AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COP26 Summit: ಸರ್ವೇ ಜನಾಃ ಸುಖಿನೋ ಭವಂತು ಎಂದ ಭಾರತದ ಪ್ರತಿನಿಧಿಯಾಗಿ ಇಲ್ಲಿದ್ದೇನೆ: ಪ್ರಧಾನಿ ಮೋದಿ ಭಾಷಣ

COP26 Summit: ಹವಾಮಾನ ಬದಲಾವಣೆಯಿಂದ ಕೃಷಿ ವಲಯಕ್ಕೆ ಹಾನಿ ಆಗಿದೆ. ಪರಿಸರಕ್ಕೆ ಪೂರಕವಾಗಿರುವ ನಿಯಮ ಜಾರಿಗೆ ತರಬೇಕು. ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ರೋಮ್​ನಲ್ಲಿ ನಡೆದ ಸಮ್ಮೇಳನದಲ್ಲಿ ಮೋದಿ ಭಾಷಣ ಮಾಡಿದ್ದಾರೆ.

COP26 Summit: ಸರ್ವೇ ಜನಾಃ ಸುಖಿನೋ ಭವಂತು ಎಂದ ಭಾರತದ ಪ್ರತಿನಿಧಿಯಾಗಿ ಇಲ್ಲಿದ್ದೇನೆ: ಪ್ರಧಾನಿ ಮೋದಿ ಭಾಷಣ
ನರೇಂದ್ರ ಮೋದಿ
TV9 Web
| Updated By: ganapathi bhat|

Updated on: Nov 01, 2021 | 10:48 PM

Share

ಗ್ಲಾಸ್ಗೊ: ಜಾಗತಿಕ ಹವಾಮಾನ ಬದಲಾವಣೆ ಕುರಿತು ಮೋದಿ ಭಾಷಣ ಮಾಡಿದ್ದಾರೆ. ಶಾಲೆಗಳಲ್ಲಿ ಪರಿಸರದ ಬಗ್ಗೆ ಕಡ್ಡಾಯವಾಗಿ ಬೋಧಿಸಬೇಕು. ಪಠ್ಯದಲ್ಲಿ ಪರಿಸರ ವಿಷಯ ಕಡ್ಡಾಯವಾಗಿ ಸೇರಿಸಬೇಕು. ಭಾರತದಲ್ಲಿ ‘ನಲ್ ಸೇ ಜಲ್’, ಕ್ಲೀನ್ ಇಂಡಿಯಾ ಮಿಷನ್, ಉಜ್ವಲದಂತಹ ಯೋಜನೆಗಳು ಜನರಿಗೆ ಪ್ರಯೋಜನವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋಪ್ 26 ಸಮ್ಮೇಳನದಲ್ಲಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಈ ಯೋಜನೆಗಳು ಜನರ ಜೀವನದ ಗುಣಮಟ್ಟವನ್ನು ಸುಧಾರಿಸಿವೆ. ಪರಿಸರ ಅಧ್ಯಯನದ ಬಗ್ಗೆ ನಾವು ಹೆಚ್ಚು ಒತ್ತು ನೀಡಬೇಕು. ಹವಾಮಾನ ಬದಲಾವಣೆಯಿಂದ ಕೃಷಿ ವಲಯಕ್ಕೆ ಹಾನಿ ಆಗಿದೆ. ಪರಿಸರಕ್ಕೆ ಪೂರಕವಾಗಿರುವ ನಿಯಮ ಜಾರಿಗೆ ತರಬೇಕು. ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಾಗತಿಕ ಹವಾಮಾನ ಬದಲಾವಣೆ ಕುರಿತಾಗಿ ಶೃಂಗಸಭೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.

ಜಾಗತಿಕ ಹವಾಮಾನ ಬದಲಾವಣೆ ಕುರಿತು ಮೋದಿ ಭಾಷಣ ಮಾಡಿದ್ದಾರೆ. ಭಾರತ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿರುವ ದೇಶವಾಗಿದೆ. ಭಾರತ ಈಗಾಗಲೇ ಅದರ ಫಲಿತಾಂಶವನ್ನು ತೋರುತ್ತಿದೆ. ಪ್ಯಾರಿಸ್ ಶೃಂಗಸಭೆ ನನಗೆ ಒಂದು ಶೃಂಗಸಭೆಯಲ್ಲ. ಈ ಶೃಂಗಸಭೆ ನನಗೆ ಒಂದು ಭಾವನೆ ಹಾಗೂ ಬದ್ಧತೆ. ಭಾರತವು ಜಗತ್ತಿಗೆ ಭರವಸೆಗಳನ್ನು ನೀಡುತ್ತಿಲ್ಲ, ಬದಲಿಗೆ ಕೋಟ್ಯಂತರ ಜನರನ್ನು ಬಡತನದಿಂದ ಹೊರತರುವ ಕೆಲಸ ಮಾಡುತ್ತಿದೆ. ಬಡತನದಿಂದ ಹೊರತರುವ ಕೆಲಸವನ್ನು ಭಾರತ ಮಾಡ್ತಿದೆ ಎಂದು ಹೇಳಿದ್ದಾರೆ.

ಹವಾಮಾನ ಶೃಂಗಸಭೆಗೆ ಮೊದಲು ಪ್ಯಾರಿಸ್‌ಗೆ ಬಂದಿದ್ದೇನೆ. ಸರ್ವೇ ಜನಾಃ ಸುಖಿನೋ ಭವಂತು ಎಂಬ ಸಂದೇಶ ನೀಡಿದ ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಮಾನವೀಯತೆ ಕಾಳಜಿಯಿಂದ ನಾನು ಇಲ್ಲಿಗೆ ಬಂದಿದ್ದೇನೆ. ಹವಾಮಾನ ಬದಲಾವಣೆ ಬಗ್ಗೆ 5 ಅಮೃತ ತತ್ವ ಪ್ರಸ್ತುತಪಡಿಸ್ತೇನೆ. ಭಾರತದಿಂದ ನಾನು 5 ‘ಅಮೃತ ತತ್ವ’ವನ್ನು ಪ್ರಸ್ತುತಪಡಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಯುಕೆ ತಲುಪಿದ ಪ್ರಧಾನಿ ಮೋದಿ; ಕೋಪ್​ 26 ಶೃಂಗಸಭೆಯಲ್ಲಿ ಭಾಗಿ, ಬ್ರಿಟನ್​ ಪ್ರಧಾನಿಯೊಟ್ಟಿಗೆ ದ್ವಿಪಕ್ಷೀಯ ಮಾತುಕತೆ

ಇದನ್ನೂ ಓದಿ: ರೋಮ್‌ನ ಪ್ರಖ್ಯಾತ ಟ್ರೆವಿ ಫೌಂಟೇನ್‌ಗೆ ನಾಣ್ಯ ಎಸೆದ ಪ್ರಧಾನಿ ಮೋದಿ ಮತ್ತು ಇತರ G20 ನಾಯಕರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ