AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ಭೇಟಿ ಬಳಿಕ ಆಸ್ಪತ್ರೆಗೆ ದಾಖಲಾದ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ, ವಿಷ ನೀಡಿರುವ ಶಂಕೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಬಳಿಕ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷ ನೀಡಿರುವ ಶಂಕೆ ವ್ಯಕ್ತವಾಗಿದೆ.

ಪುಟಿನ್ ಭೇಟಿ ಬಳಿಕ ಆಸ್ಪತ್ರೆಗೆ ದಾಖಲಾದ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ, ವಿಷ ನೀಡಿರುವ ಶಂಕೆ
ವ್ಲಾಡಿಮಿರ್ ಪುಟಿನ್
ನಯನಾ ರಾಜೀವ್
|

Updated on: May 29, 2023 | 11:26 AM

Share

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಬಳಿಕ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷ ನೀಡಿರುವ ಶಂಕೆ ವ್ಯಕ್ತವಾಗಿದೆ. ಬೆಲಾರಸ್​ ಅಧ್ಯಕ್ಷ ಲುಕಾಶೆಂಕೋ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಬೆಲಾರಸ್​ ಅಧ್ಯಕ್ಷರು ವ್ಲಾಡಿಮಿರ್​ ಪುಟಿನ್​ಗೆ ನಿಕಟವಿರುವ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಲುಕಾಶೆಂಕೋ ಅವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಮಾಸ್ಕೋದ ಸೆಂಟ್ರಲ್ ಕ್ಲಿನಿಕಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಲುಕಾಶೆಂಕೋ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದರು. ಸದ್ಯ ಅವರನ್ನು ಐಸಿಯುನಲ್ಲಿರಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ರಕ್ತ ಶುದ್ಧೀಕರಣ ಕಾರ್ಯವಿಧಾನಗಳನ್ನು ನಡೆಸಲಾಯಿತು, ರಷ್ಯಾ ನಾಯಕರ ಉಕ್ರೇನ್ ಆಕ್ರಮಣವನ್ನು ಲುಕಾಶೆಂಕೋ ಬೆಂಬಲಿಸಿದ್ದರು. ಮೇ 9 ರಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ ಹೆಚ್ಚು ಹೊತ್ತು ಅಲ್ಲಿರದೆ ತಮ್ಮ ದೇಶಕ್ಕೆ ವಾಪಸಾಗಿದ್ದರು.

ಬ್ರಿಟಿಷ್ ಸರ್ಕಾರ ತಾನು ಉಕ್ರೇನ್‌ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್‌ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದ್ದರು.

ಮತ್ತಷ್ಟು ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ

ಬ್ರಿಟಿಷ್ ಸರ್ಕಾರ ಉಕ್ರೇನಿಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಪರಿಣಾಮವಾಗಿ ಲುಕಶೆಂಕೋ ಅವರು ಕೋಪಗೊಂಡಿದ್ದಾರೆ. ಆದರೆ ಅದಕ್ಕೂ ಮೊದಲೇ ಅವರು ರಷ್ಯಾದ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ತನ್ನ ನೆಲದಲ್ಲಿ ಸ್ಥಾಪಿಸುವಂತೆ ಕರೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ