ ಫೋಟೋ
TV9 Web
| Updated By: Lakshmi Hegde|

Updated on:Oct 30, 2021 | 5:29 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವ್ಯಾಟಿಕನ್​ ನಗರದಲ್ಲಿ ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದ ನಂತರ ರೋಮಾ  ಕನ್ವೆನ್ಷನ್​ ಸೆಂಟರ್​ಗೆ ತೆರಳಿದ್ದು, ಅಲ್ಲೀಗ ಜಾಗತಿಕ ಆರ್ಥಿಕತೆ ಮತ್ತು ಜಾಗತಿಕ ಆರೋಗ್ಯ ಎಂಬ ವಿಷಯದ ಕುರಿತು ನಡೆಯಲಿರುವ ಜಿ 20 ಶೃಂಗಸಭೆ (G 20 Summit) ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.  ರೋಮಾ  ಕನ್ವೆನ್ಷನ್​ ಸೆಂಟರ್​ ತಲುಪಿದ ಪ್ರಧಾನಿ ಮೋದಿಯವರನ್ನು ಇಟಲಿ ಪ್ರಧಾನಮಂತ್ರಿ ಮಾರಿಯೋ ಡ್ರಾಗಿ ಬರಮಾಡಿಕೊಂಡರು. ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಇದೇ ಮೊದಲ ಬಾರಿಗೆ ಜಿ 20 ಜಾಗತಿಕ ನಾಯಕರು ಭೇಟಿಯಾಗುತ್ತಿದ್ದಾರೆ. ಇಂದಿನ ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಜಾಗತಿಕ ಕನಿಷ್ಠ ಕಾರ್ಪೋರೇಟ್ ತೆರಿಗೆ ದರ, ಕೊವಿಡ್​ 19 ಸಾಂಕ್ರಾಮಿಕದಿಂದ ಆರೋಗ್ಯದಲ್ಲಿ ಚೇತರಿಕೆ, ಜಾಗತಿಕ ಅಭಿವೃದ್ಧಿ ಇತ್ಯಾದಿ ವಿಚಾರಗಳನ್ನು ಇಂದು ನಾಯಕರು ವ್ಯಾಪಕವಾಗಿ ಚರ್ಚಿಸಲಿದ್ದಾರೆ.  

ಇನ್ನು ಪ್ರಧಾನಿ ಕಚೇರಿ ಜಿ20 ನಾಯಕರ ಫೋಟೋವನ್ನು ಶೇರ್ ಮಾಡಿಕೊಂಡಿದೆ. ಜಾಗತಿಕ ಒಳಿತಿಗಾಗಿ ಇರುವ ಅತಿಮುಖ್ಯವಾದ ವೇದಿಕೆಯಾದ ಜಿ20 ಸಂಘಟನೆಯ ನಾಯಕರು ಇಂದು ರೋಮ್​​ನಲ್ಲಿ ಭೇಟಿಯಾದರು ಎಂದು ಹೇಳಿದೆ. ಈ ಫೋಟೋದಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಯುಎಸ್ ಅಧ್ಯಕ್ಷ ಜೋ ಬೈಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುಕೆ ಪಿಎಂ ಬೋರಿಸ್ ಜಾನ್ಸನ್ ಇತರ ಪ್ರಮುಖ ನಾಯಕರು ಇದ್ದಾರೆ.

ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಎಂಟನೇ ಜಿ 20 ಶೃಂಗಸಭೆ ಇದಾಗಿದ್ದು, ಶುಕ್ರವಾರ ಬೆಳಗ್ಗೆ ಇಟಲಿ ತಲುಪಿದ್ದಾರೆ. ನಿನ್ನೆ ರೋಮ್​ನಲ್ಲಿ ಗಾಂಧಿ ಪ್ರತಿಮೆಗೆ ಗೌರವ ಸಲ್ಲಿಸಿರುವ ಅವರು, ಇಂದು ವ್ಯಾಟಿಕನ್​ ನಗರಕ್ಕೆ  ತೆರಳಿ ಕ್ರೈಸ್ತರ ಧರ್ಮಗುರು ಪೋಪ್​ ಫ್ರಾನ್ಸಿಸ್​ರನ್ನು ಭೇಟಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಪೋಪ್​ರನ್ನು ಭೇಟಿಯಾಗಿರುವ ಅವರು ಸುಮಾರು ಒಂದು ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ ಕೊರೊನಾ ವಿರುದ್ಧ ಹೋರಾಡಿದ ರೀತಿಯನ್ನು ಪೋಪ್​ ಫ್ರಾನ್ಸಿಸ್​ ಶ್ಲಾಘಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ; ಚಿನ್ನಾಭರಣ, ಹಣ ದೋಚಿ ಪರಾರಿ

ಬಿಎಸ್​ಪಿಯಿಂದ ಅಮಾನತಾಗಿದ್ದ 6 ರೆಬೆಲ್ ಶಾಸಕರು, ಓರ್ವ ಬಿಜೆಪಿ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Published On - 5:20 pm, Sat, 30 October 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್