AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ. ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು […]

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್
Follow us
KUSHAL V
|

Updated on:Sep 13, 2020 | 6:42 PM

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ.

ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು ಇಲ್ಲ ಎಂದು ತಿಳಿದ ಸ್ಟೀವ್​ ಕೆಲವು ದಿನಗಳ ಬಳಿಕ ರಾತ್ರಿವೇಳೆ ಮೃತನ ಮನೆಗೆ ಎಂಟ್ರಿ ಕೊಟ್ಟು ಮನೆಯಲ್ಲಿದ್ದ ಬಂದೂಕು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಹೊತ್ತೊಯ್ದಿದ್ದಾನೆ. ಮನೆಯಲ್ಲಿದ್ದ ಸೀಲಿಂಗ್​ ಫ್ಯಾನ್​ ಸಹ ಬಿಟ್ಟಿಲ್ಲವಂತೆ.

ಆದರೆ, ದುರದೃಷ್ಟಕ್ಕೆ ಪೊಲೀಸಪ್ಪನ ಕುಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿಬಿಟ್ಟಿದೆ. ಇನ್ನೂ ಈತನ ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಆತನ ಇಲಾಖೆಯವರೇ ಸ್ಟೀವ್​ನ ಬಂಧಿಸಿದ್ದಾರೆ. ಒಟ್ನಲ್ಲಿ, ಪೊಲೀಸ್​ ಅಧಿಕಾರಿ ವರ್ತನೆಯಿಂದ ಬೇಲಿಯೇ ಎದ್ದು ಹೊಲ ಮೇಯ್ದಿದೆ ಅಂತಾ ಜನರು ಮಾತನಾಡಿಕೊಂಡಿದ್ದಾರೆ.

Published On - 6:37 pm, Sun, 13 September 20

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು