AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್

’ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರೋನ್
TV9 Web
| Edited By: |

Updated on: Sep 21, 2022 | 8:54 AM

Share

ದೆಹಲಿ: ‘ಇದು ಯುದ್ಧಕ್ಕೆ ಸಮಯವಲ್ಲ’ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ’ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮಹಾಧಿವೇಶನದಲ್ಲಿ ಹೇಳಿದರು. ‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದ ಸಮಯವಲ್ಲ ಎಂದು ಹೇಳಿದ್ದು ಸರಿಯಾಗಿದೆ. ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಲೀ ಅಥವಾ ಪೂರ್ವದ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವುದಕ್ಕಾಗಲೀ ಅಲ್ಲ. ಇದು ವಿಶ್ವದ ಎಲ್ಲ ದೇಶಗಳಿಗೆ ಅನ್ವಯಿಸುವ ಸಮಾನ ಸಂಗತಿಯಾಗಿದೆ. ನಾವೆಲ್ಲರೂ ಜೊತೆಗೂಡಿ ಸವಾಲುಗಳನ್ನು ನಿಭಾಯಿಸಬೇಕು’ ಎಂದು ಹೇಳಿದರು.

ಕಳೆದ ವಾರ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation (SCO) Summit) ಶೃಂಗಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಉಕ್ರೇನ್ ಮೇಲಿನ ಆಕ್ರಮಣ ಕೊನೆಗೊಳಿಸಿ, ಶಾಂತಿ ಮತ್ತು ಮಾತುಕತೆಯ ಹಾದಿಗೆ ಮರಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ಮೋದಿ ಅವರು ಸಲಹೆ ಮಾಡಿದ್ದರು. ಇದೇ ಹೇಳಿಕೆಯನ್ನು ಉಲ್ಲೇಖಿಸಿ ಇದೇ ಮ್ಯಾಕ್ರೋನ್ ಸಹ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸಂಘರ್ಷದ ಹಿನ್ನೆಲೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಆಹಾರ ಮತ್ತು ಇಂಧನ ಭದ್ರತೆಯ ಸಮಸ್ಯೆಗಳನ್ನು ರಷ್ಯಾದ ಅಧ್ಯಕ್ಷರು ಪರಿಗಣಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದ್ದ ನರೇಂದ್ರ ಮೋದಿ, ಸಂಘರ್ಷವನ್ನು ಶೀಘ್ರ ನಿಲ್ಲಿಸಬೇಕು ಎಂದು ಕರೆ ನೀಡಿದ್ದರು. ‘ಇದು ಯುದ್ಧದ ಯುಗವಲ್ಲ. ಅದರ ಬಗ್ಗೆ ನಾನು ನಿಮ್ಮೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ್ದೇನೆ. ಇಂದು ನಾವು ಶಾಂತಿಯ ಹಾದಿಯಲ್ಲಿ ಹೇಗೆ ಪ್ರಗತಿ ಸಾಧಿಸಬಹುದು ಎಂಬುದರ ಬಗ್ಗೆ ಮಾತನಾಡಲು ಅವಕಾಶ ಪಡೆಯುತ್ತೇವೆ. ಭಾರತ ಮತ್ತು ರಷ್ಯಾ ಹಲವಾರು ದಶಕಗಳಿಂದ ಪರಸ್ಪರ ಸೌಹಾರ್ದ ಮತ್ತು ಸಹಕಾರ ಸಂಬಂಧ ಹೊಂದಿವೆ’ ಎಂದು ಮೋದಿ ಹೇಳಿದ್ದರು.

ಯುದ್ಧವನ್ನು ಕೊನೆಗೊಳಿಸುವಂತೆ ಮೋದಿ ಪುಟಿನ್​ಗೆ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕರೆ ನೀಡಿದ್ದು ಇದೇ ಮೊದಲು. ‘ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವಿನ ಬಗ್ಗೆ ನಮಗೆ ತಿಳಿದಿದೆ. ಈ ಸಂಘರ್ಷ ಸಾಧ್ಯವಾದಷ್ಟೂ ಬೇಗ ಕೊನೆಗೊಳ್ಳಬೆಕೆಂದು ನಾವು ಬಯಸುತ್ತೇವೆ. ಆದರೆ ಉಕ್ರೇನ್ ನಾಯಕತ್ವವು ಮಾತುಕತೆಗೆ ನಿರಾಕರಿಸುತ್ತಿದೆ. ಅವರು ಸೇನಾ ಕಾರ್ಯಾಚರಣೆಳ ಮೂಲಕ ಯುದ್ಧಭೂಮಿಯಲ್ಲಿ ತಮ್ಮ ಉದ್ದೇಶ ಈಡೇರಿಸಿಕೊಳ್ಳಲು ಬಯಸುತ್ತಿದ್ದಾರೆ’ ಎಂದು ಪುಟಿನ್ ದೂರಿದ್ದರು.

ಫ್ಯಾನ್ಸ್​ ಅಧ್ಯಕ್ಷ ಮ್ಯಾಕ್ರೋನ್ ಸಹ ಇದೀಗ ಬಹಿರಂಗವಾಗಿ ರಷ್ಯಾ-ಉಕ್ರೇನ್​ ಯುದ್ಧವನ್ನು ವಿರೋಧಿಸಿ ಮಾತನಾಡಿದ್ದಾರೆ. ಮಾಸ್ಕೋ ಮೇಲೆ ಹೆಚ್ಚಿನ ಒತ್ತಡ ಹೇರುವಂತೆ ತಟಸ್ಥ ರಾಷ್ಟ್ರಗಳ ಮನವೊಲಿಸಲು ಅವರು ಮಹಾಧಿವೇಶನವನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ‘ಸಂಘರ್ಷ ನಿಲ್ಲಿಸಲು ಶೀಘ್ರ ಕಾರ್ಯತತ್ಪರರಾಗಿ. ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ