AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪುವಾ ನ್ಯೂಗಿನಿಯಾದ ಟೋಕ್ ಪಿಸಿನ್ ಭಾಷೆಯಲ್ಲಿ ತಮಿಳಿನ ತಿರುಕ್ಕುರಳ್ ಪುಸ್ತಕ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ ಸಂದರ್ಭದಲ್ಲಿ ತಿರುಕ್ಕುರಳ್ ಪುಸ್ತಕದ ಟೋಕ್ ಪಿಸಿನ್ ಅನುವಾದಿತ ಕೃತಿಯನ್ನು ಬಿಡುಗಡೆ ಮಾಡಿದರು.

ಪಪುವಾ ನ್ಯೂಗಿನಿಯಾದ ಟೋಕ್ ಪಿಸಿನ್ ಭಾಷೆಯಲ್ಲಿ ತಮಿಳಿನ ತಿರುಕ್ಕುರಳ್ ಪುಸ್ತಕ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on:May 22, 2023 | 10:59 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು  ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ ಸಂದರ್ಭದಲ್ಲಿ ತಿರುಕ್ಕುರಳ್ ಪುಸ್ತಕದ ಟೋಕ್ ಪಿಸಿನ್ ಅನುವಾದಿತ ಕೃತಿಯನ್ನು ಬಿಡುಗಡೆ ಮಾಡಿದರು. ಟೋಕ್ ಪಿಸಿನ್ ಪಪುವಾ ನ್ಯೂಗಿನಿಯಾದ ಸ್ಥಳೀಯ ಮತ್ತು ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. ಪಪುವಾ ನ್ಯೂಗಿನಿಯಾದಲ್ಲಿ ಟೋಕ್ ಪಿಸಿನ್ ಭಾಷೆಯಲ್ಲಿ ತಿರುಕ್ಕುರಳ್ ಪುಸ್ತಕವನ್ನು ಬಿಡುಗಡೆ ಮಾಡಿದ ಗೌರವ ಪ್ರಧಾನಿ ಜೇಮ್ಸ್ ಮರಾಪೆ ಮತ್ತು ನನಗೆ ಸಿಕ್ಕಿದೆ ಎಂದು ಪುಸ್ತಕ ಬಿಡುಗಡೆ ಮಾಡಿದ ನಂತರ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ನ್ಯೂ ಬ್ರಿಟನ್ ಪ್ರಾಂತ್ಯದ ಗವರ್ನರ್ ಮತ್ತು ಸುಭಾ ಸಸೀಂದ್ರನ್ ಅವರು ತಿರುಕ್ಕುರಳ್ ಅನ್ನು ಟೋಕ್ ಪಿಸಿನ್ ಆಗಿ ಭಾಷಾಂತರಿಸಲು ಅವರ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. ಗವರ್ನರ್ ಸಸೀಂದ್ರನ್ ಅವರು ತಮ್ಮ ಶಾಲಾ ಶಿಕ್ಷಣವನ್ನು ತಮಿಳಿನಲ್ಲಿ ಮಾಡಿದ್ದರು ಮತ್ತು ಸುಭಾ ಸಸೀಂದ್ರನ್ ಅವರು ಗೌರವಾನ್ವಿತ ಭಾಷಾಶಾಸ್ತ್ರಜ್ಞರಾಗಿದ್ದಾರೆ. ತಿರುಕ್ಕುರಳ್ ಪುಸ್ತಕವನ್ನು ತಮಿಳಿನಿಂದ ಗುಜರಾತಿ ಭಾಷೆಗೆ ಕೂಡ ಅನುವಾದಿಸಲಾಗಿದೆ.

ಮತ್ತಷ್ಟು ಓದಿ: Modi Papua New Guinea Visit: ಪರಿಸರ ಸಂರಕ್ಷಣೆ, ಹವಾಮಾನ ವೈಪರೀತ್ಯದ ಬಗ್ಗೆ ಪ್ರಧಾನಿ ಮೋದಿ ಮಾತು

ನೀತಿಶಾಸ್ತ್ರದ ಒಂದು ದೊಡ್ಡ ಕೆಲಸ ವಾಸ್ತವವಾಗಿ ತಿರುಕ್ಕುರಳ್ ತಮಿಳು ಭಾಷೆಯಲ್ಲಿ ಬರೆಯಲಾದ ಅತ್ಯಂತ ಪ್ರಾಚೀನ ಕಾವ್ಯ ರಚನೆಯಾಗಿದೆ. ಇದರ ಕರ್ತೃ ತಿರುವಳ್ಳುವರ್ ಅದನ್ನು ಕ್ರಿಸ್ತನ ಎರಡನೇ ಶತಮಾನದಿಂದ ಆರನೇ ಶತಮಾನದ ನಡುವೆ ಬರೆದಿರಬಹುದು ಎಂದು ಅಂದಾಜಿಸಲಾಗಿದೆ.

ಇಂದು (ಸೋಮವಾರ) ಪಪುವಾ ನ್ಯೂಗಿನಿಯಾದಲ್ಲಿ ನಡೆದ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ (ಎಫ್‌ಐಪಿಐಸಿ) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.

ಈ ವೇಳೆ, ಭಾರತವು ಇಡೀ ಜಗತ್ತನ್ನು ಒಂದೇ ಕುಟುಂಬ ಎಂದು ಪರಿಗಣಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ಮೂಲ ಮಂತ್ರ ಒಂದೇ ಕುಟುಂಬ, ಒಂದು ಭವಿಷ್ಯ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಭಾರತವು ಅನೇಕ ದೇಶಗಳಿಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು. ಭಾರತವು ಪಪುವಾ ನ್ಯೂಗಿನಿಯಾದ ವಿಶ್ವಾಸಾರ್ಹ ಪಾಲುದಾರ ಎಂದು ಅವರು ಹೇಳಿದರು.

ತಿರುಕ್ಕುರಳ್, ನೀತಿಶಾಸ್ತ್ರ, ರಾಜಕೀಯ ಮತ್ತು ಆರ್ಥಿಕ ವಿಷಯಗಳು ಮತ್ತು ಪ್ರೀತಿಯ ದ್ವಿಪದಿಗಳ ಸಂಗ್ರಹವನ್ನು ಕವಿ ತಿರುವಳ್ಳುವರ್ ಬರೆದಿದ್ದಾರೆ. ತಿರುಕ್ಕುರಳ್ ಸಾಹಿತ್ಯದ ಮೇರುಕೃತಿ ಮಾತ್ರವಲ್ಲ, ಸಾಮಾನ್ಯ ಜೀವನಕ್ಕೆ ಅಸಾಧಾರಣ ಮಾರ್ಗದರ್ಶಿಯಾಗಿದೆ. ಇದು ನಮಗೆ ಸದಾಚಾರದ ಮಾರ್ಗವನ್ನು ತೋರಿಸುತ್ತದೆ ಮತ್ತು ನಿಸ್ವಾರ್ಥ ಜೀವನವನ್ನು ನಡೆಸಲು ಪ್ರೇರೇಪಿಸುತ್ತದೆ. ತಿರುಕ್ಕುರಳ್ ಇಂದಿಗೂ ಪ್ರಸ್ತುತವಾಗಿದೆ ಮತ್ತು ಪ್ರಸ್ತುತ ಪೀಳಿಗೆಗೆ ಸ್ಫೂರ್ತಿಯಾಗಬಲ್ಲದು ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:58 am, Mon, 22 May 23

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು