Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ. ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು […]

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್
Follow us
KUSHAL V
|

Updated on:Sep 13, 2020 | 6:42 PM

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ.

ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು ಇಲ್ಲ ಎಂದು ತಿಳಿದ ಸ್ಟೀವ್​ ಕೆಲವು ದಿನಗಳ ಬಳಿಕ ರಾತ್ರಿವೇಳೆ ಮೃತನ ಮನೆಗೆ ಎಂಟ್ರಿ ಕೊಟ್ಟು ಮನೆಯಲ್ಲಿದ್ದ ಬಂದೂಕು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಹೊತ್ತೊಯ್ದಿದ್ದಾನೆ. ಮನೆಯಲ್ಲಿದ್ದ ಸೀಲಿಂಗ್​ ಫ್ಯಾನ್​ ಸಹ ಬಿಟ್ಟಿಲ್ಲವಂತೆ.

ಆದರೆ, ದುರದೃಷ್ಟಕ್ಕೆ ಪೊಲೀಸಪ್ಪನ ಕುಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿಬಿಟ್ಟಿದೆ. ಇನ್ನೂ ಈತನ ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಆತನ ಇಲಾಖೆಯವರೇ ಸ್ಟೀವ್​ನ ಬಂಧಿಸಿದ್ದಾರೆ. ಒಟ್ನಲ್ಲಿ, ಪೊಲೀಸ್​ ಅಧಿಕಾರಿ ವರ್ತನೆಯಿಂದ ಬೇಲಿಯೇ ಎದ್ದು ಹೊಲ ಮೇಯ್ದಿದೆ ಅಂತಾ ಜನರು ಮಾತನಾಡಿಕೊಂಡಿದ್ದಾರೆ.

Published On - 6:37 pm, Sun, 13 September 20

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ