AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ

ಜೂನ್ 22ರಂದು ಅವರು ಅಮೆರಿಕದ ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Ganapathi Sharma
|

Updated on: Jun 02, 2023 | 8:35 PM

Share

ನವದೆಹಲಿ: ಇತ್ತೀಚೆಗಷ್ಟೇ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 22ರಂದು ಅವರು ಅಮೆರಿಕದ ಸಂಸತ್​ನ (United States Congress) ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೆನೆಟ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿಮ್ಮನ್ನು (ಮೋದಿ) ಆಹ್ವಾನಿಸುತ್ತಿರುವುದು ನಮಗೆ ಗೌರವದ ವಿಚಾರವಾಗಿದೆ ಎಂದು ಅಮೆರಿಕ್ ಕಾಂಗ್ರೆಸ್​ನ ಪ್ರಕಟಣೆ ತಿಳಿಸಿದೆ. ಈ ಪ್ರಕಟಣೆಗೆ ಅಮೆರಿಕ ಸಂಸತ್​ನ ಸ್ಪೀಕರ್ ಕೆವಿನ್ ಮೆಕ್​ಕಾರ್ತಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್​ನ ರಿಪಬ್ಲಿಕನ್​ ನಾಯಕ ಮಿಚ್ ಮೆಕ್‌ಕಾನ್ನೆಲ್ ಹಾಗೂ ಡೆಮಾಕ್ರಟಿಕ್ ಹಕೀಮ್ ಜೆಫ್ರೀಸ್ ಅವರ ಸಹಿ ಇದೆ.

ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ.

ಜೂನ್​ 22ರಂದು ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಔತಣಕೂಟವನ್ನೂ ಆಯೋಜಿಸಿದ್ದಾರೆ.

ಇದನ್ನೂ ಓದಿ: Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಇತ್ತೀಚೆಗಷ್ಟೇ ಮೋದಿ ಅವರು ಜಪಾನ್‌, ಪಪುವಾ ನ್ಯೂಗಿನಿ ಹಾಗೂ ಆಸ್ಟ್ರೇಲಿಯಾಕ್ಕೆ ಆರು ದಿನಗಳ ಐತಿಹಾಸಿಕ ಪ್ರವಾಸ ಕೈಗೊಂಡಿದ್ದರು. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದರ ಜತೆಗೆ ಅನೇಕ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದರು. ಪ್ರವಾಸ ಮುಗಿಸಿ ಬಂದ ಬಳಿಕ ಅನುಭವ ಹಂಚಿಕೊಂಡಿದ್ದ ಅವರು, ಈ ಪ್ರವಾಸದಲ್ಲಿ ನನಗೆ ಲಭ್ಯವಾದ ಸಮಯವನ್ನು ನಾನು ದೇಶದ ಬಗ್ಗೆ ಮಾತನಾಡಲು ಹಾಗೂ ದೇಶದ ಒಳಿತಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಪೂರ್ಣವಾಗಿ ಬಳಸಿದ್ದೇನೆ. ಈಗ ಸವಾಲುಗಳು ದೊಡ್ಡದಾಗಿವೆ, ಈ ಸವಾಲುಗಳಿಗೆ ಸವಾಲು ಹಾಕುವುದು ನನ್ನ ಸ್ವಭಾವ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ