AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ಭೇಟಿ ಬಳಿಕ ಆಸ್ಪತ್ರೆಗೆ ದಾಖಲಾದ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ, ವಿಷ ನೀಡಿರುವ ಶಂಕೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಬಳಿಕ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷ ನೀಡಿರುವ ಶಂಕೆ ವ್ಯಕ್ತವಾಗಿದೆ.

ಪುಟಿನ್ ಭೇಟಿ ಬಳಿಕ ಆಸ್ಪತ್ರೆಗೆ ದಾಖಲಾದ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ, ವಿಷ ನೀಡಿರುವ ಶಂಕೆ
ವ್ಲಾಡಿಮಿರ್ ಪುಟಿನ್
ನಯನಾ ರಾಜೀವ್
|

Updated on: May 29, 2023 | 11:26 AM

Share

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಬಳಿಕ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷ ನೀಡಿರುವ ಶಂಕೆ ವ್ಯಕ್ತವಾಗಿದೆ. ಬೆಲಾರಸ್​ ಅಧ್ಯಕ್ಷ ಲುಕಾಶೆಂಕೋ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಬೆಲಾರಸ್​ ಅಧ್ಯಕ್ಷರು ವ್ಲಾಡಿಮಿರ್​ ಪುಟಿನ್​ಗೆ ನಿಕಟವಿರುವ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಲುಕಾಶೆಂಕೋ ಅವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಮಾಸ್ಕೋದ ಸೆಂಟ್ರಲ್ ಕ್ಲಿನಿಕಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಲುಕಾಶೆಂಕೋ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದರು. ಸದ್ಯ ಅವರನ್ನು ಐಸಿಯುನಲ್ಲಿರಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ರಕ್ತ ಶುದ್ಧೀಕರಣ ಕಾರ್ಯವಿಧಾನಗಳನ್ನು ನಡೆಸಲಾಯಿತು, ರಷ್ಯಾ ನಾಯಕರ ಉಕ್ರೇನ್ ಆಕ್ರಮಣವನ್ನು ಲುಕಾಶೆಂಕೋ ಬೆಂಬಲಿಸಿದ್ದರು. ಮೇ 9 ರಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ ಹೆಚ್ಚು ಹೊತ್ತು ಅಲ್ಲಿರದೆ ತಮ್ಮ ದೇಶಕ್ಕೆ ವಾಪಸಾಗಿದ್ದರು.

ಬ್ರಿಟಿಷ್ ಸರ್ಕಾರ ತಾನು ಉಕ್ರೇನ್‌ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್‌ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದ್ದರು.

ಮತ್ತಷ್ಟು ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ

ಬ್ರಿಟಿಷ್ ಸರ್ಕಾರ ಉಕ್ರೇನಿಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಪರಿಣಾಮವಾಗಿ ಲುಕಶೆಂಕೋ ಅವರು ಕೋಪಗೊಂಡಿದ್ದಾರೆ. ಆದರೆ ಅದಕ್ಕೂ ಮೊದಲೇ ಅವರು ರಷ್ಯಾದ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ತನ್ನ ನೆಲದಲ್ಲಿ ಸ್ಥಾಪಿಸುವಂತೆ ಕರೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು