AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಮ್ರಾನ್ ಖಾನ್ ನಿವಾಸದಲ್ಲಿ 40 ಉಗ್ರರಿಗೆ ಆಶ್ರಯ, 24 ಗಂಟೆಯೊಳಗೆ ನಮಗೆ ಒಪ್ಪಿಸಿ ಪೊಲೀಸರು

ಇಮ್ರಾನ್​​ ಖಾನ್​​ ಅವರ ಲಾಹೋರ್​​​ನಲ್ಲಿರುವ ಮನೆಯಲ್ಲಿ 30-40 ಜನ ಭಯೋತ್ಪಾದಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ

Imran Khan: ಇಮ್ರಾನ್ ಖಾನ್ ನಿವಾಸದಲ್ಲಿ 40 ಉಗ್ರರಿಗೆ ಆಶ್ರಯ, 24 ಗಂಟೆಯೊಳಗೆ ನಮಗೆ ಒಪ್ಪಿಸಿ ಪೊಲೀಸರು
ಇಮ್ರಾನ್​​ ಖಾನ್
ಅಕ್ಷಯ್​ ಪಲ್ಲಮಜಲು​​
|

Updated on:May 17, 2023 | 4:46 PM

Share

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಕಳೆದ ವಾರ ಹೈಕೋರ್ಟ್​ ಮುಂದೆ  ಬಂಧಿಸಿ, ಸೆರೆಮನೆಯಲ್ಲಿ ಇಡಲಾಗಿತ್ತು, ನಂತರ ಈ ವಿಚಾರವಾಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಪಾಕಿಸ್ತಾನ ಸುಪ್ರೀಂ ಕೋರ್ಟ್​​ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು. ಇದೀಗ ಇಮ್ರಾನ್​​ ಖಾನ್​​ ಅವರ ಮನೆಯಲ್ಲಿ ಉಗ್ರರು ಇದ್ದರೆ ಎಂದು ಪಾಕ್​​ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಇಮ್ರಾನ್​​ ಖಾನ್​​ ಅವರ ಲಾಹೋರ್​​​ನಲ್ಲಿರುವ ಮನೆಯಲ್ಲಿ 30-40 ಜನ ಭಯೋತ್ಪಾದಕರು ಆಶ್ರಯ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ, ಇಮ್ರಾನ್ ಖಾನ್ ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಗೆ ಭಯೋತ್ಪಾದಕರನ್ನು ತಕ್ಷಣ ಒಪ್ಪಿಸುವಂತೆ ಪಾಕ್​​​​ ಪೊಲೀಸರು ಸೂಚನೆ ನೀಡಿದ್ದಾರೆ. 24 ಗಂಟೆಯೊಳಗೆ ನಮಗೆ ಅವರನ್ನು ಒಪ್ಪಿಸಬೇಕು ಎಂದು ಸಮಯದ ಜತೆಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ:Imran Khan arrested: ಮಾಜಿ ಪ್ರಧಾನಿ ಇಮ್ರಾನ್ ಖಾನ್ ರನ್ನು ಪಾಕಿಸ್ತಾನದ ರೇಂಜರ್ಸ್ ಕೊರಳಪಟ್ಟಿ ಹಿಡಿದು ದರದರ ಎಳೆದೊಯ್ದರು!

ಲಾಹೋರ್‌ನ ಜಮಾನ್ ಪಾರ್ಕ್‌ನಲ್ಲಿರುವ ಇಮ್ರಾನ್ ಖಾನ್ ನಿವಾಸದಲ್ಲಿ ಉಗ್ರರು ಆಶ್ರಯ ಪಡೆದಿದ್ದಾರೆ. ಈಗಾಗಲೇ ಇಮ್ರಾನ್ ಖಾನ್ ಸಲ್ಲಿಸಿದ ಅರ್ಜಿಯ ಮೇಲಿನ ತೀರ್ಪನ್ನು ಲಾಹೋರ್ ಹೈಕೋರ್ಟ್ (LHC) ಕಾಯ್ದಿರಿಸಿದೆ. ಅಲ್‌ ಖಾದಿರ್ ಟ್ರಸ್ಟ್ ಕೇಸ್ ಪ್ರಕರಣದಲ್ಲಿ ಬಂಧಿತರಾಗಿದ್ದಂದಿನಿಂದ ಅವರ ವಿರುದ್ಧ ದಾಖಲಾಗಿರುವ ಪ್ರತಿಯೊಂದು ಪ್ರಕರಣಕ್ಕೂ ಇದು ಅನ್ವಯಿಸುತ್ತದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಭೂ ಹಗರಣ ಪ್ರಕರಣದಲ್ಲಿ ಖಾನ್ ಅವರ ಬಂಧನದ ನಂತರ ಪ್ರತಿಭಟನೆಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ, ಮಾಜಿ ಪ್ರಧಾನಿ ವಿರುದ್ಧ ಇತರ ಪ್ರಕರಣಗಳನ್ನು ಸಹ ದಾಖಲಿಸಲಾಯಿತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Wed, 17 May 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ