AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ

ಜೂನ್ 22ರಂದು ಅವರು ಅಮೆರಿಕದ ಸಂಸತ್​ನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

PM Modi US Visit: ಅಮೆರಿಕ ಸಂಸತ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Jun 02, 2023 | 8:35 PM

ನವದೆಹಲಿ: ಇತ್ತೀಚೆಗಷ್ಟೇ ಮೂರು ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 22ರಂದು ಅವರು ಅಮೆರಿಕದ ಸಂಸತ್​ನ (United States Congress) ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವಿಚಾರವಾಗಿ ಅಮೆರಿಕ ಕಾಂಗ್ರೆಸ್​​ನ ಉನ್ನತ ನಾಯಕರು ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೆನೆಟ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿಮ್ಮನ್ನು (ಮೋದಿ) ಆಹ್ವಾನಿಸುತ್ತಿರುವುದು ನಮಗೆ ಗೌರವದ ವಿಚಾರವಾಗಿದೆ ಎಂದು ಅಮೆರಿಕ್ ಕಾಂಗ್ರೆಸ್​ನ ಪ್ರಕಟಣೆ ತಿಳಿಸಿದೆ. ಈ ಪ್ರಕಟಣೆಗೆ ಅಮೆರಿಕ ಸಂಸತ್​ನ ಸ್ಪೀಕರ್ ಕೆವಿನ್ ಮೆಕ್​ಕಾರ್ತಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್​ನ ರಿಪಬ್ಲಿಕನ್​ ನಾಯಕ ಮಿಚ್ ಮೆಕ್‌ಕಾನ್ನೆಲ್ ಹಾಗೂ ಡೆಮಾಕ್ರಟಿಕ್ ಹಕೀಮ್ ಜೆಫ್ರೀಸ್ ಅವರ ಸಹಿ ಇದೆ.

ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ.

ಜೂನ್​ 22ರಂದು ಪ್ರಧಾನಿ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಔತಣಕೂಟವನ್ನೂ ಆಯೋಜಿಸಿದ್ದಾರೆ.

ಇದನ್ನೂ ಓದಿ: Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಇತ್ತೀಚೆಗಷ್ಟೇ ಮೋದಿ ಅವರು ಜಪಾನ್‌, ಪಪುವಾ ನ್ಯೂಗಿನಿ ಹಾಗೂ ಆಸ್ಟ್ರೇಲಿಯಾಕ್ಕೆ ಆರು ದಿನಗಳ ಐತಿಹಾಸಿಕ ಪ್ರವಾಸ ಕೈಗೊಂಡಿದ್ದರು. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿದ್ದರ ಜತೆಗೆ ಅನೇಕ ದ್ವಿಪಕ್ಷೀಯ ಮಾತುಕತೆಗಳನ್ನೂ ನಡೆಸಿದ್ದರು. ಪ್ರವಾಸ ಮುಗಿಸಿ ಬಂದ ಬಳಿಕ ಅನುಭವ ಹಂಚಿಕೊಂಡಿದ್ದ ಅವರು, ಈ ಪ್ರವಾಸದಲ್ಲಿ ನನಗೆ ಲಭ್ಯವಾದ ಸಮಯವನ್ನು ನಾನು ದೇಶದ ಬಗ್ಗೆ ಮಾತನಾಡಲು ಹಾಗೂ ದೇಶದ ಒಳಿತಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಪೂರ್ಣವಾಗಿ ಬಳಸಿದ್ದೇನೆ. ಈಗ ಸವಾಲುಗಳು ದೊಡ್ಡದಾಗಿವೆ, ಈ ಸವಾಲುಗಳಿಗೆ ಸವಾಲು ಹಾಕುವುದು ನನ್ನ ಸ್ವಭಾವ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ