AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ

ಜೂನ್ 22ರಂದು ಅವರು ಅಮೆರಿಕದ ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Jun 02, 2023 | 8:35 PM

Share

ನವದೆಹಲಿ: ಇತ್ತೀಚೆಗಷ್ಟೇ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 22ರಂದು ಅವರು ಅಮೆರಿಕದ ಸಂಸತ್​ನ (United States Congress) ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೆನೆಟ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿಮ್ಮನ್ನು (ಮೋದಿ) ಆಹ್ವಾನಿಸುತ್ತಿರುವುದು ನಮಗೆ ಗೌರವದ ವಿಚಾರವಾಗಿದೆ ಎಂದು ಅಮೆರಿಕ್ ಕಾಂಗ್ರೆಸ್​ನ ಪ್ರಕಟಣೆ ತಿಳಿಸಿದೆ. ಈ ಪ್ರಕಟಣೆಗೆ ಅಮೆರಿಕ ಸಂಸತ್​ನ ಸ್ಪೀಕರ್ ಕೆವಿನ್ ಮೆಕ್​ಕಾರ್ತಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್​ನ ರಿಪಬ್ಲಿಕನ್​ ನಾಯಕ ಮಿಚ್ ಮೆಕ್‌ಕಾನ್ನೆಲ್ ಹಾಗೂ ಡೆಮಾಕ್ರಟಿಕ್ ಹಕೀಮ್ ಜೆಫ್ರೀಸ್ ಅವರ ಸಹಿ ಇದೆ.

ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ.

ಜೂನ್​ 22ರಂದು ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಔತಣಕೂಟವನ್ನೂ ಆಯೋಜಿಸಿದ್ದಾರೆ.

ಇದನ್ನೂ ಓದಿ: Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಇತ್ತೀಚೆಗಷ್ಟೇ ಮೋದಿ ಅವರು ಜಪಾನ್‌, ಪಪುವಾ ನ್ಯೂಗಿನಿ ಹಾಗೂ ಆಸ್ಟ್ರೇಲಿಯಾಕ್ಕೆ ಆರು ದಿನಗಳ ಐತಿಹಾಸಿಕ ಪ್ರವಾಸ ಕೈಗೊಂಡಿದ್ದರು. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದರ ಜತೆಗೆ ಅನೇಕ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದರು. ಪ್ರವಾಸ ಮುಗಿಸಿ ಬಂದ ಬಳಿಕ ಅನುಭವ ಹಂಚಿಕೊಂಡಿದ್ದ ಅವರು, ಈ ಪ್ರವಾಸದಲ್ಲಿ ನನಗೆ ಲಭ್ಯವಾದ ಸಮಯವನ್ನು ನಾನು ದೇಶದ ಬಗ್ಗೆ ಮಾತನಾಡಲು ಹಾಗೂ ದೇಶದ ಒಳಿತಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಪೂರ್ಣವಾಗಿ ಬಳಸಿದ್ದೇನೆ. ಈಗ ಸವಾಲುಗಳು ದೊಡ್ಡದಾಗಿವೆ, ಈ ಸವಾಲುಗಳಿಗೆ ಸವಾಲು ಹಾಕುವುದು ನನ್ನ ಸ್ವಭಾವ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್