AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ

ಜಪಾನ್‌ನಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಲ್ಲಿನ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಪೆಸಿಫಿಕ್ ಮಹಾಸಾಗರದ ಆಳದಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇಂದು ಹೊನ್ಶು ದ್ವೀಪದಾದ್ಯಂತ ಕಂಪನ ಉಂಟಾಗಿದೆ. ಜಪಾನ್‌ನ ಉತ್ತರ ಪ್ರದೇಶವಾದ ಇವಾಟೆ, ಅಮೋರಿ ಮತ್ತು ಹೊಕ್ಕೈಡೊಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.

Japan Earthquake: ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ
Japan Earthquake
ಸುಷ್ಮಾ ಚಕ್ರೆ
|

Updated on: Apr 20, 2026 | 4:12 PM

Share

ಟೋಕಿಯೋ, ಏಪ್ರಿಲ್ 20: ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಇಂದು 7.4 ತೀವ್ರತೆಯ ಪ್ರಬಲ ಭೂಕಂಪ (Japan Earthquake) ಸಂಭವಿಸಿದೆ. ಇದರಿಂದ ದೇಶಾದ್ಯಂತ ಆತಂಕ ಉಂಟಾಗಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ. ಅಧಿಕಾರಿಗಳು ಕರಾವಳಿ ಪ್ರದೇಶಗಳಿಂದ ದೂರ ಹೋಗುವಂತೆ ನಿವಾಸಿಗಳನ್ನು ಒತ್ತಾಯಿಸಿದ್ದಾರೆ. ಅಲೆಗಳು ದಡವನ್ನು ತಲುಪುವ ನಿರೀಕ್ಷೆಯಿರುವುದರಿಂದ ಕರಾವಳಿ ವಲಯಗಳಿಂದ ದೂರವಿರಲು ಅಧಿಕಾರಿಗಳು ನಿವಾಸಿಗಳಿಗೆ ಎಚ್ಚರಿಕೆ ನೀಡಿದರು.

3 ಮೀಟರ್ (ಸುಮಾರು 10 ಅಡಿ)ವರೆಗಿನ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ವಲಯದ ನಿವಾಸಿಗಳು ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, ಸಮುದ್ರದೊಳಗಿನ ಭೂಕಂಪನವು ಸ್ಥಳೀಯ ಸಮಯ ಸಂಜೆ 4.53ಕ್ಕೆ ಇವಾಟೆ ಕರಾವಳಿಯಿಂದ ಕೇವಲ 10 ಕಿಲೋಮೀಟರ್ (ಸುಮಾರು 6 ಮೈಲುಗಳು) ಆಳದಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ 114 ಭಾರಿ ಭೂಕಂಪ: ಉತ್ತರ ಕರ್ನಾಟಕ ಭಾಗದಲ್ಲೇ ಹೆಚ್ಚು; ಕಾರಣ ಏನು?

ಈ ಭೂಕಂಪ ಸಂಭವಿಸಿದ ಕೂಡಲೆ ಜಪಾನ್ ಪ್ರಧಾನಿ ಸನೇ ತಕೈಚಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ತುರ್ತು ಕಾರ್ಯಪಡೆಯ ನಿಯೋಜನೆಯನ್ನು ದೃಢಪಡಿಸಿದರು. ಭೂಕಂಪಪೀಡಿತ ಪ್ರದೇಶಗಳಲ್ಲಿ ತಕ್ಷಣದ ಸ್ಥಳಾಂತರಿಸುವಿಕೆಯ ನಿರ್ಣಾಯಕ ಅಗತ್ಯವನ್ನು ಅವರು ಪುನರುಚ್ಚರಿಸಿದರು. ಸುನಾಮಿಯ ಸಾಧ್ಯತೆಯಿದೆ. ತಕ್ಷಣ ಕರಾವಳಿ ತೀರದಿಂದ ಜನರು ಸ್ಥಳಾಂತರಗೊಳ್ಳಿರಿ. ಮುಂದಿನ ಸೂಚನೆ ಬರುವವರೆಗೂ ವಾಪಾಸ್ ಬರಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಭೂಕಂಪನದ ನಂತರ ಟೋಕಿಯೊ ಮತ್ತು ಅಮೋರಿ ನಡುವಿನ ಬುಲೆಟ್ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ
ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ
"ಬ್ರೋ ಕೊನೆಗೂ ಪ್ರೀತಿ ಜಿಂಟಾ ಅಪ್ಪುಗೆ ಸಿಕ್ತು!"