AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್

’ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ: ಉಕ್ರೇನ್ ಯುದ್ಧದ ಬಗ್ಗೆ ರಷ್ಯಾಕ್ಕೆ ಖಡಕ್ ಸಂದೇಶ ರವಾನಿಸಿದ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರೋನ್
TV9 Web
| Edited By: |

Updated on: Sep 21, 2022 | 8:54 AM

Share

ದೆಹಲಿ: ‘ಇದು ಯುದ್ಧಕ್ಕೆ ಸಮಯವಲ್ಲ’ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ’ ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮಹಾಧಿವೇಶನದಲ್ಲಿ ಹೇಳಿದರು. ‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದ ಸಮಯವಲ್ಲ ಎಂದು ಹೇಳಿದ್ದು ಸರಿಯಾಗಿದೆ. ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಲೀ ಅಥವಾ ಪೂರ್ವದ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವುದಕ್ಕಾಗಲೀ ಅಲ್ಲ. ಇದು ವಿಶ್ವದ ಎಲ್ಲ ದೇಶಗಳಿಗೆ ಅನ್ವಯಿಸುವ ಸಮಾನ ಸಂಗತಿಯಾಗಿದೆ. ನಾವೆಲ್ಲರೂ ಜೊತೆಗೂಡಿ ಸವಾಲುಗಳನ್ನು ನಿಭಾಯಿಸಬೇಕು’ ಎಂದು ಹೇಳಿದರು.

ಕಳೆದ ವಾರ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation (SCO) Summit) ಶೃಂಗಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಉಕ್ರೇನ್ ಮೇಲಿನ ಆಕ್ರಮಣ ಕೊನೆಗೊಳಿಸಿ, ಶಾಂತಿ ಮತ್ತು ಮಾತುಕತೆಯ ಹಾದಿಗೆ ಮರಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ಮೋದಿ ಅವರು ಸಲಹೆ ಮಾಡಿದ್ದರು. ಇದೇ ಹೇಳಿಕೆಯನ್ನು ಉಲ್ಲೇಖಿಸಿ ಇದೇ ಮ್ಯಾಕ್ರೋನ್ ಸಹ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸಂಘರ್ಷದ ಹಿನ್ನೆಲೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಆಹಾರ ಮತ್ತು ಇಂಧನ ಭದ್ರತೆಯ ಸಮಸ್ಯೆಗಳನ್ನು ರಷ್ಯಾದ ಅಧ್ಯಕ್ಷರು ಪರಿಗಣಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದ್ದ ನರೇಂದ್ರ ಮೋದಿ, ಸಂಘರ್ಷವನ್ನು ಶೀಘ್ರ ನಿಲ್ಲಿಸಬೇಕು ಎಂದು ಕರೆ ನೀಡಿದ್ದರು. ‘ಇದು ಯುದ್ಧದ ಯುಗವಲ್ಲ. ಅದರ ಬಗ್ಗೆ ನಾನು ನಿಮ್ಮೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಮಾತನಾಡಿದ್ದೇನೆ. ಇಂದು ನಾವು ಶಾಂತಿಯ ಹಾದಿಯಲ್ಲಿ ಹೇಗೆ ಪ್ರಗತಿ ಸಾಧಿಸಬಹುದು ಎಂಬುದರ ಬಗ್ಗೆ ಮಾತನಾಡಲು ಅವಕಾಶ ಪಡೆಯುತ್ತೇವೆ. ಭಾರತ ಮತ್ತು ರಷ್ಯಾ ಹಲವಾರು ದಶಕಗಳಿಂದ ಪರಸ್ಪರ ಸೌಹಾರ್ದ ಮತ್ತು ಸಹಕಾರ ಸಂಬಂಧ ಹೊಂದಿವೆ’ ಎಂದು ಮೋದಿ ಹೇಳಿದ್ದರು.

ಯುದ್ಧವನ್ನು ಕೊನೆಗೊಳಿಸುವಂತೆ ಮೋದಿ ಪುಟಿನ್​ಗೆ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ಕರೆ ನೀಡಿದ್ದು ಇದೇ ಮೊದಲು. ‘ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವಿನ ಬಗ್ಗೆ ನಮಗೆ ತಿಳಿದಿದೆ. ಈ ಸಂಘರ್ಷ ಸಾಧ್ಯವಾದಷ್ಟೂ ಬೇಗ ಕೊನೆಗೊಳ್ಳಬೆಕೆಂದು ನಾವು ಬಯಸುತ್ತೇವೆ. ಆದರೆ ಉಕ್ರೇನ್ ನಾಯಕತ್ವವು ಮಾತುಕತೆಗೆ ನಿರಾಕರಿಸುತ್ತಿದೆ. ಅವರು ಸೇನಾ ಕಾರ್ಯಾಚರಣೆಳ ಮೂಲಕ ಯುದ್ಧಭೂಮಿಯಲ್ಲಿ ತಮ್ಮ ಉದ್ದೇಶ ಈಡೇರಿಸಿಕೊಳ್ಳಲು ಬಯಸುತ್ತಿದ್ದಾರೆ’ ಎಂದು ಪುಟಿನ್ ದೂರಿದ್ದರು.

ಫ್ಯಾನ್ಸ್​ ಅಧ್ಯಕ್ಷ ಮ್ಯಾಕ್ರೋನ್ ಸಹ ಇದೀಗ ಬಹಿರಂಗವಾಗಿ ರಷ್ಯಾ-ಉಕ್ರೇನ್​ ಯುದ್ಧವನ್ನು ವಿರೋಧಿಸಿ ಮಾತನಾಡಿದ್ದಾರೆ. ಮಾಸ್ಕೋ ಮೇಲೆ ಹೆಚ್ಚಿನ ಒತ್ತಡ ಹೇರುವಂತೆ ತಟಸ್ಥ ರಾಷ್ಟ್ರಗಳ ಮನವೊಲಿಸಲು ಅವರು ಮಹಾಧಿವೇಶನವನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ‘ಸಂಘರ್ಷ ನಿಲ್ಲಿಸಲು ಶೀಘ್ರ ಕಾರ್ಯತತ್ಪರರಾಗಿ. ಇನ್ನೂ ಬೇಲಿಯ ಮೇಲೆ ಕುಳಿತುಕೊಂಡು ಏನಾಗುತ್ತಿದೆ ಎಂದು ನೋಡುತ್ತಲೇ ಇರುವುದರಲ್ಲಿ ಅರ್ಥವಿಲ್ಲ’ ಎಂದು ಮ್ಯಾಕ್ರೋನ್ ಹೇಳಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ