AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನೆಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಬ್ರೂನೆಯ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದ್ದಾರೆ.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
Follow us
ಸುಷ್ಮಾ ಚಕ್ರೆ
|

Updated on: Sep 03, 2024 | 9:31 PM

ಬಂದರ್‌ಸೇರಿ ಬೇಗವಾನ್‌: ಪ್ರಸ್ತುತ 2 ದಿನಗಳ ಬ್ರೂನೆ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಐತಿಹಾಸಿಕ ಸುಲ್ತಾನ್‌ ಒಮರ್‌ ಅಲಿ ಸೈಫುದ್ದೀನ್‌ ಮಸೀದಿಗೆ ಭೇಟಿ ನೀಡಿದ್ದಾರೆ. ಅವರು ಮಸೀದಿಯಲ್ಲಿ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಪ್ರಸ್ತುತ ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನಿಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರಕಾರ, ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅಲ್ಲಿಗೆ ಆಗಮಿಸುವ ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿರುವ ಭಾರತದ ಎರಡನೇ ನಾಯಕ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಬ್ರೂನೆಯಲ್ಲಿ ಮೊಳಗಿದ ಮೋದಿ, ಮೋದಿ ಘೋಷಣೆ; ಭಾರತೀಯ ವಲಸಿಗರನ್ನು ಭೇಟಿಯಾದ ಪ್ರಧಾನಿ

ಈ ಹಿಂದೆ 2016ರಲ್ಲಿ ಅಂದಿನ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಈ ಐತಿಹಾಸಿಕ ಮಸೀದಿಗೆ ಭೇಟಿ ನೀಡಿದ್ದರು. ಸುಮಾರು 15 ನಿಮಿಷಗಳ ಕಾಲ ಮಸೀದಿಯಲ್ಲಿ ತಂಗಿದ್ದ ಮೋದಿ ಆ ಮಸೀದಿಯೊಳಗೆ ಓಡಾಡಿ, ವಿಡಿಯೋ ವೀಕ್ಷಿಸಿದರು. ನಂತರ ಇಮಾಮ್ ಅವರೊಂದಿಗೆ ಸಂತಸ ಹಂಚಿಕೊಂಡರು.

ಮೋದಿ ಅವರ ಭೇಟಿಯು ಮೇ 1984ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ಭಾರತದಿಂದ ಮೊದಲ ಉನ್ನತ ಮಟ್ಟದ ಪ್ರವಾಸವಾಗಿದೆ. ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಯು ಆಗ್ನೇಯ ಏಷ್ಯಾದ ಅತ್ಯಂತ ಸುಂದರವಾದ ಮಸೀದಿಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಈ ಮಸೀದಿಯ ನಿರ್ಮಾಣವು ಸುಮಾರು 5 ವರ್ಷಗಳ ಕಾಲ ನಡೆಯಿತು.

ಪ್ರಧಾನಿ ಮೋದಿ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಸೆಪ್ಟೆಂಬರ್ 4 ಮತ್ತು 5ರಂದು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ