AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಹಬ್ಬಾಸ್ ಹುಡುಗ; ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ನರೇಂದ್ರ ಮೋದಿ

ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜನದ ಪ್ಲೆಕಾರ್ಡ್​ ಹಿಡಿದು, ಮೋದಿ ಅವರೊಂದಿಗೆ ಹಿಂದಿಯಲ್ಲಿ ಮೂರು ವಾಕ್ಯ ಮಾತನಾಡಿದ.

Video: ಶಹಬ್ಬಾಸ್ ಹುಡುಗ; ಜಪಾನಿ ಮಗು ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಿಂದಿಯಲ್ಲಿ ಮಾತನಾಡಿದ ಬಾಲಕ
TV9 Web
| Edited By: |

Updated on:May 23, 2022 | 12:12 PM

Share

ಟೊಕಿಯೊ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ಭೇಟಿಗಾಗಿ ಜಪಾನ್​ಗೆ ಭೇಟಿ ನೀಡಿದ್ದಾರೆ. ಜಪಾನ್ ರಾಜಧಾನಿ ಟೋಕಿಯೊದಲ್ಲಿ ಮೋದಿ ಅವರಿಗೆ ಭಾರತೀಯರು ಸಂಭ್ರಮದ ಸ್ವಾಗತ ನೀಡಿದರು. ಈ ವೇಳೆ ಜಪಾನಿ ಬಾಲಕನೊಬ್ಬ ಭಾರತದ ತ್ರಿವರ್ಣ ಧ್ವಜನದ ಪ್ಲೆಕಾರ್ಡ್​ ಹಿಡಿದು, ಮೋದಿ ಅವರೊಂದಿಗೆ ಹಿಂದಿಯಲ್ಲಿ ಮೂರು ವಾಕ್ಯ ಮಾತನಾಡಿದ. ಇದನ್ನು ಕೇಳಿ ಮೋದಿ ಖುಷಿಯಿಂದ ಹಸ್ತಾಕ್ಷರ ಹಾಕಿದ್ದಷ್ಟೇ ಅಲ್ಲದೆ, ಬಾಲಕನ ತಲೆ ನೇವರಿಸಿದರು. ‘ವಾವ್, ನೀನು ಹಿಂದಿ ಎಲ್ಲಿ ಕಲಿತೆ? ನಿನಗೆ ಹಿಂದೆ ಚೆನ್ನಾಗಿ ಬರುತ್ತಾ?’ ಎಂದು ಮೋದಿ ಪ್ರಶ್ನಿಸಿದರು.

‘ನನಗೆ ಹಿಂದಿ ಹೆಚ್ಚು ಮಾತನಾಡೋಕೆ ಬರುವುದಿಲ್ಲ. ಆದರೆ ಅರ್ಥವಾಗುತ್ತೆ. ಮುಂದೆ ಇನ್ನೂ ಚೆನ್ನಾಗಿ ಕಲೀತೀನಿ. ಮೋದಿ ಅವರೊಂದಿಗೆ ಮಾತನಾಡೋಕೆ ಅಂತ ಮೂರು ವಾಕ್ಯ ಅಭ್ಯಾಸ ಮಾಡಿಕೊಂಡು ಬಂದಿದ್ದೆ’ ಎಂದು ಮೋದಿ ಅವರ ಮೆಚ್ಚುಗೆಗೆ ಪಾತ್ರನಾದ ಜಪಾನಿ ಬಾಲಕ ವಿಝುಕಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮುಂಜಾನೆ ಜಪಾನ್​ಗೆ ಬಂದಿಳಿದಿದ್ದು, ಕ್ವಾಡ್ ಸಮಾವೇಶ ಮತ್ತು ಹಲವು ದ್ವಿಪಕ್ಷೀಯ ಮಾತುಕತೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಅಭಿವೃದ್ಧಿ ಸಂಬಂಧ ಹಲವು ಮಹತ್ವದ ಮಾತುಕತೆಗಳು ಈ ಸಂದರ್ಭದಲ್ಲಿ ನಡೆಯಲಿವೆ. ‘ಟೋಕಿಯೊದಲ್ಲಿ ಲ್ಯಾಂಡ್ ಆದೆ. ಕ್ವಾಡ್ ಸಮಾವೇಶವೂ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೇನೆ. ಕ್ವಾಡ್​ ದೇಶಗಳ ನಾಯಕರನ್ನು ಭೇಟಿಯಾಗುವುದರೊಂದಿಗೆ ಜಪಾನ್ ಪ್ರಧಾನಿ, ಉದ್ಯಮಿಗಳು ಮತ್ತು ಜಪಾನ್​ನಲ್ಲಿ ನೆಲೆಸಿರುವ ಭಾರತೀಯರೊಂದಿಗೂ ಮಾತನಾಡುತ್ತೇನೆ’ ಎಂದು ಮೋದಿ (PM Narendra Modi) ಜಪಾನೀಸ್ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟ್ವೀಟ್ ಮಾಡಿದ್ದಾರೆ.

‘ಕ್ವಾಡ್​ ನಾಯಕರೊಂದಿಗೆ ಎರಡನೇ ಬಾರಿಗೆ ಮುಖತಃ ಮಾತುಕತೆ ನಡೆಯುತ್ತಿದೆ. ಕ್ವಾಡ್​ ಉಪಕ್ರಮಗಳ ಪ್ರಗತಿ ಬಗ್ಗೆ ವಿವಿಧ ದೇಶಗಳು ಸಾಧಿಸಿರುವ ಪ್ರಗತಿ ಕುರಿತು ಈ ವೇಳೆ ಪರಿಶೀಲನೆ ನಡೆಯಲಿದೆ’ ಎಂದು ಮೋದಿ ಅವರು ತಮ್ಮ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದರು. ‘ಇಂಡೋ-ಪೆಸಿಫಿಕ್ ವಲಯದ ಬೆಳವಣಿಗೆಗಳ ಜೊತೆಗೆ ಪರಸ್ಪರ ಆಸಕ್ತಿಯಿರುವ ಜಾಗತಿಕ ವಿದ್ಯಮಾನಗಳ ಬಗ್ಗೆಯೂ ವಿವಿಧ ದೇಶಗಳ ನಾಯಕರು ಈ ಸಂದರ್ಭದಲ್ಲಿ ವಿಚಾರ ವಿನಿಮಯ ನಡೆಸಲಿದ್ದಾರೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿಯ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Published On - 8:56 am, Mon, 23 May 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ