PM Modi in UAE: ಪ್ರಧಾನಿ ಮೋದಿಗಾಗಿ ಸಸ್ಯಾಹಾರ ಭೋಜನಕೂಟ ಆಯೋಜಿಸಿದ ಯುಎಇ ಅಧ್ಯಕ್ಷ ಅಲ್ ನಹ್ಯಾನ್

ಯುಎಇ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, "ನೀವು ನನಗೆ ನೀಡಿದ ಗೌರವ, ಸಹೋದರನೊಬ್ಬ ತನ್ನ ಸಹೋದರನನ್ನು ಭೇಟಿ ಮಾಡಿದಂತೆಯೇ. ಇದಕ್ಕಿಂತ ಬಾಂಧವ್ಯಕ್ಕೆ ಇನ್ನೊಂದು ಪುರಾವೆ ಇಲ್ಲ" ಎಂದು ಹೇಳಿದರು

PM Modi in UAE: ಪ್ರಧಾನಿ ಮೋದಿಗಾಗಿ ಸಸ್ಯಾಹಾರ ಭೋಜನಕೂಟ ಆಯೋಜಿಸಿದ ಯುಎಇ ಅಧ್ಯಕ್ಷ ಅಲ್ ನಹ್ಯಾನ್
ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ
Follow us
|

Updated on:Jul 15, 2023 | 8:27 PM

ಅಬುಧಾಬಿ ಜುಲೈ 15: ಪ್ರಧಾನಿ ನರೇಂದ್ರ ಮೋದಿ (Narendra Modi) ಒಂದು ದಿನದ ಭೇಟಿಗಾಗಿ ಅಬುಧಾಬಿ ತಲುಪಿದ್ದು, ಅಲ್ಲಿ ಅವರಿಗೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Mohamed bin Zayed al Nahyan) ಔತಣಕೂಟ ಏರ್ಪಡಿಸಿದ್ದಾರೆ. ಈ ಔತಣಕೂಟದಲ್ಲಿ ಸಸ್ಯಾಹಾರವನ್ನೇ ಬಡಿಸಲಾಗಿದೆ. ಔತಣಕೂಟದ ಮೆನು ಕಾರ್ಡ್‌ನಲ್ಲಿ ಎಲ್ಲಾ ಊಟಗಳು ಸಸ್ಯಾಹಾರಿ ಮತ್ತು ಸಸ್ಯಜನ್ಯ ಎಣ್ಣೆಗಳಿಂದ ತಯಾರಿಸಿದ್ದು. ಯಾವುದೇ ಡೈರಿ ಅಥವಾ ಮೊಟ್ಟೆಯ ಉತ್ಪನ್ನಗಳನ್ನು ಹೊಂದಿರುವುದಿಲ್ಲ ಎಂದು ಬರೆಯಲಾಗಿದೆ.

ಅಧ್ಯಕ್ಷರ ಅರಮನೆಯಾದ ಕಸ್ರ್-ಅಲ್-ವತನ್ ನಲ್ಲಿ ನಡೆದ ಔತಣಕೂಟದಲ್ಲಿ ಮೊದಲಿಗೆ ಗೋಧಿ ಮತ್ತು ಖರ್ಜೂರದ ಜತೆ ಸ್ಥಳೀಯ ಸಾವಯವ ತರಕಾರಿಗಳ ಸಲಾಡ್ ಬಡಿಸಲಾಗಿದೆ. ನಂತರ ಮಸಾಲಾ ಸಾಸ್‌ನೊಂದಿಗೆ ಗ್ರಿಲ್ಡ್ ತರಕಾರಿಗಳನ್ನು ನೀಡಲಾಗಿದೆ. ಇದಾದ ಮೇಲೆ  ಹೂಕೋಸು ಮತ್ತು ಕ್ಯಾರೆಟ್ ತಂದೂರಿಯೊಂದಿಗೆ ಕಪ್ಪು ಉದ್ದಿನ ಬೇಳೆ ಮತ್ತು ಸ್ಥಳೀಯ ಗೋಧಿಯಿಂದ ಮಾಡಿದ ಭಕ್ಷ್ಯ ನೀಡಲಾಗಿದೆ. ಸಿಹಿತಿಂಡಿಗಳಿಗಾಗಿ ವಿವಿಧ ಹಣ್ಣುಗಳನ್ನು ನೀಡಲಾಯಿತು.

Menu

ಮೆನು

ಅಧ್ಯಕ್ಷರ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಭವ್ಯ ಸ್ವಾಗತ ನೀಡಲಾಯಿತು. ಯುಎಇ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, “ನೀವು ನನಗೆ ನೀಡಿದ ಗೌರವ, ಸಹೋದರನೊಬ್ಬ ತನ್ನ ಸಹೋದರನನ್ನು ಭೇಟಿ ಮಾಡಿದಂತೆಯೇ. ಇದಕ್ಕಿಂತ ಬಾಂಧವ್ಯಕ್ಕೆ ಇನ್ನೊಂದು ಪುರಾವೆ ಇಲ್ಲ” ಎಂದು ಹೇಳಿದರು. ಯುಎಇಯಲ್ಲಿ ನಡೆಯಲಿರುವ COP-28 ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ ಪ್ರಧಾನಿ, ನಾವು (ಭಾರತ-ಯುಎಇ) ಮೂರು ತಿಂಗಳೊಳಗೆ ಐತಿಹಾಸಿಕ ಒಪ್ಪಂದಗಳಿಗೆ ಸಹಿ ಹಾಕಿದ್ದೇವೆ, ಅದು ನಿಮ್ಮ ಸಹಕಾರ ಮತ್ತು ಬದ್ಧತೆಯಿಲ್ಲದೆ ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: PM Modi UAE Visit: ಅರಬ್ ರಾಷ್ಟ್ರಕ್ಕೆ ಮೋದಿ ಆಗಮನ, ಆತ್ಮೀಯವಾಗಿ ಬರಮಾಡಿಕೊಂಡ ಯುಎಇ ಕ್ರೌನ್ ಪ್ರಿನ್ಸ್

ಭಾರತ-ಯುಎಇ ದ್ವಿಪಕ್ಷೀಯ ವ್ಯಾಪಾರವು 20 ಪ್ರತಿಶತದಷ್ಟು ಬೆಳೆದಿದೆ.ಎರಡೂ ದೇಶಗಳು $ 85 ಬಿಲಿಯನ್  ವ್ಯಾಪಾರವನ್ನು ಸಾಧಿಸಿವೆ.”ನಾವು ಶೀಘ್ರದಲ್ಲೇ $ 100 ಬಿಲಿಯನ್ ಗುರಿಯನ್ನು ಸಾಧಿಸುತ್ತೇವೆ ಎಂದಿದ್ದಾರೆ ಮೋದಿ. ಯುಎಇ ಅಧ್ಯಕ್ಷರನ್ನು ಭೇಟಿ ಮಾಡುವ ಮೊದಲು, ಪ್ರಧಾನಿ ಮೋದಿ ಯುಎನ್ ಹವಾಮಾನ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಸುಲ್ತಾನ್ ಅಲ್ ಜಾಬರ್ ಅವರೊಂದಿಗೆ ಸಭೆ ನಡೆಸಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sat, 15 July 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ