AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi UAE Visit: ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿ

ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ, ಆರತಿ ಮಾಡಿದ್ದಾರೆ.ಯುಎಇ ಪ್ರವಾಸದಲ್ಲಿರುವ ಮೋದಿ ಬುಧವಾರ ಸಂಜೆ BAPS ಮಂದಿರಕ್ಕೆ ತಲುಪಿದ್ದು ಅಲ್ಲಿ ಅವರನ್ನು ಈಶ್ವರಚರಣದಾಸ್ ಸ್ವಾಮಿಯವರು ಸ್ವಾಗತಿಸಿದ್ದಾರೆ.

PM Modi UAE Visit: ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Feb 14, 2024 | 8:09 PM

Share

ಅಬುಧಾಬಿ ಫೆಬ್ರುವರಿ 14: ಪ್ರಧಾನಮಂತ್ರಿ ನರೇಂದ್ರ ಮೋದಿಯವರು(Narendra Modi) ಬುಧವಾರ ಅಬುಧಾಬಿಯ (Abudabhi) ಮೊದಲ ಹಿಂದೂ ದೇವಾಲಯವನ್ನು ಭಕ್ತಿ ಪಠಣಗಳ ನಡುವೆ ಮತ್ತು ಸ್ವಾಮಿನಾರಾಯಣ ಪಂಥದ ಆಧ್ಯಾತ್ಮಿಕ ನಾಯಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ತಿಳಿ ಗುಲಾಬಿ ಬಣ್ಣದ ರೇಷ್ಮೆ ಧೋತಿ ಮತ್ತು ಕುರ್ತಾ, ತೋಳಿಲ್ಲದ ಜಾಕೆಟ್‌ ಧರಿಸಿದ್ದ ಪ್ರಧಾನಿ, ದೇವಾಲಯವನ್ನು ಜನರಿಗೆ ಅರ್ಪಿಸುವ ಸಮಾರಂಭದ ಆಚರಣೆಗಳಲ್ಲಿ ಭಾಗವಹಿಸಿದರು. ಬೋಚಸನ್‌ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ನಿರ್ಮಿಸಿದ ಸ್ವಾಮಿನಾರಾಯಣ ಪಂಥದ 1,200 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶಿಸಲಾದ “ಗ್ಲೋಬಲ್ ಆರತಿ” ಯಲ್ಲಿಯೂ ಪ್ರಧಾನಿ ಭಾಗವಹಿಸಿದರು.

ಇದಕ್ಕೂ ಮೊದಲು, ಇಲ್ಲಿ ಕಲ್ಲಿನಿಂದ ನಿರ್ಮಿಸಿದ ಮೊದಲ ಹಿಂದೂ ದೇವಾಲಯದ ನಿರ್ಮಾಣಕ್ಕೆ ಕೊಡುಗೆ ನೀಡಿದ ವಿವಿಧ ಧರ್ಮಗಳ ಜನರನ್ನು ಮೋದಿ ಭೇಟಿ ಮಾಡಿದರು. ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮ್ರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ದೇವಾಲಯವನ್ನು ಉದ್ಘಾಟಿಸುವ ಮೊದಲು ಪ್ರಧಾನಿ ಅವರು ದೇವಾಲಯದಲ್ಲಿ ವರ್ಚುವಲ್ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರನ್ನು ಅರ್ಪಿಸಿದರು.

ದೇವಾಲಯದ ಅಧಿಕಾರಿಗಳ ಪ್ರಕಾರ, ಮಂದಿರದ ವಿನ್ಯಾಸ ಮತ್ತು ನಿರ್ಮಾಣದ ಕಲೆಯನ್ನು ವಿವರಿಸುವ ಹಿಂದೂ ಧರ್ಮಗ್ರಂಥಗಳಾದ ಶಿಲ್ಪ ಮತ್ತು ಸ್ಥಾಪತ್ಯ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾದ ಪ್ರಾಚೀನ ಶೈಲಿಯ ನಿರ್ಮಾಣ ಮತ್ತು ರಚನೆಯ ಪ್ರಕಾರ ಭವ್ಯವಾದ ದೇವಾಲಯವನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ:  ಜಗತ್ತಿಗೆ ಸ್ವಚ್ಛ, ಪಾರದರ್ಶಕ, ತಂತ್ರಜ್ಞಾನದ ಅರಿವಿರುವ ಸರ್ಕಾರಗಳ ಅಗತ್ಯವಿದೆ: ಯುಎಇಯಲ್ಲಿ ಪ್ರಧಾನಿ ಮೋದಿ

“ವಾಸ್ತುಶಾಸ್ತ್ರದ ವಿಧಾನಗಳನ್ನು ಇಲ್ಲಿ ವೈಜ್ಞಾನಿಕ ತಂತ್ರಗಳೊಂದಿಗೆ ಸಂಯೋಜಿಸಲಾಗಿದೆ. ತಾಪಮಾನ, ಒತ್ತಡ ಮತ್ತು ಚಲನೆಯನ್ನು (ಭೂಕಂಪನ ಚಟುವಟಿಕೆ) ಅಳೆಯಲು ದೇವಾಲಯದ ಪ್ರತಿ ಹಂತದಲ್ಲಿ 300 ಕ್ಕೂ ಹೆಚ್ಚು ಹೈಟೆಕ್ ಸಂವೇದಕಗಳನ್ನು ಸ್ಥಾಪಿಸಲಾಗಿದೆ. ಸಂವೇದಕಗಳು ಸಂಶೋಧನೆಗಾಗಿ ಲೈವ್ ಡೇಟಾವನ್ನು ಒದಗಿಸುತ್ತವೆ. ಈ ಪ್ರದೇಶದಲ್ಲಿ ಯಾವುದೇ ಭೂಕಂಪ ಸಂಭವಿಸಿದರೆ, ದೇವಾಲಯವು ಅದನ್ನು ಪತ್ತೆ ಮಾಡುತ್ತದೆ ಮತ್ತು ನಾವು ಅಧ್ಯಯನ ಮಾಡಲು ಸಾಧ್ಯವಾಗುತ್ತದೆ ”ಎಂದು BAPS ನ ಅಂತರರಾಷ್ಟ್ರೀಯ ಸಂಬಂಧಗಳ ಮುಖ್ಯಸ್ಥ ಸ್ವಾಮಿ ಬ್ರಹ್ಮವಿಹಾರಿದಾಸ್ ಪಿಟಿಐಗೆ ತಿಳಿಸಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Wed, 14 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ