AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ

ಜೂನ್ 22ರಂದು ಅವರು ಅಮೆರಿಕದ ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Jun 02, 2023 | 8:35 PM

Share

ನವದೆಹಲಿ: ಇತ್ತೀಚೆಗಷ್ಟೇ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 22ರಂದು ಅವರು ಅಮೆರಿಕದ ಸಂಸತ್​ನ (United States Congress) ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೆನೆಟ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿಮ್ಮನ್ನು (ಮೋದಿ) ಆಹ್ವಾನಿಸುತ್ತಿರುವುದು ನಮಗೆ ಗೌರವದ ವಿಚಾರವಾಗಿದೆ ಎಂದು ಅಮೆರಿಕ್ ಕಾಂಗ್ರೆಸ್​ನ ಪ್ರಕಟಣೆ ತಿಳಿಸಿದೆ. ಈ ಪ್ರಕಟಣೆಗೆ ಅಮೆರಿಕ ಸಂಸತ್​ನ ಸ್ಪೀಕರ್ ಕೆವಿನ್ ಮೆಕ್​ಕಾರ್ತಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್​ನ ರಿಪಬ್ಲಿಕನ್​ ನಾಯಕ ಮಿಚ್ ಮೆಕ್‌ಕಾನ್ನೆಲ್ ಹಾಗೂ ಡೆಮಾಕ್ರಟಿಕ್ ಹಕೀಮ್ ಜೆಫ್ರೀಸ್ ಅವರ ಸಹಿ ಇದೆ.

ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ.

ಜೂನ್​ 22ರಂದು ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಔತಣಕೂಟವನ್ನೂ ಆಯೋಜಿಸಿದ್ದಾರೆ.

ಇದನ್ನೂ ಓದಿ: Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಇತ್ತೀಚೆಗಷ್ಟೇ ಮೋದಿ ಅವರು ಜಪಾನ್‌, ಪಪುವಾ ನ್ಯೂಗಿನಿ ಹಾಗೂ ಆಸ್ಟ್ರೇಲಿಯಾಕ್ಕೆ ಆರು ದಿನಗಳ ಐತಿಹಾಸಿಕ ಪ್ರವಾಸ ಕೈಗೊಂಡಿದ್ದರು. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದರ ಜತೆಗೆ ಅನೇಕ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದರು. ಪ್ರವಾಸ ಮುಗಿಸಿ ಬಂದ ಬಳಿಕ ಅನುಭವ ಹಂಚಿಕೊಂಡಿದ್ದ ಅವರು, ಈ ಪ್ರವಾಸದಲ್ಲಿ ನನಗೆ ಲಭ್ಯವಾದ ಸಮಯವನ್ನು ನಾನು ದೇಶದ ಬಗ್ಗೆ ಮಾತನಾಡಲು ಹಾಗೂ ದೇಶದ ಒಳಿತಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಪೂರ್ಣವಾಗಿ ಬಳಸಿದ್ದೇನೆ. ಈಗ ಸವಾಲುಗಳು ದೊಡ್ಡದಾಗಿವೆ, ಈ ಸವಾಲುಗಳಿಗೆ ಸವಾಲು ಹಾಕುವುದು ನನ್ನ ಸ್ವಭಾವ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು