AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marta Temido: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಭಾರತ ಮೂಲದ ಗರ್ಭಿಣಿ ಸಾವು: ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ

ಭಾರತ ಮೂಲದ ಗರ್ಭಿಣಿಯೊಬ್ಬರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಮೃತಪಟ್ಟ ಹಿನ್ನೆಲೆಯಲ್ಲಿ ಪೋರ್ಚುಗಲ್​ನ ಆರೋಗ್ಯ ಸಚಿವೆ ಟೆಮಿಡೋ ರಾಜೀನಾಮೆ ನೀಡಿದ್ದಾರೆ.

Marta Temido: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಭಾರತ ಮೂಲದ ಗರ್ಭಿಣಿ ಸಾವು:  ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ
Marta TemidoImage Credit source: BBC
TV9 Web
| Updated By: ನಯನಾ ರಾಜೀವ್|

Updated on: Sep 01, 2022 | 10:42 AM

Share

ಭಾರತ ಮೂಲದ ಗರ್ಭಿಣಿಯೊಬ್ಬರಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಮೃತಪಟ್ಟ ಹಿನ್ನೆಲೆಯಲ್ಲಿ ಪೋರ್ಚುಗಲ್​ನ ಆರೋಗ್ಯ ಸಚಿವೆ ಟೆಮಿಡೋ ರಾಜೀನಾಮೆ ನೀಡಿದ್ದಾರೆ. ಪೋರ್ಚುಗಲ್‌ನ ಅತಿದೊಡ್ಡ ಆಸ್ಪತ್ರೆಯಾದ ಲಿಸ್ಬನ್‌ನ ಸಾಂಟಾ ಮಾರಿಯಾ ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಆಕೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಮಹಿಳೆ ಮೃತಪಟ್ಟಿದ್ದರೂ, ತುರ್ತು ಸಿಸೇರಿಯನ್‌ ಮಾಡಿ ನಂತರ ಆಕೆಯ ಮಗುವನ್ನು ತಾಯಿಯ ಗರ್ಭದಿಂದ ಹೊರ ತೆಗೆದಿದ್ದು, ಮಗು ಬದುಕುಳಿದಿದೆ ಮಹಿಳೆಯ ಸಾವಿನ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಮಿಡೋ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ, ಕೋವಿಡ್ 19 ವಿರುದ್ಧ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವನ್ನು ಆಯೋಜಿಸುವುದನ್ನು ಒಳಗೊಂಡಂತೆ ಅವರ ಕೆಲಸಕ್ಕಾಗಿ ಧನ್ಯವಾದ ಎಂದು ಪ್ರಧಾನಿ ಆಂಟೋನಿಯೊ ಕೋಸ್ಟಾ ಹೇಳಿದ್ದಾರೆ.

ಪೋರ್ಚುಗಲ್‌ನ ಆರೋಗ್ಯ ಸಿಬ್ಬಂದಿಯ ಕೊರತೆ, ವಿಶೇಷವಾಗಿ ಸ್ತ್ರೀರೋಗ ಶಾಸ್ತ್ರ ಮತ್ತು ಪ್ರಸೂತಿಶಾಸ್ತ್ರದಲ್ಲಿ ಪರಿಣತಿ ಹೊಂದಿರುವವರ ಕೊರತೆ ಇದೆ. ಈ ಹಿನ್ನೆಲೆ, ವಿದೇಶದಿಂದ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂಬುದುಜ ತಿಳಿದುಬಂದಿದೆ.

ಕೆಲವು ಪ್ರಸೂತಿ ಘಟಕಗಳ ಮುಚ್ಚುವಿಕೆಯಂತಹ ಘಟನೆಗಳಿಗೆ ವಿರೋಧ ಪಕ್ಷಗಳು, ವೈದ್ಯರು ಮತ್ತು ದಾದಿಯರು ಮಾಜಿ ಆರೋಗ್ಯ ಸಚಿವೆಯ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದೂ ವರದಿಯಾಗಿದೆ.

ಬೇಸಿಗೆ ರಜೆಯಲ್ಲಿ ಹಲವಾರು ಆಸ್ಪತ್ರೆಗಳನ್ನು ಸಾಕಷ್ಟು ವೈದ್ಯರು ಇಲ್ಲದ ಕಾರಣ ತುರ್ತು ಪ್ರಸೂತಿ ಸೇವೆಗಳನ್ನು ವಿಶೇಷವಾಗಿ ವಾರಾಂತ್ಯದಲ್ಲಿ ಮುಚ್ಚಲು ಸರ್ಕಾರ ಕ್ರಮ ಕೈಗೊಂಡಿತ್ತು. ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಪುರಸಭೆಗಳು ಆರೋಗ್ಯ ಸಚಿವರನ್ನು ಟೀಕಿಸಿದ್ದವು. ಗರ್ಭಿಣಿಯರು ಕೆಲವೊಮ್ಮೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಅಪಾಯವನ್ನು ಎದುರಿಸುವಂತಾಗಿತ್ತು.

ಡಾ. ಮಾರ್ಟಾ ಟೆಮಿಡೋ ಅವರು ಪ್ರಸ್ತುತ ಬಿಕ್ಕಟ್ಟನ್ನು ಪರಿಹರಿಸಲು ಯಾವುದೇ ಮಾರ್ಗವನ್ನು ಹೊಂದಿಲ್ಲದ ಕಾರಣ ರಾಜೀನಾಮೆ ನೀಡಿದ್ದಾರೆ ಎಂದು ಪೋರ್ಚುಗೀಸ್ ವೈದ್ಯರ ಸಂಘದ ಅಧ್ಯಕ್ಷ ಮಿಗುಯೆಲ್ ಗೈಮಾರೆಸ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ