Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಟಿಕನ್​ ಸಿಟಿಯಲ್ಲಿ ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದ ಪ್ರಧಾನಿ ಮೋದಿ; ಭಾರತಕ್ಕೆ ಆಹ್ವಾನ

ನಿನ್ನೆ ಬೆಳಗ್ಗೆ ರೋಮ್​ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ವ್ಯಾಟಿಕನ್​ ನಗರದಲ್ಲಿ ಪೋಪ್​ ಫ್ರಾನ್ಸಿಸ್​ರನ್ನು ಭೇಟಿಯಾದರು. ಈ ವೇಳೆ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಇದ್ದರು. 

ವ್ಯಾಟಿಕನ್​ ಸಿಟಿಯಲ್ಲಿ ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದ ಪ್ರಧಾನಿ ಮೋದಿ; ಭಾರತಕ್ಕೆ ಆಹ್ವಾನ
ಪೋಪ್​ ಫ್ರಾನ್ಸಿಸ್​ರನ್ನು ಭೇಟಿಯಾದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Oct 30, 2021 | 3:07 PM

ರೋಮ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು  ವ್ಯಾಟಿಕನ್ ನಗರಕ್ಕೆ ತೆರಳಿ, ಅಲ್ಲಿ ಕ್ರೈಸ್ತರ ಪರಮೋಚ್ಛ ಧರ್ಮಗುರು (ಕ್ಯಾಥೋಲಿಕ್​ ಚರ್ಚ್​ ಮುಖ್ಯಸ್ಥ) ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದರು. ಹಾಗೇ, ಭಾರತಕ್ಕೆ ಬರುವಂತೆ ಅವರಿಗೆ ಆಮಂತ್ರಣ ನೀಡಿದರು.  ಇವರಿಬ್ಬರ ಮಧ್ಯೆ 20 ನಿಮಿಷಗಳ ಮಾತುಕತೆ ನಿಗದಿಯಾಗಿತ್ತು. ಆದರೆ ಸುಮಾರು 1 ತಾಸು ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್​ ಫ್ರಾನ್ಸಿಸ್​​ ಅವರು ಇಂದು, ಹವಾಮಾನ ಬದಲಾವಣೆಯನ್ನು ತಡೆಗಟ್ಟಲು ಹೋರಾಡುವ ಬಗ್ಗೆ, ಬಡತನ ನಿರ್ಮೂಲನ ಮಾಡಲು ಇರುಬಹುದಾದ ವಿಧಾನಗಳ ಕುರಿತಾಗಿ ಚರ್ಚಿಸಿದ್ದಾರೆ. ಈ ಭೂಮಿ ಮೇಲೆ ಇನ್ನಷ್ಟು ಉತ್ತಮವಾಗಿ ಜೀವನ ನಡೆಸುವ ಕ್ರಮಗಳ ಬಗ್ಗೆಯೂ ವ್ಯಾಪಕವಾಗಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. 1999ರಲ್ಲಿ ಅಟಲ್​ ಬಿಹಾರಿ ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿದ್ದಾಗ ಅಂದಿನ ಪೋಪ್​ ಜಾನ್​ ಪೌಲ್​ II ಭೇಟಿ ನೀಡಿದ್ದರು. ಅದಾದ ಮೇಲೆ ಪೋಪ್​ ಭೇಟಿ ಈಗಲೇ ಆಗಿದೆ. ಹಾಗೇ, ಪ್ರಧಾನಿ ಮೋದಿ ಮತ್ತು ಪೋಪ್​ ಫ್ರಾನ್ಸಿಸ್​​ರ ಮೊದಲ ಭೇಟಿಯಾಗಿದೆ. ಬಳಿಕ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ನಾನಿಂದು ಪೋಪ್ ಫ್ರಾನ್ಸಿಸ್​​​ ಅವರನ್ನು ಇಂದು ಭೇಟಿಯಾಗಿ, ವಿವಿಧ ವಿಷಯಗಳನ್ನು ಚರ್ಚಿಸುವ ಅವಕಾಶ ಸಿಕ್ಕಿತು ಎಂದು ಹೇಳಿದ್ದಾರೆ.

ನಿನ್ನೆ ಬೆಳಗ್ಗೆ ರೋಮ್​ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ವ್ಯಾಟಿಕನ್​ ನಗರದಲ್ಲಿ ಪೋಪ್​ ಫ್ರಾನ್ಸಿಸ್​ರನ್ನು ಭೇಟಿಯಾದರು. ಈ ವೇಳೆ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಇದ್ದರು.  ಅಲ್ಲಿಂದ ಹೊರಡುವಾಗ ಪೋಪ್​ ಫ್ರಾನ್ಸಿಸ್​​ರನ್ನು ಭಾರತಕ್ಕೆ ಬರುವಂತೆ ಪ್ರಧಾನಿ ಮೋದಿ ಆಮಂತ್ರಿಸಿದ್ದಾರೆ. ಈ ವ್ಯಾಟಿಕನ್​ ಸಿಟಿ ರೋಮ್​ನಿಂದ ಸುತ್ತುವರಿಯಲ್ಪಟ್ಟ ರಾಜ್ಯವಾಗಿದ್ದು, ರೋಮನ್​ ಕ್ಯಾಥೋಲಿಕ್​ ಚರ್ಚ್​​ನ ಪ್ರಧಾನ ಕಚೇರಿಯಿದೆ.

ಇಂದು ಸಂಜೆ ನರೇಂದ್ರ ಮೋದಿಯವರು ಟರ್ಮೆ ಡಿ ಡಿಯೊಕ್ಲೆಜಿಯಾನೊಗೆ ತೆರಳಲಿದ್ದಾರೆ. ಅದಾದ ಬಳಿಕ ಜಿ20 ನಾಯಕರೊಂದಿಗೆ ಔತಣಕೂಟ ನಡೆಯಲಿದೆ. ಜಿ20 ನಾಯಕರೊಂದಿಗೆ ನರೇಂದ್ರ ಮೋದಿ ಕೊವಿಡ್​ 19 ಸಾಂಕ್ರಾಮಿ, ಆರ್ಥಿಕ ಪರಿಸ್ಥಿತಿ, ಸುಸ್ಥಿರ ಅಭಿವೃದ್ಧಿ, ಹವಾಮಾನ ಬದಲಾವಣೆ ಮತ್ತಿತರ ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ.  ಹಾಗೇ, ಫ್ರೆಂಚ್​ ಅಧ್ಯಕ್ಷ ಎಮ್ಯಾನುಯೆಲ್​ ಮ್ಯಾಕ್ರನ್​​ ಜತೆ ಸಭೆ ನಡೆಸಲಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೊರನ್ನು ಭೇಟಿಯಾಗುವರು. ಅದರೊಂದಿಗೆ ಸಿಂಗಪುರ ಪ್ರಧಾನಿ ಲೀ ಹೊಸೈನ್​​ ಲೂಂಗ್​​ರನ್ನು ಭೇಟಿಯಾಗುವ ನಿರೀಕ್ಷೆ ಇದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ತಾಲಿಬಾನ್ ಏಜೆಂಟ್​ನಂತೆ ವರ್ತಿಸಿದ ಪತ್ರಕರ್ತ: ಖಡಕ್ ಉತ್ತರ ನೀಡಿದ ಅಫ್ಘಾನ್ ನಾಯಕ ನಬಿ

Published On - 2:54 pm, Sat, 30 October 21

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!