AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನೆಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಬ್ರೂನೆಯ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದ್ದಾರೆ.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಸುಷ್ಮಾ ಚಕ್ರೆ
|

Updated on: Sep 03, 2024 | 9:31 PM

Share

ಬಂದರ್‌ಸೇರಿ ಬೇಗವಾನ್‌: ಪ್ರಸ್ತುತ 2 ದಿನಗಳ ಬ್ರೂನೆ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಐತಿಹಾಸಿಕ ಸುಲ್ತಾನ್‌ ಒಮರ್‌ ಅಲಿ ಸೈಫುದ್ದೀನ್‌ ಮಸೀದಿಗೆ ಭೇಟಿ ನೀಡಿದ್ದಾರೆ. ಅವರು ಮಸೀದಿಯಲ್ಲಿ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಪ್ರಸ್ತುತ ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನಿಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರಕಾರ, ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅಲ್ಲಿಗೆ ಆಗಮಿಸುವ ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿರುವ ಭಾರತದ ಎರಡನೇ ನಾಯಕ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಬ್ರೂನೆಯಲ್ಲಿ ಮೊಳಗಿದ ಮೋದಿ, ಮೋದಿ ಘೋಷಣೆ; ಭಾರತೀಯ ವಲಸಿಗರನ್ನು ಭೇಟಿಯಾದ ಪ್ರಧಾನಿ

ಈ ಹಿಂದೆ 2016ರಲ್ಲಿ ಅಂದಿನ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಈ ಐತಿಹಾಸಿಕ ಮಸೀದಿಗೆ ಭೇಟಿ ನೀಡಿದ್ದರು. ಸುಮಾರು 15 ನಿಮಿಷಗಳ ಕಾಲ ಮಸೀದಿಯಲ್ಲಿ ತಂಗಿದ್ದ ಮೋದಿ ಆ ಮಸೀದಿಯೊಳಗೆ ಓಡಾಡಿ, ವಿಡಿಯೋ ವೀಕ್ಷಿಸಿದರು. ನಂತರ ಇಮಾಮ್ ಅವರೊಂದಿಗೆ ಸಂತಸ ಹಂಚಿಕೊಂಡರು.

ಮೋದಿ ಅವರ ಭೇಟಿಯು ಮೇ 1984ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ಭಾರತದಿಂದ ಮೊದಲ ಉನ್ನತ ಮಟ್ಟದ ಪ್ರವಾಸವಾಗಿದೆ. ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಯು ಆಗ್ನೇಯ ಏಷ್ಯಾದ ಅತ್ಯಂತ ಸುಂದರವಾದ ಮಸೀದಿಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಈ ಮಸೀದಿಯ ನಿರ್ಮಾಣವು ಸುಮಾರು 5 ವರ್ಷಗಳ ಕಾಲ ನಡೆಯಿತು.

ಪ್ರಧಾನಿ ಮೋದಿ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಸೆಪ್ಟೆಂಬರ್ 4 ಮತ್ತು 5ರಂದು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?