AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್ ಭೇಟಿ ಬಳಿಕ ಆಸ್ಪತ್ರೆಗೆ ದಾಖಲಾದ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ, ವಿಷ ನೀಡಿರುವ ಶಂಕೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಬಳಿಕ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷ ನೀಡಿರುವ ಶಂಕೆ ವ್ಯಕ್ತವಾಗಿದೆ.

ಪುಟಿನ್ ಭೇಟಿ ಬಳಿಕ ಆಸ್ಪತ್ರೆಗೆ ದಾಖಲಾದ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ, ವಿಷ ನೀಡಿರುವ ಶಂಕೆ
ವ್ಲಾಡಿಮಿರ್ ಪುಟಿನ್
Follow us
ನಯನಾ ರಾಜೀವ್
|

Updated on: May 29, 2023 | 11:26 AM

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಬಳಿಕ ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷ ನೀಡಿರುವ ಶಂಕೆ ವ್ಯಕ್ತವಾಗಿದೆ. ಬೆಲಾರಸ್​ ಅಧ್ಯಕ್ಷ ಲುಕಾಶೆಂಕೋ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಬೆಲಾರಸ್​ ಅಧ್ಯಕ್ಷರು ವ್ಲಾಡಿಮಿರ್​ ಪುಟಿನ್​ಗೆ ನಿಕಟವಿರುವ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಲುಕಾಶೆಂಕೋ ಅವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಮಾಸ್ಕೋದ ಸೆಂಟ್ರಲ್ ಕ್ಲಿನಿಕಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಲುಕಾಶೆಂಕೋ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿದ್ದರು. ಸದ್ಯ ಅವರನ್ನು ಐಸಿಯುನಲ್ಲಿರಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ರಕ್ತ ಶುದ್ಧೀಕರಣ ಕಾರ್ಯವಿಧಾನಗಳನ್ನು ನಡೆಸಲಾಯಿತು, ರಷ್ಯಾ ನಾಯಕರ ಉಕ್ರೇನ್ ಆಕ್ರಮಣವನ್ನು ಲುಕಾಶೆಂಕೋ ಬೆಂಬಲಿಸಿದ್ದರು. ಮೇ 9 ರಂದು ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ ಹೆಚ್ಚು ಹೊತ್ತು ಅಲ್ಲಿರದೆ ತಮ್ಮ ದೇಶಕ್ಕೆ ವಾಪಸಾಗಿದ್ದರು.

ಬ್ರಿಟಿಷ್ ಸರ್ಕಾರ ತಾನು ಉಕ್ರೇನ್‌ಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಬೆನ್ನಲ್ಲೇ, ಪುಟಿನ್ ತಾನು ಉಕ್ರೇನ್ ಜೊತೆ ಗಡಿ ಹಂಚಿಕೊಳ್ಳುವ ಬೆಲಾರಸ್‌ನಲ್ಲಿ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ಅಳವಡಿಸುವುದಾಗಿ ಘೋಷಿಸಿದ್ದರು.

ಮತ್ತಷ್ಟು ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಾಲಗೆ ಮರಗಟ್ಟಿದೆ, ದೃಷ್ಟಿ ಮಂದ; ವೈದ್ಯರಿಗೆ ಆತಂಕ: ವರದಿ

ಬ್ರಿಟಿಷ್ ಸರ್ಕಾರ ಉಕ್ರೇನಿಗೆ ಯುರೇನಿಯಂ ಸೇರಿದಂತೆ ವಿವಿಧ ಆಯುಧಗಳನ್ನು ಪೂರೈಸುವುದಾಗಿ ಘೋಷಿಸಿದ ಪರಿಣಾಮವಾಗಿ ಲುಕಶೆಂಕೋ ಅವರು ಕೋಪಗೊಂಡಿದ್ದಾರೆ. ಆದರೆ ಅದಕ್ಕೂ ಮೊದಲೇ ಅವರು ರಷ್ಯಾದ ಕಾರ್ಯತಂತ್ರದ ಅಣ್ವಸ್ತ್ರಗಳನ್ನು ತನ್ನ ನೆಲದಲ್ಲಿ ಸ್ಥಾಪಿಸುವಂತೆ ಕರೆ ನೀಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!