AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜ್ಬೇಕಿಸ್ತಾನದಲ್ಲಿ ಪ್ರಬಲ ಸ್ಫೋಟ, ಓರ್ವ ಸಾವು, 162 ಮಂದಿಗೆ ಗಾಯ

ಉಜ್ಬೇಕಿಸ್ತಾನದ ತಾಷ್ಕೆಂಟ್ ವಿಮಾನ ನಿಲ್ದಾಣದ ಸಮೀಪವಿರುವ ಗೋದಾಮಿನಲ್ಲಿ ಗುರುವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 162 ಮಂದಿ ಗಾಯಗೊಂಡಿದ್ದಾರೆ. ಹತ್ತಿರವಿದ್ದ ಕಟ್ಟಡಕ್ಕೆಲ್ಲಾ ಬೆಂಕಿ ತನ್ನ ಕೆನ್ನಾಲಿಗೆ ಚಾಚಿತ್ತು, ಅಪಾರ್ಟ್​ಮೆಂಟ್​ಗೂ ಬೆಂಕಿ ತಗುಲಿ ಕಿಟಕಿ ಗಾಜುಗಳೆಲ್ಲಾ ಪುಡಿಪುಡಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಜ್ಬೇಕಿಸ್ತಾನದಲ್ಲಿ ಪ್ರಬಲ ಸ್ಫೋಟ, ಓರ್ವ ಸಾವು, 162 ಮಂದಿಗೆ ಗಾಯ
ಸ್ಫೋಟ-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Sep 28, 2023 | 2:34 PM

Share

ಉಜ್ಬೇಕಿಸ್ತಾನದ ತಾಷ್ಕೆಂಟ್ ವಿಮಾನ ನಿಲ್ದಾಣದ ಸಮೀಪವಿರುವ ಗೋದಾಮಿನಲ್ಲಿ ಗುರುವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 162 ಮಂದಿ ಗಾಯಗೊಂಡಿದ್ದಾರೆ. ಹತ್ತಿರವಿದ್ದ ಕಟ್ಟಡಕ್ಕೆಲ್ಲಾ ಬೆಂಕಿ ತನ್ನ ಕೆನ್ನಾಲಿಗೆ ಚಾಚಿತ್ತು, ಅಪಾರ್ಟ್​ಮೆಂಟ್​ಗೂ ಬೆಂಕಿ ತಗುಲಿ ಕಿಟಕಿ ಗಾಜುಗಳೆಲ್ಲಾ ಪುಡಿಪುಡಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಟಕಿಯ ಚೌಕಟ್ಟು ಓರ್ವನ ಮೇಲೆ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ, 24 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ, 138 ಜನರು ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ.

ರಾಜಧಾನಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಆಡಳಿತ ತಿಳಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಮತ್ತು ಚಿತ್ರಗಳಲ್ಲಿ, ಗೋದಾಮಿನ ಮೇಲೆ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಯನ್ನು ನೊಡಬಹುದು, ಸ್ಫೋಟಕ್ಕೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಸ್ಫೋಟದ ತನಿಖೆಗಾಗಿ ಘಟನಾ ಸ್ಥಳದಲ್ಲಿ ವಿಶೇಷ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ ಎಂದು ತುರ್ತು ಸಚಿವಾಲಯ ತಿಳಿಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ.

16 ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಸಮೀಪವಿರುವ ನಗರದ ಸೆರ್ಗೆಲಿ ಜಿಲ್ಲೆಯ ಗೋದಾಮಿನಲ್ಲಿ ಬೆಂಕಿಯ ವಿರುದ್ಧ ಹೋರಾಡಲು ಕಳುಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!