AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marta Temido: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಭಾರತ ಮೂಲದ ಗರ್ಭಿಣಿ ಸಾವು: ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ

ಭಾರತ ಮೂಲದ ಗರ್ಭಿಣಿಯೊಬ್ಬರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಮೃತಪಟ್ಟ ಹಿನ್ನೆಲೆಯಲ್ಲಿ ಪೋರ್ಚುಗಲ್​ನ ಆರೋಗ್ಯ ಸಚಿವೆ ಟೆಮಿಡೋ ರಾಜೀನಾಮೆ ನೀಡಿದ್ದಾರೆ.

Marta Temido: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಭಾರತ ಮೂಲದ ಗರ್ಭಿಣಿ ಸಾವು:  ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ
Marta TemidoImage Credit source: BBC
TV9 Web
| Edited By: |

Updated on: Sep 01, 2022 | 10:42 AM

Share

ಭಾರತ ಮೂಲದ ಗರ್ಭಿಣಿಯೊಬ್ಬರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಮೃತಪಟ್ಟ ಹಿನ್ನೆಲೆಯಲ್ಲಿ ಪೋರ್ಚುಗಲ್​ನ ಆರೋಗ್ಯ ಸಚಿವೆ ಟೆಮಿಡೋ ರಾಜೀನಾಮೆ ನೀಡಿದ್ದಾರೆ. ಪೋರ್ಚುಗಲ್‌ನ ಅತಿದೊಡ್ಡ ಆಸ್ಪತ್ರೆಯಾದ ಲಿಸ್ಬನ್‌ನ ಸಾಂಟಾ ಮಾರಿಯಾ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಆಕೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಮಹಿಳೆ ಮೃತಪಟ್ಟಿದ್ದರೂ, ತುರ್ತು ಸಿಸೇರಿಯನ್‌ ಮಾಡಿ ನಂತರ ಆಕೆಯ ಮಗುವನ್ನು ತಾಯಿಯ ಗರ್ಭದಿಂದ ಹೊರ ತೆಗೆದಿದ್ದು, ಮಗು ಬದುಕುಳಿದಿದೆ ಮಹಿಳೆಯ ಸಾವಿನ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಮಿಡೋ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ, ಕೋವಿಡ್ 19 ವಿರುದ್ಧ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವನ್ನು ಆಯೋಜಿಸುವುದನ್ನು ಒಳಗೊಂಡಂತೆ ಅವರ ಕೆಲಸಕ್ಕಾಗಿ ಧನ್ಯವಾದ ಎಂದು ಪ್ರಧಾನಿ ಆಂಟೋನಿಯೊ ಕೋಸ್ಟಾ ಹೇಳಿದ್ದಾರೆ.

ಪೋರ್ಚುಗಲ್‌ನ ಆರೋಗ್ಯ ಸಿಬ್ಬಂದಿಯ ಕೊರತೆ, ವಿಶೇಷವಾಗಿ ಸ್ತ್ರೀರೋಗ ಶಾಸ್ತ್ರ ಮತ್ತು ಪ್ರಸೂತಿಶಾಸ್ತ್ರದಲ್ಲಿ ಪರಿಣತಿ ಹೊಂದಿರುವವರ ಕೊರತೆ ಇದೆ. ಈ ಹಿನ್ನೆಲೆ, ವಿದೇಶದಿಂದ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬುದುಜ ತಿಳಿದುಬಂದಿದೆ.

ಕೆಲವು ಪ್ರಸೂತಿ ಘಟಕಗಳ ಮುಚ್ಚುವಿಕೆಯಂತಹ ಘಟನೆಗಳಿಗೆ ವಿರೋಧ ಪಕ್ಷಗಳು, ವೈದ್ಯರು ಮತ್ತು ದಾದಿಯರು ಮಾಜಿ ಆರೋಗ್ಯ ಸಚಿವೆಯ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದೂ ವರದಿಯಾಗಿದೆ.

ಬೇಸಿಗೆ ರಜೆಯಲ್ಲಿ ಹಲವಾರು ಆಸ್ಪತ್ರೆಗಳನ್ನು ಸಾಕಷ್ಟು ವೈದ್ಯರು ಇಲ್ಲದ ಕಾರಣ ತುರ್ತು ಪ್ರಸೂತಿ ಸೇವೆಗಳನ್ನು ವಿಶೇಷವಾಗಿ ವಾರಾಂತ್ಯದಲ್ಲಿ ಮುಚ್ಚಲು ಸರ್ಕಾರ ಕ್ರಮ ಕೈಗೊಂಡಿತ್ತು. ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಪುರಸಭೆಗಳು ಆರೋಗ್ಯ ಸಚಿವರನ್ನು ಟೀಕಿಸಿದ್ದವು. ಗರ್ಭಿಣಿಯರು ಕೆಲವೊಮ್ಮೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಅಪಾಯವನ್ನು ಎದುರಿಸುವಂತಾಗಿತ್ತು.

ಡಾ. ಮಾರ್ಟಾ ಟೆಮಿಡೋ ಅವರು ಪ್ರಸ್ತುತ ಬಿಕ್ಕಟ್ಟನ್ನು ಪರಿಹರಿಸಲು ಯಾವುದೇ ಮಾರ್ಗವನ್ನು ಹೊಂದಿಲ್ಲದ ಕಾರಣ ರಾಜೀನಾಮೆ ನೀಡಿದ್ದಾರೆ ಎಂದು ಪೋರ್ಚುಗೀಸ್ ವೈದ್ಯರ ಸಂಘದ ಅಧ್ಯಕ್ಷ ಮಿಗುಯೆಲ್ ಗೈಮಾರೆಸ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?