AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ

ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನೆಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಬ್ರೂನೆಯ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಭೇಟಿ ನೀಡಿದ್ದಾರೆ.

ಬ್ರೂನೆಯ ಪ್ರಸಿದ್ಧ ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಸುಷ್ಮಾ ಚಕ್ರೆ
|

Updated on: Sep 03, 2024 | 9:31 PM

Share

ಬಂದರ್‌ಸೇರಿ ಬೇಗವಾನ್‌: ಪ್ರಸ್ತುತ 2 ದಿನಗಳ ಬ್ರೂನೆ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಐತಿಹಾಸಿಕ ಸುಲ್ತಾನ್‌ ಒಮರ್‌ ಅಲಿ ಸೈಫುದ್ದೀನ್‌ ಮಸೀದಿಗೆ ಭೇಟಿ ನೀಡಿದ್ದಾರೆ. ಅವರು ಮಸೀದಿಯಲ್ಲಿ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಪ್ರಸ್ತುತ ಸುಲ್ತಾನ್ ಹಸ್ಸಾನಲ್ ಬೊಲ್ಕಿಯಾ ಅವರ ತಂದೆಯ ಹೆಸರಿನಲ್ಲಿ ಈ ಮಸೀದಿಯನ್ನು 1958ರಲ್ಲಿ ನಿರ್ಮಿಸಲಾಯಿತು. ಸುಲ್ತಾನ್ ಸೈಫುದ್ದೀನ್ ಅವರನ್ನು ಆಧುನಿಕ ಬ್ರೂನಿಯ ವಾಸ್ತುಶಿಲ್ಪಿ ಎಂದು ಪರಿಗಣಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರಕಾರ, ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅಲ್ಲಿಗೆ ಆಗಮಿಸುವ ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿರುವ ಭಾರತದ ಎರಡನೇ ನಾಯಕ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಬ್ರೂನೆಯಲ್ಲಿ ಮೊಳಗಿದ ಮೋದಿ, ಮೋದಿ ಘೋಷಣೆ; ಭಾರತೀಯ ವಲಸಿಗರನ್ನು ಭೇಟಿಯಾದ ಪ್ರಧಾನಿ

ಈ ಹಿಂದೆ 2016ರಲ್ಲಿ ಅಂದಿನ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಈ ಐತಿಹಾಸಿಕ ಮಸೀದಿಗೆ ಭೇಟಿ ನೀಡಿದ್ದರು. ಸುಮಾರು 15 ನಿಮಿಷಗಳ ಕಾಲ ಮಸೀದಿಯಲ್ಲಿ ತಂಗಿದ್ದ ಮೋದಿ ಆ ಮಸೀದಿಯೊಳಗೆ ಓಡಾಡಿ, ವಿಡಿಯೋ ವೀಕ್ಷಿಸಿದರು. ನಂತರ ಇಮಾಮ್ ಅವರೊಂದಿಗೆ ಸಂತಸ ಹಂಚಿಕೊಂಡರು.

ಮೋದಿ ಅವರ ಭೇಟಿಯು ಮೇ 1984ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ಭಾರತದಿಂದ ಮೊದಲ ಉನ್ನತ ಮಟ್ಟದ ಪ್ರವಾಸವಾಗಿದೆ. ಸುಲ್ತಾನ್ ಒಮರ್ ಅಲಿ ಸೈಫುದ್ದೀನ್ ಮಸೀದಿಯು ಆಗ್ನೇಯ ಏಷ್ಯಾದ ಅತ್ಯಂತ ಸುಂದರವಾದ ಮಸೀದಿಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಈ ಮಸೀದಿಯ ನಿರ್ಮಾಣವು ಸುಮಾರು 5 ವರ್ಷಗಳ ಕಾಲ ನಡೆಯಿತು.

ಪ್ರಧಾನಿ ಮೋದಿ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಸೆಪ್ಟೆಂಬರ್ 4 ಮತ್ತು 5ರಂದು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ