AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾಡ್ ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದ ಪ್ರಧಾನಿ ಮೋದಿ

ಅಮೆರಿಕದಲ್ಲಿ ನಡೆದ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಕ್ವಾಡ್ ಒಕ್ಕೂಟವನ್ನು ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದರು. ಹಾಗೆಯೇ ಈ ಸಂಬಂಧವು ಬಹುದೀರ್ಘಕಾಲದವರೆಗೆ ಇರಲಿದೆ ಹಾಗೂ ವಿಶಿಷ್ಟವಾಗಿರಲಿದೆ ಎಂದು ಮೋದಿ ಹೇಳಿದ್ದಾರೆ. ಭಾರತವು ಮುಂದಿನ ಕ್ವಾಡ್ ಶೃಂಗಸಭೆಯನ್ನು 2025 ರಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ.

ಕ್ವಾಡ್ ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Sep 22, 2024 | 2:20 PM

Share

ಅಮೆರಿಕದಲ್ಲಿ ನಡೆದ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಕ್ವಾಡ್ ಒಕ್ಕೂಟವನ್ನು ಜಗತ್ತಿನ ಒಳಿತಿಗಾಗಿ ಇರುವ ಒಂದು ಶಕ್ತಿ ಎಂದು ವರ್ಣಿಸಿದರು. ಹಾಗೆಯೇ ಈ ಸಂಬಂಧವು ಬಹುದೀರ್ಘಕಾಲದವರೆಗೆ ಇರಲಿದೆ ಹಾಗೂ ವಿಶಿಷ್ಟವಾಗಿರಲಿದೆ ಎಂದು ಮೋದಿ ಹೇಳಿದ್ದಾರೆ. ಭಾರತವು ಮುಂದಿನ ಕ್ವಾಡ್ ಶೃಂಗಸಭೆಯನ್ನು 2025 ರಲ್ಲಿ ಆಯೋಜಿಸಲು ಒಪ್ಪಿಕೊಂಡಿದೆ.

ಕ್ವಾಡ್ ಭಾರತ, ಯುಎಸ್, ಜಪಾನ್ ಮತ್ತು ಆಸ್ಟ್ರೇಲಿಯಾದಿಂದ ರಚಿಸಲ್ಪಟ್ಟ ಒಂದು ಗುಂಪಾಗಿದ್ದು ಅದು ಈ ದೇಶಗಳ ನಡುವಿನ ಅನೌಪಚಾರಿಕ ಕಾರ್ಯತಂತ್ರದ ಸಂವಾದಕ್ಕೆ ವೇದಿಕೆಯನ್ನು ಒದಗಿಸುತ್ತದೆ. ಭಾರತದ ಸಶಸ್ತ್ರ ಪಡೆಗಳ ಗುಪ್ತಚರ, ಕಣ್ಗಾವಲು ಮತ್ತು ವಿಚಕ್ಷಣ ಸಾಮರ್ಥ್ಯಗಳನ್ನು ಹೆಚ್ಚಿಸುವ 31 ಜನರಲ್‌ ಅಟಾಮಿಕ್ಸ್​ ಎಂಕ್ಯೂ-9ಬಿ ಡ್ರೋನ್​ಗಳ ಖರೀದಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಬೈಡನ್‌ ಅವರಿಂದ ಗ್ರೀನ್‌ ಸಿಗ್ನಲ್‌ ಸಹ ಸಿಕ್ಕಿದೆ ಎಂದು ಹೇಳಲಾಗಿದೆ.

ಆರೋಗ್ಯ, ಭದ್ರತೆ, ನಿರ್ಣಾಯಕ ಉದಯೋನ್ಮುಖ ತಂತ್ರಜ್ಞಾನಗಳು, ಹವಾಮಾನ ಬದಲಾವಣೆ ಮತ್ತು ಸಾಮರ್ಥ್ಯ ನಿರ್ಮಾಣದಂತಹ ಕ್ಷೇತ್ರಗಳಲ್ಲಿ ಕ್ವಾಡ್ ದೇಶಗಳು ಅನೇಕ ಸಕಾರಾತ್ಮಕ ಮತ್ತು ಅಂತರ್ಗತ ಉಪಕ್ರಮಗಳನ್ನು ತೆಗೆದುಕೊಂಡಿವೆ ಎಂದರು. ಅಂತೆಯೇ 2025 ರಲ್ಲಿ ಭಾರತದಲ್ಲಿ ಕ್ವಾಡ್ ಶೃಂಗಸಭೆಯನ್ನು ಆಯೋಜಿಸುವ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಮತ್ತಷ್ಟು ಓದಿ: ಪುರಾತನ ಬೆಳ್ಳಿಯಿಂದ ಮಾಡಿದ ರೈಲು ಮಾದರಿಯನ್ನು ಜೋ ಬೈಡನ್​ಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

ಇದೇ ವೇಳೆ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಚೀನಾ ಕ್ವಾಡ್‌ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ. ಷಿ ಜಿನ್‌ಪಿಂಗ್‌ (ಚೀನಾ ಅಧ್ಯಕ್ಷ) ದೇಶೀಯ ಆರ್ಥಿಕ ಸವಾಲುಗಳು ಹಾಗೂ ಪ್ರಕ್ಷುಬ್ಧತೆಯನ್ನು ನಿಯಂತ್ರಿಸುವುದರ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಭಾವಿಸಿದ್ದೇವೆ.

ದೇಶದ ಹಿತದೃಷ್ಟಿಯಿಂದ ಅವರು ಆಕ್ರಮಣಕಾರಿಯಾಗಿ ಸಾಗುತ್ತಿದ್ದಾರೆ ಎಂದು ನನಗನಿಸುತ್ತಿದೆ ಎಂದರು. ಅಮೆರಿಕದ ಡೆಲವೇರ್​ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮೂರು ದಿನಗಳ ಅಮೆರಿಕ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ಅಮೆರಿಕದ ಫಿಲಡೆಲ್ಫಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೊದಲು, ಅವರು ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಪ್ರದೇಶಗಳಲ್ಲಿ ಪ್ರಾದೇಶಿಕ ವಿವಾದಗಳನ್ನು ಚೀನಾ ಸೃಷ್ಟಿಸಿದೆ. ದಕ್ಷಿಣ ಚೀನಾ ಸಮುದ್ರದ ಮೇಲೆ ಸಾರ್ವಭೌಮತ್ವ ಪ್ರತಿಪಾದಿಸುತ್ತಿರುವ ಚೀನಾ ನಡೆಯನ್ನು ವಿಯೆಟ್ನಾಂ, ಮಲೇಷ್ಯಾ, ಫಿಲಿಪ್ಪೀನ್ಸ್‌, ಬ್ರೂನೈ ಮತ್ತು ತೈವಾನ್ ತೀವ್ರವಾಗಿ ವಿರೋಧಿಸುತ್ತಿವೆ.

ಭಾಷಣಕಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಮತ್ತು ಪ್ರಸಾರ ಮಾಡಲು ಹಾಟ್ ಮೈಕ್‌ ಅಥವಾ ಮೈಕ್ರೊಫೋನ್‌ ಬಳಸಲಾಗುತ್ತದೆ. ಭಾಷಣಕಾರರು ಇಲ್ಲದ ಸಂದರ್ಭದಲ್ಲಿಯೂ ಅವುಗಳನ್ನು ಬಳಸಬಹುದು. ದಾಖಲಿಸಲಾಗಿರುವ ಧ್ವನಿ ಕೆಲವೊಮ್ಮೆ ಭಾಷಣಕಾರರ ಅರಿವಿಗೆ ಬಾರದೆ ಪ್ರಸಾರವಾಗುತ್ತವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ