ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್

’ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರೋನ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 21, 2022 | 8:54 AM

ದೆಹಲಿ: ‘ಇದು ಯುದ್ಧಕ್ಕೆ ಸಮಯವಲ್ಲ’ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ’ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮಹಾಧಿವೇಶನದಲ್ಲಿ ಹೇಳಿದರು. ‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದ ಸಮಯವಲ್ಲ ಎಂದು ಹೇಳಿದ್ದು ಸರಿಯಾಗಿದೆ. ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಲೀ ಅಥವಾ ಪೂರ್ವದ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವುದಕ್ಕಾಗಲೀ ಅಲ್ಲ. ಇದು ವಿಶ್ವದ ಎಲ್ಲ ದೇಶಗಳಿಗೆ ಅನ್ವಯಿಸುವ ಸಮಾನ ಸಂಗತಿಯಾಗಿದೆ. ನಾವೆಲ್ಲರೂ ಜೊತೆಗೂಡಿ ಸವಾಲುಗಳನ್ನು ನಿಭಾಯಿಸಬೇಕು’ ಎಂದು ಹೇಳಿದರು.

ಕಳೆದ ವಾರ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation (SCO) Summit) ಶೃಂಗಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಉಕ್ರೇನ್ ಮೇಲಿನ ಆಕ್ರಮಣ ಕೊನೆಗೊಳಿಸಿ, ಶಾಂತಿ ಮತ್ತು ಮಾತುಕತೆಯ ಹಾದಿಗೆ ಮರಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ಮೋದಿ ಅವರು ಸಲಹೆ ಮಾಡಿದ್ದರು. ಇದೇ ಹೇಳಿಕೆಯನ್ನು ಉಲ್ಲೇಖಿಸಿ ಇದೇ ಮ್ಯಾಕ್ರೋನ್ ಸಹ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸಂಘರ್ಷದ ಹಿನ್ನೆಲೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಆಹಾರ ಮತ್ತು ಇಂಧನ ಭದ್ರತೆಯ ಸಮಸ್ಯೆಗಳನ್ನು ರಷ್ಯಾದ ಅಧ್ಯಕ್ಷರು ಪರಿಗಣಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದ್ದ ನರೇಂದ್ರ ಮೋದಿ, ಸಂಘರ್ಷವನ್ನು ಶೀಘ್ರ ನಿಲ್ಲಿಸಬೇಕು ಎಂದು ಕರೆ ನೀಡಿದ್ದರು. ‘ಇದು ಯುದ್ಧದ ಯುಗವಲ್ಲ. ಅದರ ಬಗ್ಗೆ ನಾನು ನಿಮ್ಮೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ್ದೇನೆ. ಇಂದು ನಾವು ಶಾಂತಿಯ ಹಾದಿಯಲ್ಲಿ ಹೇಗೆ ಪ್ರಗತಿ ಸಾಧಿಸಬಹುದು ಎಂಬುದರ ಬಗ್ಗೆ ಮಾತನಾಡಲು ಅವಕಾಶ ಪಡೆಯುತ್ತೇವೆ. ಭಾರತ ಮತ್ತು ರಷ್ಯಾ ಹಲವಾರು ದಶಕಗಳಿಂದ ಪರಸ್ಪರ ಸೌಹಾರ್ದ ಮತ್ತು ಸಹಕಾರ ಸಂಬಂಧ ಹೊಂದಿವೆ’ ಎಂದು ಮೋದಿ ಹೇಳಿದ್ದರು.

ಯುದ್ಧವನ್ನು ಕೊನೆಗೊಳಿಸುವಂತೆ ಮೋದಿ ಪುಟಿನ್​ಗೆ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕರೆ ನೀಡಿದ್ದು ಇದೇ ಮೊದಲು. ‘ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವಿನ ಬಗ್ಗೆ ನಮಗೆ ತಿಳಿದಿದೆ. ಈ ಸಂಘರ್ಷ ಸಾಧ್ಯವಾದಷ್ಟೂ ಬೇಗ ಕೊನೆಗೊಳ್ಳಬೆಕೆಂದು ನಾವು ಬಯಸುತ್ತೇವೆ. ಆದರೆ ಉಕ್ರೇನ್ ನಾಯಕತ್ವವು ಮಾತುಕತೆಗೆ ನಿರಾಕರಿಸುತ್ತಿದೆ. ಅವರು ಸೇನಾ ಕಾರ್ಯಾಚರಣೆಳ ಮೂಲಕ ಯುದ್ಧಭೂಮಿಯಲ್ಲಿ ತಮ್ಮ ಉದ್ದೇಶ ಈಡೇರಿಸಿಕೊಳ್ಳಲು ಬಯಸುತ್ತಿದ್ದಾರೆ’ ಎಂದು ಪುಟಿನ್ ದೂರಿದ್ದರು.

ಫ್ಯಾನ್ಸ್​ ಅಧ್ಯಕ್ಷ ಮ್ಯಾಕ್ರೋನ್ ಸಹ ಇದೀಗ ಬಹಿರಂಗವಾಗಿ ರಷ್ಯಾ-ಉಕ್ರೇನ್​ ಯುದ್ಧವನ್ನು ವಿರೋಧಿಸಿ ಮಾತನಾಡಿದ್ದಾರೆ. ಮಾಸ್ಕೋ ಮೇಲೆ ಹೆಚ್ಚಿನ ಒತ್ತಡ ಹೇರುವಂತೆ ತಟಸ್ಥ ರಾಷ್ಟ್ರಗಳ ಮನವೊಲಿಸಲು ಅವರು ಮಹಾಧಿವೇಶನವನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ‘ಸಂಘರ್ಷ ನಿಲ್ಲಿಸಲು ಶೀಘ್ರ ಕಾರ್ಯತತ್ಪರರಾಗಿ. ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​