AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಆರ್ಚ್‌ಬಿಷಪ್ ಜಾರ್ಜ್ ಕೂವಕಾಡ್ ಅವರಿಗೆ ಕಾರ್ಡಿನಲ್ ಆಗಿ ದೀಕ್ಷೆ ನೀಡಿದ ಪೋಪ್ ಫ್ರಾನ್ಸಿಸ್

ಕೇರಳ ಮೂಲದ ಆರ್ಚ್‌ಬಿಷಪ್ ಕೂವಕಾಡ್ ಅವರನ್ನು ಐತಿಹಾಸಿಕ ವ್ಯಾಟಿಕನ್ ಸಮಾರಂಭದಲ್ಲಿ ಪೋಪ್ ಫ್ರಾನ್ಸಿಸ್ ಅವರು ಕಾರ್ಡಿನಲ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇಂದು ರಾತ್ರಿ ಈ ಸಮಾರಂಭ ನಡೆದಿದೆ. ಈ ಸಮಾರಂಭವನ್ನು ವೀಕ್ಷಿಸಲು ಭಾರತ ಸರ್ಕಾರವು ಕೇಂದ್ರ ಸಚಿವ ಜಾರ್ಜ್ ಕುರಿಯನ್ ನೇತೃತ್ವದ ನಿಯೋಗವನ್ನು ಕಳುಹಿಸಿದೆ. ಈ ಸಮಾರಂಭಕ್ಕೂ ಮೊದಲು ಭಾರತೀಯ ನಿಯೋಗವು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿತು.

ಕೇರಳದ ಆರ್ಚ್‌ಬಿಷಪ್ ಜಾರ್ಜ್ ಕೂವಕಾಡ್ ಅವರಿಗೆ ಕಾರ್ಡಿನಲ್ ಆಗಿ ದೀಕ್ಷೆ ನೀಡಿದ ಪೋಪ್ ಫ್ರಾನ್ಸಿಸ್
ಜಾರ್ಜ್ ಕೂವಕಾಡ್
ಸುಷ್ಮಾ ಚಕ್ರೆ
|

Updated on:Dec 07, 2024 | 10:23 PM

Share

ನವದೆಹಲಿ: ಕೇರಳ ಮೂಲದ ಆರ್ಚ್‌ಬಿಷಪ್ ಮೊನ್ಸಿಂಜರ್ ಜಾರ್ಜ್ ಜಾಕೋಬ್ ಕೂವಕಾಡ್ ಅವರನ್ನು ಪೋಪ್ ಫ್ರಾನ್ಸಿಸ್ ಅವರು ಇಂದು ರಾತ್ರಿ ವ್ಯಾಟಿಕನ್ ಸಿಟಿಯ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಡಿನಲ್ ಶ್ರೇಣಿಗೆ ಏರಿಸಿದ್ದಾರೆ. ಜಾಗತಿಕ ಕ್ಯಾಥೋಲಿಕ್ ಚರ್ಚ್‌ಗೆ ಈ ಮಹತ್ವದ ಸಂದರ್ಭದಲ್ಲಿ ಕೂವಕಾಡ್ ಜೊತೆಗೆ ಇತರ 20 ಹೊಸ ಕಾರ್ಡಿನಲ್‌ಗಳು ಕೂಡ ಸೇರಲಿದ್ದಾರೆ. ಆರ್ಚ್‌ಬಿಷಪ್ ಮೊನ್ಸಿಂಜರ್ ಜಾರ್ಜ್ ಜಾಕೋಬ್ ಕೂವಕಾಡ್ ಅವರಿಗೆ ಈ ಮನ್ನಣೆ ಸಿಕ್ಕಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ದೀಕ್ಷೆಯ ನಂತರ, ಹೊಸದಾಗಿ ನೇಮಕಗೊಂಡ ಕಾರ್ಡಿನಲ್‌ಗಳು ಪೋಪ್ ಅವರ ಆಶೀರ್ವಾದವನ್ನು ಪಡೆಯಲು ವ್ಯಾಟಿಕನ್ ಅರಮನೆಗೆ ಭೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ 1 ಗಂಟೆಗೆ (ಭಾರತೀಯ ಕಾಲಮಾನದ ಪ್ರಕಾರ) ಅವರು ಪ್ರಮುಖ ಧಾರ್ಮಿಕ ಕೂಟವಾದ ಯೂಕರಿಸ್ಟಿಕ್ ಆಚರಣೆಗಾಗಿ ಪೋಪ್ ಫ್ರಾನ್ಸಿಸ್ ಅವರ ಜೊತೆ ಸೇರಲಿದ್ದಾರೆ.

ಇಂದು ನಡೆದ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಮತ್ತು ಭಾರತೀಯ ಕ್ರಿಶ್ಚಿಯನ್ ಸಮುದಾಯದ ಧರ್ಮಗುರುಗಳು ಕೂಡ ತೆರಳಿದ್ದಾರೆ. ಕೂವಕಾಡ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಜೀವ ಬೆದರಿಕೆ: ಮುಂಬೈ ಪೊಲೀಸರಿಗೆ ಐಎಸ್‌ಐ ಸಂಚಿನ ಬಗ್ಗೆ ಮೆಸೇಜ್

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ನೇತೃತ್ವದ ಏಳು ಸದಸ್ಯರ ಭಾರತೀಯ ನಿಯೋಗವು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದೆ. ಈ ನಿಯೋಗದಲ್ಲಿ ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್, ಸಂಸದರಾದ ಕೋಡಿಕುನ್ನಿಲ್ ಸುರೇಶ್ ಮತ್ತು ಡಾ. ಸತ್ನಮ್ ಸಿಂಗ್ ಸಂಧು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಆಂಟೋನಿ, ಮಾಜಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಅನೂಪ್ ಆಂಟೋನಿ, ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರ ಟಾಮ್ ವಡಕ್ಕನ್ ಕೂಡ ಇದ್ದಾರೆ.

ಪೋಪ್ ಫ್ರಾನ್ಸಿಸ್ ಅವರು ಅಕ್ಟೋಬರ್ 25ರಂದು ಟರ್ಕಿಯ ನಿಸಿಬಿಸ್‌ನ ನಾಮಸೂಚಕ ಆರ್ಚ್‌ಬಿಷಪ್ ಆಗಿ ಕೂವಕಾಡ್ ಅವರನ್ನು ನೇಮಿಸಿದರು. ವ್ಯಾಟಿಕನ್​ನ ರಾಜತಾಂತ್ರಿಕ ದಳದ ಸದಸ್ಯರಾಗಿರುವ ಕೂವಕಾಡ್ ಅವರು ಅಲ್ಜೀರಿಯಾ, ಕೊರಿಯಾ, ಇರಾನ್ ಮತ್ತು ಕೋಸ್ಟರಿಕಾದಲ್ಲಿ ಸೇವೆ ಸಲ್ಲಿಸಿದ್ದಾರೆ. ಕಾರ್ಡಿನಲ್ ಆಗಿ ಅವರ ಈ ಪದವಿ ಐತಿಹಾಸಿಕವಾಗಿದೆ. ಏಕೆಂದರೆ ಅವರು ವಿಶಿಷ್ಟವಾದ ಕೆಂಪು ಬಿರೆಟ್ಟಾವನ್ನು ಸ್ವೀಕರಿಸುವ ಮೂಲಕ ನೇರವಾಗಿ ಈ ಶ್ರೇಣಿಗೆ ಏರಿದದ ಏಕೈಕ ಭಾರತೀಯ ಕ್ಯಾಥೋಲಿಕ್ ಪಾದ್ರಿಯಾಗಿದ್ದಾರೆ.

ಇದನ್ನೂ ಓದಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವಾಗಿ ಮಾಡೋಣ; ಬಿಎಪಿಎಸ್​ ಸ್ವಯಂಸೇವಕರನ್ನು ಹುರಿದುಂಬಿಸಿದ ಮೋದಿ

ಜಾರ್ಜ್ ಕೂವಕಾಡ್ ಯಾರು?:

51 ವರ್ಷದ ಪಾದ್ರಿ ಜಾರ್ಜ್ ಜಾಕೋಬ್ ಕೂವಕಾಡ್ ಕೇರಳದಲ್ಲಿ ಹುಟ್ಟಿ ಬೆಳೆದವರು. ಅವರು ಪ್ರಮುಖ ಸಮುದಾಯವಾದ ಚಂಗನಾಚೆರಿಯ ಸಿರೋ-ಮಲಬಾರ್ ಆರ್ಚ್‌ಡಯಾಸಿಸ್‌ಗೆ ಸೇರಿದವರು. ಜುಲೈ 24, 2004ರಂದು ಪಾದ್ರಿಯಾಗಿ ನೇಮಕಗೊಂಡ ಕೂವಕಾಡ್ ಅವರು ಕ್ಯಾನನ್ ಕಾನೂನಿನಲ್ಲಿ ಡಾಕ್ಟರೇಟ್ ಹೊಂದಿದ್ದಾರೆ.

ಕೂವಕಾಡ್ ಅವರು ವಿಶ್ವದಾದ್ಯಂತ ಚರ್ಚ್‌ಗಳಲ್ಲಿ ಈ ಮಿಷನ್‌ಗಳಲ್ಲಿ ಸಲಹೆಗಾರರ ​​ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2020ರಲ್ಲಿ ಜಾರ್ಜ್ ಕೂವಕಾಡ್ ಅವರು ಪೋಪ್ ಫ್ರಾನ್ಸಿಸ್ ಅವರ ಅಂತರರಾಷ್ಟ್ರೀಯ ಪ್ರಯಾಣವನ್ನು ನೋಡಿಕೊಳ್ಳುವ ಸವಾಲಿನ ಸ್ಥಾನವಾದ ವ್ಯಾಟಿಕನ್ ರಾಜ್ಯ ಸಚಿವಾಲಯಕ್ಕೆ ನೇಮಕಗೊಂಡರು. ಈಗ ವೆಟಿಕನ್ ನಗರದಲ್ಲಿ ಕಾರ್ಡಿನಲ್ ಆಗುತ್ತಿರುವ ಜಾರ್ಜ್ ಕೂವಕಾಡ್ ಭಾರತಕ್ಕೆ ಐತಿಹಾಸಿಕ ಕ್ಷಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Sat, 7 December 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ