AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್​ ಲಸಿಕೆ ಸ್ವೀಕರಿಸಿದ 48 ಗಂಟೆಯಲ್ಲಿ ಆರೋಗ್ಯ ಕಾರ್ಯಕರ್ತೆ ಸಾವು.. ಕಾರಣಕ್ಕಾಗಿ ಹುಡುಕಾಟ

ಫೈಜರ್​ ಸಂಸ್ಥೆಯ ಲಸಿಕೆ ಸ್ವೀಕರಿಸಿದ ಹಲವರಲ್ಲಿ ಸಮಸ್ಯೆ ತಲೆದೋರಿರುವ ಕುರಿತು ಈ ಹಿಂದೆ ವರದಿಗಳಾಗಿದ್ದವು. ಆದರೆ, ಈ ಪ್ರಕರಣದಲ್ಲಿ ಕೊರೊನಾ ಲಸಿಕೆ ಸ್ವೀಕರಿಸಿದ ನಂತರ ಸೋನಿಯಾ ಆರೋಗ್ಯದಲ್ಲಿ ಏರುಪೇರಾಗಿರುವ ಲಕ್ಷಣಗಳೇನೂ ಕಂಡುಬಂದಿರಲಿಲ್ಲ.

ಫೈಜರ್​ ಲಸಿಕೆ ಸ್ವೀಕರಿಸಿದ 48 ಗಂಟೆಯಲ್ಲಿ ಆರೋಗ್ಯ ಕಾರ್ಯಕರ್ತೆ ಸಾವು.. ಕಾರಣಕ್ಕಾಗಿ ಹುಡುಕಾಟ
ಸಾವಿಗೀಡಾದ ಸೋನಿಯಾ ಅಕೆವೆಡೋ
Skanda
|

Updated on:Jan 05, 2021 | 1:27 PM

Share

ಲಿಸ್ಬನ್​: ಫೈಜರ್​ ಸಂಸ್ಥೆಯ ಕೊವಿಡ್​ ಲಸಿಕೆ ಸ್ವೀಕರಿಸಿದ್ದ ಆರೋಗ್ಯ ಕಾರ್ಯಕರ್ತೆ ಇದ್ದಕ್ಕಿದ್ದಂತೆ ಮೃತಪಟ್ಟಿರುವ ಆಘಾತಕಾರಿ ಘಟನೆ ಪೋರ್ಚುಗಲ್​ನಲ್ಲಿ ನಡೆದಿದೆ. 41 ವರ್ಷ ವಯಸ್ಸಿನ ಆರೋಗ್ಯ ಕಾರ್ಯಕರ್ತೆ, ಸೋನಿಯಾ ಅಕೆವೆಡೋ ಎಂಬಾಕೆ ಲಸಿಕೆ ಸ್ವೀಕರಿಸಿದ 48 ಗಂಟೆಯಲ್ಲಿ ಸಾವಿಗೀಡಾಗಿದ್ದಾಳೆ.

ಫೈಜರ್​ ಸಂಸ್ಥೆಯ ಲಸಿಕೆ ಸ್ವೀಕರಿಸಿದ ಹಲವರಲ್ಲಿ ಸಮಸ್ಯೆ ತಲೆದೋರಿರುವ ಕುರಿತು ಈ ಹಿಂದೆ ವರದಿಗಳಾಗಿದ್ದವು. ಆದರೆ, ಈ ಪ್ರಕರಣದಲ್ಲಿ ಕೊರೊನಾ ಲಸಿಕೆ ಸ್ವೀಕರಿಸಿದ ನಂತರ ಸೋನಿಯಾ ಆರೋಗ್ಯದಲ್ಲಿ ಏರುಪೇರಾಗಿರುವ ಲಕ್ಷಣಗಳೇನೂ ಕಂಡುಬಂದಿರಲಿಲ್ಲ. ಅದಾಗ್ಯೂ ಆಕೆಯ ಸಾವಿಗೆ ಕಾರಣಗಳೇನು? ಲಸಿಕೆಯಿಂದ ಸಾವು ಸಂಭವಿಸಿರಬಹುದೇ? ಎಂಬ ವಿಚಾರಗಳು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಬಯಲಾಗಬೇಕಿದೆ.

ಸೋನಿಯಾ ಅಕಾಲಿಕ ಸಾವಿನಿಂದ ದಿಗ್ಭ್ರಾಂತರಾಗಿರುವ ಆಕೆಯ ತಂದೆ ಅಬಿಲಿಯೋ ಅಕೆವೆಡೋ, ತನ್ನ ಮಗಳಿಗೆ ಯಾವುದೇ ಸಮಸ್ಯೆಗಳಿರಲಿಲ್ಲ. ಲಸಿಕೆ ಸ್ವೀಕರಿಸಿದ ನಂತರವೂ ಸಮಸ್ಯೆಗಳೇನೂ ಕಂಡುಬಂದಿಲ್ಲ. ಆಕೆ ಯಾವ ಕಾರಣದಿಂದ ಸಾವನ್ನಪ್ಪಿದ್ದಾಳೆ ಎಂದು ನನಗೆ ಗೊತ್ತಾಗುತ್ತಿಲ್ಲ. ಸದ್ಯಕ್ಕೆ ನನಗೆ ನನ್ನ ಮಗಳ ಸಾವು ಹೇಗಾಯಿತು ಎಂದು ಉತ್ತರ ಬೇಕಿದೆ ಎಂದು ಹೇಳಿರುವುದಾಗಿ ಡೈಲಿಮೇಲ್​ ವರದಿ ಮಾಡಿದೆ.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

Published On - 1:24 pm, Tue, 5 January 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ