ಪುರಾತನ ಬೆಳ್ಳಿಯಿಂದ ಮಾಡಿದ ರೈಲು ಮಾದರಿಯನ್ನು ಜೋ ಬೈಡನ್​ಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಪ್ರವಾಸದಲ್ಲಿ ಸದ್ಯ ಅಮೆರಿಕದಲ್ಲಿದ್ದಾರೆ. ಅವರು ಸೆಪ್ಟೆಂಬರ್ 21 ರಂದು ಅಮೆರಿಕವನ್ನು ತಲುಪಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಲಾಯಿತು.

ಪುರಾತನ ಬೆಳ್ಳಿಯಿಂದ ಮಾಡಿದ ರೈಲು ಮಾದರಿಯನ್ನು ಜೋ ಬೈಡನ್​ಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ
ರೈಲು
Follow us
|

Updated on: Sep 22, 2024 | 11:44 AM

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಪ್ರವಾಸದಲ್ಲಿ ಸದ್ಯ ಅಮೆರಿಕದಲ್ಲಿದ್ದಾರೆ. ಅವರು ಸೆಪ್ಟೆಂಬರ್ 21 ರಂದು ಅಮೆರಿಕವನ್ನು ತಲುಪಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಲಾಯಿತು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಜಿಲ್ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಪುರಾತನ ಬೆಳ್ಳಿಯಿಂದ ತಯಾರಿಸಿದ ರೈಲು ಮಾದರಿಯನ್ನು ಅಧ್ಯಕ್ಷ ಜೋ ಬೈಡನ್ ಅವರಿಗೆ ನೀಡಿದ್ದಾರೆ. ಪ್ರಥಮ ಮಹಿಳೆ ಜಿಲ್​ಗೆ ಪಶ್ಮಿನಾ ಶಾಲು ನೀಡಿದ್ದಾರೆ. ಈ ರೈಲಿನ ಮಾದರಿಯು 92.5 ಬೆಳ್ಳಿಯಿಂದ ಮಾಡಲ್ಪಟ್ಟಿದೆ.

ಈ ಮಾದರಿಯಲ್ಲಿ “ದೆಹಲಿ – ಡೆಲವೇರ್” ಎಂದು ಬರೆಯಲಾಗಿದೆ. ಇದಲ್ಲದೆ ಇಂಜಿನ್‌ನ ಬದಿಗಳಲ್ಲಿ ಭಾರತೀಯ ರೈಲ್ವೆ ಎಂದು ಬರೆಯಲಾಗಿದೆ. ಈ ಪೆಟ್ಟಿಗೆಗಳನ್ನು ಕೈಯಿಂದ ತಯಾರಿಸಲಾಗುತ್ತದೆ ಮತ್ತು ಕಾಗದ, ಅಂಟು ಮತ್ತು ನೈಸರ್ಗಿಕ ವಸ್ತುಗಳನ್ನು ಮಾತ್ರ ಬಳಸಲಾಗುತ್ತದೆ. ಪ್ರತಿ ಪೆಟ್ಟಿಗೆಯ ಮೇಲಿನ ಕಲಾಕೃತಿಗಳು ವಿಭಿನ್ನವಾಗಿದ್ದು, ಕಾಶ್ಮೀರಿ ಕಲೆಯನ್ನು ಪ್ರತಿಬಿಂಬಿಸುತ್ತದೆ.

ಮತ್ತಷ್ಟು ಓದಿ: Quad Summit 2024: ನಾವು ಯಾರ ವಿರುದ್ಧವೂ ಅಲ್ಲ, ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು

ಪ್ರಧಾನಿ ಮೋದಿ ಅವರು ಅಮೆರಿಕದ ಪ್ರಥಮ ಮಹಿಳೆಗೆ ಪೇಪರ್ ಮ್ಯಾಚ್ ಬಾಕ್ಸ್‌ನಲ್ಲಿ ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಸಾಧಾರಣ ಗುಣಮಟ್ಟದ ಮತ್ತು ಅನನ್ಯ ಸೌಂದರ್ಯದ ಪಶ್ಮಿನಾ ಶಾಲುಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಸಿದ್ಧಪಡಿಸಲಾಗಿದೆ. ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದ ಉನ್ನತ ನಾಯಕರು ಕ್ವಾಡ್ ಸಭೆಯಲ್ಲಿ ಭಾಗವಹಿಸಿದ್ದಾರೆ.

ಈ ಮೇರುಕೃತಿಯು ಕುಶಲಕರ್ಮಿಗಳ ಅಸಾಧಾರಣ ಕೌಶಲ್ಯಗಳನ್ನು ಎತ್ತಿ ತೋರಿಸುತ್ತದೆ ಮಾತ್ರವಲ್ಲದೆ ಭಾರತೀಯ ರೈಲ್ವೆಯ ಸುದೀರ್ಘ ಇತಿಹಾಸವನ್ನು ಹೇಳುತ್ತದೆ.

ಕ್ವಾಡ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಅಧ್ಯಕ್ಷ ಜೋ ಬೈಡನ್ 297 ಪುರಾತನ ವಸ್ತುಗಳನ್ನು ಹಸ್ತಾಂತರಿಸಿದರು. 2014 ರಿಂದ ಭಾರತಕ್ಕೆ ಹಸ್ತಾಂತರಿಸಲಾದ ಪ್ರಾಚೀನ ವಸ್ತುಗಳ ಒಟ್ಟು ಸಂಖ್ಯೆ 640 ಕ್ಕೆ ಏರಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ