AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COP26 Summit: ಸರ್ವೇ ಜನಾಃ ಸುಖಿನೋ ಭವಂತು ಎಂದ ಭಾರತದ ಪ್ರತಿನಿಧಿಯಾಗಿ ಇಲ್ಲಿದ್ದೇನೆ: ಪ್ರಧಾನಿ ಮೋದಿ ಭಾಷಣ

COP26 Summit: ಹವಾಮಾನ ಬದಲಾವಣೆಯಿಂದ ಕೃಷಿ ವಲಯಕ್ಕೆ ಹಾನಿ ಆಗಿದೆ. ಪರಿಸರಕ್ಕೆ ಪೂರಕವಾಗಿರುವ ನಿಯಮ ಜಾರಿಗೆ ತರಬೇಕು. ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ರೋಮ್​ನಲ್ಲಿ ನಡೆದ ಸಮ್ಮೇಳನದಲ್ಲಿ ಮೋದಿ ಭಾಷಣ ಮಾಡಿದ್ದಾರೆ.

COP26 Summit: ಸರ್ವೇ ಜನಾಃ ಸುಖಿನೋ ಭವಂತು ಎಂದ ಭಾರತದ ಪ್ರತಿನಿಧಿಯಾಗಿ ಇಲ್ಲಿದ್ದೇನೆ: ಪ್ರಧಾನಿ ಮೋದಿ ಭಾಷಣ
ನರೇಂದ್ರ ಮೋದಿ
TV9 Web
| Edited By: |

Updated on: Nov 01, 2021 | 10:48 PM

Share

ಗ್ಲಾಸ್ಗೊ: ಜಾಗತಿಕ ಹವಾಮಾನ ಬದಲಾವಣೆ ಕುರಿತು ಮೋದಿ ಭಾಷಣ ಮಾಡಿದ್ದಾರೆ. ಶಾಲೆಗಳಲ್ಲಿ ಪರಿಸರದ ಬಗ್ಗೆ ಕಡ್ಡಾಯವಾಗಿ ಬೋಧಿಸಬೇಕು. ಪಠ್ಯದಲ್ಲಿ ಪರಿಸರ ವಿಷಯ ಕಡ್ಡಾಯವಾಗಿ ಸೇರಿಸಬೇಕು. ಭಾರತದಲ್ಲಿ ‘ನಲ್ ಸೇ ಜಲ್’, ಕ್ಲೀನ್ ಇಂಡಿಯಾ ಮಿಷನ್, ಉಜ್ವಲದಂತಹ ಯೋಜನೆಗಳು ಜನರಿಗೆ ಪ್ರಯೋಜನವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋಪ್ 26 ಸಮ್ಮೇಳನದಲ್ಲಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಈ ಯೋಜನೆಗಳು ಜನರ ಜೀವನದ ಗುಣಮಟ್ಟವನ್ನು ಸುಧಾರಿಸಿವೆ. ಪರಿಸರ ಅಧ್ಯಯನದ ಬಗ್ಗೆ ನಾವು ಹೆಚ್ಚು ಒತ್ತು ನೀಡಬೇಕು. ಹವಾಮಾನ ಬದಲಾವಣೆಯಿಂದ ಕೃಷಿ ವಲಯಕ್ಕೆ ಹಾನಿ ಆಗಿದೆ. ಪರಿಸರಕ್ಕೆ ಪೂರಕವಾಗಿರುವ ನಿಯಮ ಜಾರಿಗೆ ತರಬೇಕು. ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಾಗತಿಕ ಹವಾಮಾನ ಬದಲಾವಣೆ ಕುರಿತಾಗಿ ಶೃಂಗಸಭೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.

ಜಾಗತಿಕ ಹವಾಮಾನ ಬದಲಾವಣೆ ಕುರಿತು ಮೋದಿ ಭಾಷಣ ಮಾಡಿದ್ದಾರೆ. ಭಾರತ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿರುವ ದೇಶವಾಗಿದೆ. ಭಾರತ ಈಗಾಗಲೇ ಅದರ ಫಲಿತಾಂಶವನ್ನು ತೋರುತ್ತಿದೆ. ಪ್ಯಾರಿಸ್ ಶೃಂಗಸಭೆ ನನಗೆ ಒಂದು ಶೃಂಗಸಭೆಯಲ್ಲ. ಈ ಶೃಂಗಸಭೆ ನನಗೆ ಒಂದು ಭಾವನೆ ಹಾಗೂ ಬದ್ಧತೆ. ಭಾರತವು ಜಗತ್ತಿಗೆ ಭರವಸೆಗಳನ್ನು ನೀಡುತ್ತಿಲ್ಲ, ಬದಲಿಗೆ ಕೋಟ್ಯಂತರ ಜನರನ್ನು ಬಡತನದಿಂದ ಹೊರತರುವ ಕೆಲಸ ಮಾಡುತ್ತಿದೆ. ಬಡತನದಿಂದ ಹೊರತರುವ ಕೆಲಸವನ್ನು ಭಾರತ ಮಾಡ್ತಿದೆ ಎಂದು ಹೇಳಿದ್ದಾರೆ.

ಹವಾಮಾನ ಶೃಂಗಸಭೆಗೆ ಮೊದಲು ಪ್ಯಾರಿಸ್‌ಗೆ ಬಂದಿದ್ದೇನೆ. ಸರ್ವೇ ಜನಾಃ ಸುಖಿನೋ ಭವಂತು ಎಂಬ ಸಂದೇಶ ನೀಡಿದ ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಮಾನವೀಯತೆ ಕಾಳಜಿಯಿಂದ ನಾನು ಇಲ್ಲಿಗೆ ಬಂದಿದ್ದೇನೆ. ಹವಾಮಾನ ಬದಲಾವಣೆ ಬಗ್ಗೆ 5 ಅಮೃತ ತತ್ವ ಪ್ರಸ್ತುತಪಡಿಸ್ತೇನೆ. ಭಾರತದಿಂದ ನಾನು 5 ‘ಅಮೃತ ತತ್ವ’ವನ್ನು ಪ್ರಸ್ತುತಪಡಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಯುಕೆ ತಲುಪಿದ ಪ್ರಧಾನಿ ಮೋದಿ; ಕೋಪ್​ 26 ಶೃಂಗಸಭೆಯಲ್ಲಿ ಭಾಗಿ, ಬ್ರಿಟನ್​ ಪ್ರಧಾನಿಯೊಟ್ಟಿಗೆ ದ್ವಿಪಕ್ಷೀಯ ಮಾತುಕತೆ

ಇದನ್ನೂ ಓದಿ: ರೋಮ್‌ನ ಪ್ರಖ್ಯಾತ ಟ್ರೆವಿ ಫೌಂಟೇನ್‌ಗೆ ನಾಣ್ಯ ಎಸೆದ ಪ್ರಧಾನಿ ಮೋದಿ ಮತ್ತು ಇತರ G20 ನಾಯಕರು

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್