Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದ 1996ರ ವಿಶ್ವಕಪ್ ಹೀರೋಗಳ ಜೊತೆ ಮೋದಿ ಸಂವಾದ; ಪ್ರಧಾನಿಯ ಸರಳತನಕ್ಕೆ ಮಾರುಹೋದ ಕ್ರಿಕೆಟ್ ದಿಗ್ಗಜರು

ಶ್ರೀಲಂಕಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಶ್ರೀಲಂಕಾದ 1996ರ ವಿಶ್ವಕಪ್ ಗೆದ್ದ ಹಿರಿಯ ಕ್ರಿಕೆಟಿಗರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊಲಂಬೋದಲ್ಲಿ ಶ್ರೀಲಂಕನ್ ಕ್ರಿಕೆಟಿಗರಾದ ಸನತ್ ಜಯಸೂರ್ಯ, ಚಾಮಿಂಡಾ ವಾಸ್, ಅರವಿಂದ ಡಿ. ಸಿಲ್ವಾ, ಮಾರ್ವನ್ ಅಟಪಟ್ಟು ಮತ್ತು ಇತರ ಶ್ರೀಲಂಕಾದ ಕ್ರಿಕೆಟಿಗರೊಂದಿಗೆ ಸಂವಾದ ನಡೆಸಿದ್ದಾರೆ. ನಿನ್ನೆ ಸಂಜೆ ಬ್ಯಾಂಕಾಕ್​ನಿಂದ ಪ್ರಧಾನಿ ಮೋದಿ ಶ್ರೀಲಂಕಾ ಪ್ರವಾಸಕ್ಕಾಗಿ ಕೊಲಂಬೋಗೆ ತಲುಪಿದ್ದರು.

ಶ್ರೀಲಂಕಾದ 1996ರ ವಿಶ್ವಕಪ್ ಹೀರೋಗಳ ಜೊತೆ ಮೋದಿ ಸಂವಾದ; ಪ್ರಧಾನಿಯ ಸರಳತನಕ್ಕೆ ಮಾರುಹೋದ ಕ್ರಿಕೆಟ್ ದಿಗ್ಗಜರು
Pm Modi With Sri Lankan Cricketers
Follow us
ಸುಷ್ಮಾ ಚಕ್ರೆ
|

Updated on: Apr 05, 2025 | 9:21 PM

ಕೊಲಂಬೊ, ಏಪ್ರಿಲ್ 5: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ರೀಲಂಕಾಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು 1996ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಕೆಲವು ಸದಸ್ಯರೊಂದಿಗೆ ಸಂವಾದ ನಡೆಸಿದರು. ಭಾರತದ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಶ್ರೀಲಂಕಾದ ಕ್ರಿಕೆಟ್ ತಾರೆಗಳೊಂದಿಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “1996ನೇ ವರ್ಷ ವಿಶ್ವಕಪ್ ಗೆದ್ದ ಶ್ರೀಲಂಕಾ ಕ್ರಿಕೆಟ್ ತಂಡದ ಸದಸ್ಯರೊಂದಿಗೆ ಸಂವಹನ ನಡೆಸಲು ಸಂತೋಷವಾಯಿತು. ಈ ತಂಡವು ಅಸಂಖ್ಯಾತ ಕ್ರೀಡಾ ಪ್ರೇಮಿಗಳ ಕಲ್ಪನೆಯನ್ನು ಸೆರೆಹಿಡಿದಿದೆ!” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಮಾರ್ಚ್ 17ರಂದು ಲಾಹೋರ್‌ನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಅರ್ಜುನ ರಣತುಂಗ ನೇತೃತ್ವದ ತಂಡ ಆಸ್ಟ್ರೇಲಿಯಾವನ್ನು 7 ವಿಕೆಟ್‌ಗಳು ಮತ್ತು ಇನ್ನೂ 22 ಎಸೆತಗಳು ಬಾಕಿ ಇರುವಂತೆ ಸೋಲಿಸುವಲ್ಲಿ ಯಶಸ್ವಿಯಾಯಿತು. ಅರವಿಂದ ಡಿ ಸಿಲ್ವಾ ಅವರ ಅಜೇಯ 107 ರನ್‌ಗಳು, ಅಸಂಕ ಗುರುಸಿನ್ಹ ಅವರ 99 ಎಸೆತಗಳಲ್ಲಿ 65 ರನ್‌ಗಳು ಮತ್ತು ಅರ್ಜುನ ರಣತುಂಗ ಅವರ 37 ಎಸೆತಗಳಲ್ಲಿ 47 ರನ್‌ಗಳ ವೇಗದ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ತಂಡವು ತಮ್ಮ ಮೊದಲ ಮತ್ತು ಏಕೈಕ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಯಿತು.

ಇದನ್ನೂ ಓದಿ
Image
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
Image
ಬಾಂಗ್ಲಾದ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆ ಬಗ್ಗೆ ಮೋದಿ ಕಳವಳ
Image
ಚೀನಾ ಓಲೈಕೆಗೆ ಭಾರತದ ಹೆಸರು ಎತ್ತಿದ್ದ ಯೂನಸ್​ನನ್ನು ಭೇಟಿಯಾದ ಮೋದಿ
Image
ರಾಮಾಯಣದ ಕಥೆಗಳು ಥಾಯ್ ಜನರ ಜೀವನದ ಭಾಗವಾಗಿದೆ; ಥೈಲ್ಯಾಂಡ್‌ನಲ್ಲಿ ಮೋದಿ

ಇದನ್ನೂ ಓದಿ: ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ಮಿತ್ರ ವಿಭೂಷಣ ಪ್ರಶಸ್ತಿ ಪ್ರದಾನ

“ಇದು ಒಂದು ಉತ್ತಮ ಸಂವಾದವಾಗಿತ್ತು. ಈ ವೇಳೆ ನಾವು ಹಲವು ವಿಷಯಗಳನ್ನು ಚರ್ಚಿಸಿದ್ದೇವೆ ಮತ್ತು ಕ್ರಿಕೆಟ್ ಬಗ್ಗೆ ಮಾತನಾಡಿದ್ದೇವೆ. ಮೋದಿ ಅವರು ಹೇಗೆ ಅಧಿಕಾರ ವಹಿಸಿಕೊಂಡರು ಮತ್ತು ಅವರು ದೇಶವನ್ನು ಹೇಗೆ ಅಭಿವೃದ್ಧಿಪಡಿಸಿದರು ಎಂಬುದರ ಬಗ್ಗೆ ಮಾತನಾಡಿದ್ದು ನಮಗೂ ಒಂದು ಉತ್ತಮ ಅನುಭವವಾಗಿತ್ತು. ಪ್ರಧಾನಿ ಮೋದಿ ಅವರು ಭಾರತಕ್ಕಾಗಿ ಏನೆಲ್ಲ ಮಾಡಿದ್ದಾರೆಂಬುದನ್ನು ಅವರೇ ವಿವರಿಸಿದರು” ಎಂದು ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವುದು ನಮಗೆ ಒಂದು ದೊಡ್ಡ ಗೌರವ. ನಾವು ಕ್ರೀಡೆಗಳ ಬಗ್ಗೆ ಮತ್ತು 1996ರಲ್ಲಿ ನಾವು (ಶ್ರೀಲಂಕಾದವರು) ವಿಶ್ವಕಪ್ ಗೆದ್ದ ಬಗ್ಗೆ ಮಾತನಾಡಿದ್ದೇವೆ. ಪ್ರಧಾನಿ ಮೋದಿ ದಕ್ಷಿಣ ಏಷ್ಯಾದ ಅತ್ಯಂತ ಶಕ್ತಿಶಾಲಿ ನಾಯಕ, ಅವರ ಕ್ರಿಕೆಟ್ ಜ್ಞಾನ ತುಂಬಾ ಉತ್ತಮವಾಗಿದೆ” ಎಂದು ಶ್ರೀಲಂಕಾದ ಮಾಜಿ ಕ್ರಿಕೆಟಿಗ ಚಾಮಿಂಡಾ ವಾಸ್ ಹೇಳಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರು, ಅವರ ದೋಣಿಗಳ ತಕ್ಷಣ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ

“ಪ್ರಧಾನಿ ಮೋದಿ ಭಾರತದಲ್ಲಿ ಅಧಿಕಾರಕ್ಕೆ ಬಂದ ನಂತರ ಅವರು ಬಹಳಷ್ಟು ವಿಷಯಗಳನ್ನು ಬದಲಾಯಿಸಿದರು. ಅವರು ಶ್ರೀಲಂಕಾಕ್ಕೂ ಬಹಳಷ್ಟು ಉತ್ತಮ ಕೆಲಸಗಳನ್ನು ಮಾಡಿದರು. ಬಿಕ್ಕಟ್ಟಿನ ಸಮಯದಲ್ಲಿ ಭಾರತ ಯಾವಾಗಲೂ ನಮ್ಮ ಜೊತೆ ನಿಂತಿದೆ” ಎಂದು ಶ್ರೀಲಂಕಾದ ಕ್ರಿಕೆಟಿಗ ಕೆ. ರೋಮೇಶ್ ಕಲುವಿತರಣ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!